<p><strong>ಬ್ಯಾಡಗಿ</strong>: ತಾಲ್ಲೂಕಿನ ಮಲ್ಲೂರು ಹಾಗೂ ಶಂಕ್ರಿಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣ ವಾಗಿ ನಿಷೇಧಿಸಿ ಪಾನಮುಕ್ತ ಗ್ರಾಮವನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಗುರುವಾರ ಮಲ್ಲೂರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. <br /> <br /> ಎರಡೂ ಗ್ರಾಮಗಳ ಮಹಿಳೆಯರು ಸಾಮಾಜಿಕ ಕಾರ್ಯಕರ್ತೆ ವನಿತಾ ಗುತ್ತಲ ಅವರ ನೇತೃತ್ವದಲ್ಲಿ ಮೆರವಣೆಗೆ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ವಿಫಲ ರಾಗಿರುವ ಅಬಕಾರಿ ಅಧಿಕಾರಿಯನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿ ಸಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ರಮ ಮದ್ಯ ಮಾರಾಟದಿಂದ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕುಡಿಯುವವರ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಯುವಕರೇ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. <br /> <br /> ಬಾರ್ ಮಾಲೀಕ ರೊಂದಿಗೆ ಶಾಮೀಲಾಗಿರುವ ಅಬಕಾರಿ ಅಧಿಕಾರಿಗಳು ಗ್ರಾಮದ ಗೂಡಂಗಡಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ದರು. <br /> <br /> ಅಕ್ರಮ ಮದ್ಯ ಮಾರಾಟವನ್ನು ತಡೆ ಗಟ್ಟಲು ಕಠಿಣ ಕ್ರಮಗಳನ್ನು ತೆಗೆದು ಕೊಳ್ಳುವಲ್ಲಿ ಸ್ಥಳೀಯ ಶಾಸಕರು ವಿಫಲ ವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಮನೆ ಎದುರಿಗೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು. <br /> <br /> ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಜಾಧವ, ಸಾವಿತ್ರಾ ಕಮ್ಮಾರ, ನಾಗವೇಣಿ ಸಾಳುಂಕೆ, ಶಾರದಾ ಡಿಸ್ಲೆ, ರತ್ನವ್ವ ಚಲವಾದಿ, ಲತಾ ಸಂಕಣ್ಣನವರ, ಪ್ರೇಮಾ ಕೋಟಿ, ಸಾವಿತ್ರಾ ಬಡಿಗೇರ, ಅಕ್ಕಮ್ಮ ಶಿವಣ್ಣನವರ ಮತ್ತಿತರರು ಪಾಲ್ಗೊಂಡಿದ್ದರು.<br /> <br /> ತಹಶೀಲ್ದಾರರ ಪರವಾಗಿ ಕಂದಾಯ ನಿರೀಕ್ಷಕ ಭೋಗಾರ ಅವರು ಮನವಿ ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ತಾಲ್ಲೂಕಿನ ಮಲ್ಲೂರು ಹಾಗೂ ಶಂಕ್ರಿಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣ ವಾಗಿ ನಿಷೇಧಿಸಿ ಪಾನಮುಕ್ತ ಗ್ರಾಮವನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಗುರುವಾರ ಮಲ್ಲೂರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. <br /> <br /> ಎರಡೂ ಗ್ರಾಮಗಳ ಮಹಿಳೆಯರು ಸಾಮಾಜಿಕ ಕಾರ್ಯಕರ್ತೆ ವನಿತಾ ಗುತ್ತಲ ಅವರ ನೇತೃತ್ವದಲ್ಲಿ ಮೆರವಣೆಗೆ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ವಿಫಲ ರಾಗಿರುವ ಅಬಕಾರಿ ಅಧಿಕಾರಿಯನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿ ಸಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ರಮ ಮದ್ಯ ಮಾರಾಟದಿಂದ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕುಡಿಯುವವರ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಯುವಕರೇ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. <br /> <br /> ಬಾರ್ ಮಾಲೀಕ ರೊಂದಿಗೆ ಶಾಮೀಲಾಗಿರುವ ಅಬಕಾರಿ ಅಧಿಕಾರಿಗಳು ಗ್ರಾಮದ ಗೂಡಂಗಡಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ದರು. <br /> <br /> ಅಕ್ರಮ ಮದ್ಯ ಮಾರಾಟವನ್ನು ತಡೆ ಗಟ್ಟಲು ಕಠಿಣ ಕ್ರಮಗಳನ್ನು ತೆಗೆದು ಕೊಳ್ಳುವಲ್ಲಿ ಸ್ಥಳೀಯ ಶಾಸಕರು ವಿಫಲ ವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಮನೆ ಎದುರಿಗೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು. <br /> <br /> ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಜಾಧವ, ಸಾವಿತ್ರಾ ಕಮ್ಮಾರ, ನಾಗವೇಣಿ ಸಾಳುಂಕೆ, ಶಾರದಾ ಡಿಸ್ಲೆ, ರತ್ನವ್ವ ಚಲವಾದಿ, ಲತಾ ಸಂಕಣ್ಣನವರ, ಪ್ರೇಮಾ ಕೋಟಿ, ಸಾವಿತ್ರಾ ಬಡಿಗೇರ, ಅಕ್ಕಮ್ಮ ಶಿವಣ್ಣನವರ ಮತ್ತಿತರರು ಪಾಲ್ಗೊಂಡಿದ್ದರು.<br /> <br /> ತಹಶೀಲ್ದಾರರ ಪರವಾಗಿ ಕಂದಾಯ ನಿರೀಕ್ಷಕ ಭೋಗಾರ ಅವರು ಮನವಿ ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>