<p><strong>ಚಿಕ್ಕಬಳ್ಳಾಪುರ:</strong> ನಗರದ ಅಂಬೇಡ್ಕರ್ ಕಾಲೊನಿ (ವಾರ್ಡ್ ಸಂಖ್ಯೆ–30) ವ್ಯಾಪ್ತಿಯ ಮನೆ ಮತ್ತು ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಬಾರದು ಎಂದು ಮಹಿಳೆಯರು ಭಾನುವಾರ ಮೆರವಣಿಗೆ ನಡೆಸಿದರು.<br /> <br /> ನಂತರ ಕಾಲೊನಿಯ ಸಮುದಾಯ ಭವನದಲ್ಲಿ ಸಭೆ ನಡೆಸಿದ ಮಹಿಳೆಯರು, ಬಹುತೇಕ ಯುವಜನರು ಮದ್ಯಕ್ಕೆ ದಾಸರಾಗುತ್ತಿದ್ದಾರೆ. ಮದ್ಯದ ದುಶ್ಚಟದಿಂದ ಯುವಜನರು ಕೆಲಸಕ್ಕೆ ಹೋಗುತ್ತಿಲ್ಲ. ಜೀವನ ಹಾಳು ಮಾಡಿಕೊಳ್ಳುತ್ತಿರುವ ಅವರು ಕುಟುಂಬ ಸದಸ್ಯರಿಗೂ ತೊಂದರೆ ನೀಡುತ್ತಿದ್ದಾರೆ ಎಂದರು.<br /> <br /> ಕಾಲೊನಿ ನಿವಾಸಿ ಕೆ.ಸಿ.ಲಕ್ಷ್ಮಮ್ಮ ಮಾತನಾಡಿ, ಕಾಲೊನಿ ವ್ಯಾಪ್ತಿಯಲ್ಲಿ 500 ಮನೆಗಳಿದ್ದು, 10ಕ್ಕೂ ಹೆಚ್ಚು ಮನೆ ಮತ್ತು ಅಂಗಡಿಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಲಾಗುತ್ತಿದೆ ಎಂದು ತಿಳಿಸಿದರು.<br /> <br /> ಪೊಲೀಸರು, ಅಬಕಾರಿ ಇಲಾಖೆಯವರು ಎಚ್ಚರಿಕೆ ನೀಡಿದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದರ ಹಿನ್ನೆಲೆಯಲ್ಲಿ ನಾವೇ ಅವರಿಗೆ ಎಚ್ಚರಿಕೆ ನೀಡಬೇಕು. ಮದ್ಯ ಮಾರಾಟ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಬೇಕು ಎಂದರು.<br /> <br /> ನಿವಾಸಿ ಎಸ್.ಮಂಜುಳಾ ಮಾತನಾಡಿ, ಸುಮಾರು 30 ರಿಂದ 35 ವರ್ಷದೊಳಗಿನ ಯುವಜನರೇ ಮದ್ಯಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಬೆಳಿಗ್ಗೆ ಚಹಾ ಅಥವಾ ಕಾಫಿ ಸೇವಿಸುವ ಬದಲು ಮದ್ಯ ಸೇವಿಸುವುದನ್ನೇ ರೂಢಿ ಮಾಡಿಕೊಂಡಿದ್ದಾರೆ.<br /> <br /> ಮನೆಯಲ್ಲಿ ಕುಟುಂಬ ಸದಸ್ಯರ ಮೇಲೆ ದೌರ್ಜನ್ಯ ಎಸಗುವ ಅವರು ನಶೆ ಏರಿಸಿಕೊಂಡು ಎಲ್ಲಿ ಬೇಕೆಂದಲ್ಲಿ ಬಿದ್ದು ಜೀವನವನ್ನೇ ನಾಶಪಡಿಸಿಕೊಳ್ಳುತ್ತಿದ್ದಾರೆ. ಹಿರಿಯರ ಮಾತುಗಳನ್ನು ಸಹ ಕೇಳುವ ಸ್ಥಿತಿಯಲ್ಲಿ ಅವರಿಲ್ಲ ಎಂದರು. ನಿವಾಸಿಗಳಾದ ಶಕುಂತಲಮ್ಮ, ಪದ್ಮಮ್ಮ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಅಂಬೇಡ್ಕರ್ ಕಾಲೊನಿ (ವಾರ್ಡ್ ಸಂಖ್ಯೆ–30) ವ್ಯಾಪ್ತಿಯ ಮನೆ ಮತ್ತು ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಬಾರದು ಎಂದು ಮಹಿಳೆಯರು ಭಾನುವಾರ ಮೆರವಣಿಗೆ ನಡೆಸಿದರು.<br /> <br /> ನಂತರ ಕಾಲೊನಿಯ ಸಮುದಾಯ ಭವನದಲ್ಲಿ ಸಭೆ ನಡೆಸಿದ ಮಹಿಳೆಯರು, ಬಹುತೇಕ ಯುವಜನರು ಮದ್ಯಕ್ಕೆ ದಾಸರಾಗುತ್ತಿದ್ದಾರೆ. ಮದ್ಯದ ದುಶ್ಚಟದಿಂದ ಯುವಜನರು ಕೆಲಸಕ್ಕೆ ಹೋಗುತ್ತಿಲ್ಲ. ಜೀವನ ಹಾಳು ಮಾಡಿಕೊಳ್ಳುತ್ತಿರುವ ಅವರು ಕುಟುಂಬ ಸದಸ್ಯರಿಗೂ ತೊಂದರೆ ನೀಡುತ್ತಿದ್ದಾರೆ ಎಂದರು.<br /> <br /> ಕಾಲೊನಿ ನಿವಾಸಿ ಕೆ.ಸಿ.ಲಕ್ಷ್ಮಮ್ಮ ಮಾತನಾಡಿ, ಕಾಲೊನಿ ವ್ಯಾಪ್ತಿಯಲ್ಲಿ 500 ಮನೆಗಳಿದ್ದು, 10ಕ್ಕೂ ಹೆಚ್ಚು ಮನೆ ಮತ್ತು ಅಂಗಡಿಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಲಾಗುತ್ತಿದೆ ಎಂದು ತಿಳಿಸಿದರು.<br /> <br /> ಪೊಲೀಸರು, ಅಬಕಾರಿ ಇಲಾಖೆಯವರು ಎಚ್ಚರಿಕೆ ನೀಡಿದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದರ ಹಿನ್ನೆಲೆಯಲ್ಲಿ ನಾವೇ ಅವರಿಗೆ ಎಚ್ಚರಿಕೆ ನೀಡಬೇಕು. ಮದ್ಯ ಮಾರಾಟ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಬೇಕು ಎಂದರು.<br /> <br /> ನಿವಾಸಿ ಎಸ್.ಮಂಜುಳಾ ಮಾತನಾಡಿ, ಸುಮಾರು 30 ರಿಂದ 35 ವರ್ಷದೊಳಗಿನ ಯುವಜನರೇ ಮದ್ಯಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಬೆಳಿಗ್ಗೆ ಚಹಾ ಅಥವಾ ಕಾಫಿ ಸೇವಿಸುವ ಬದಲು ಮದ್ಯ ಸೇವಿಸುವುದನ್ನೇ ರೂಢಿ ಮಾಡಿಕೊಂಡಿದ್ದಾರೆ.<br /> <br /> ಮನೆಯಲ್ಲಿ ಕುಟುಂಬ ಸದಸ್ಯರ ಮೇಲೆ ದೌರ್ಜನ್ಯ ಎಸಗುವ ಅವರು ನಶೆ ಏರಿಸಿಕೊಂಡು ಎಲ್ಲಿ ಬೇಕೆಂದಲ್ಲಿ ಬಿದ್ದು ಜೀವನವನ್ನೇ ನಾಶಪಡಿಸಿಕೊಳ್ಳುತ್ತಿದ್ದಾರೆ. ಹಿರಿಯರ ಮಾತುಗಳನ್ನು ಸಹ ಕೇಳುವ ಸ್ಥಿತಿಯಲ್ಲಿ ಅವರಿಲ್ಲ ಎಂದರು. ನಿವಾಸಿಗಳಾದ ಶಕುಂತಲಮ್ಮ, ಪದ್ಮಮ್ಮ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>