ಮಧುಮೇಹ: 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನ
ಬೆಂಗಳೂರು: `ಮಧುಮೇಹ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು~ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಹೇಳಿದರು.
ರೋಟರಿ ಬೆಂಗಳೂರು ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
`ಗ್ರಾಮೀಣ ಭಾಗದಲ್ಲಿಯೂ ಮಧುಮೇಹ ರೋಗವು ಕಂಡುಬರುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ರೋಗದ ಬಗ್ಗೆ ಅರಿವು ಇರುವುದಿಲ್ಲ. ಇದರಿಂದ ಸರ್ಕಾರ ಗ್ರಾಮೀಣ ಮಟ್ಟದಲ್ಲಿಯೂ ಇದರ ಬಗ್ಗೆ ಅರಿವು ಮೂಡಿಸಬೇಕು~ ಎಂದರು.
`ಮಧುಮೇಹ ಬಂದ ನಂತರ ಅದನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ, ವೈದ್ಯಕೀಯ ಚಿಕಿತ್ಸೆಯಿಂದ ಅದನ್ನು ನಿಯಂತ್ರಣದಲ್ಲಿಡಬಹುದು. ಜನರಿಗೆ ವೈದ್ಯಕೀಯ ಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸಬೇಕು~ ಎಂದು ಹೇಳಿದರು.
ರಾಜ್ಯದ 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನವನ್ನು ಆಯೋಜಿಸಿ, 1600 ಉಚಿತ ತಪಾಸಣಾ ಶಿಬಿರಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.