<p><strong>ಬೆಂಗಳೂರು: `</strong>ಮಧುಮೇಹ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು~ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಹೇಳಿದರು.<br /> <br /> ರೋಟರಿ ಬೆಂಗಳೂರು ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> `ಗ್ರಾಮೀಣ ಭಾಗದಲ್ಲಿಯೂ ಮಧುಮೇಹ ರೋಗವು ಕಂಡುಬರುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ರೋಗದ ಬಗ್ಗೆ ಅರಿವು ಇರುವುದಿಲ್ಲ. ಇದರಿಂದ ಸರ್ಕಾರ ಗ್ರಾಮೀಣ ಮಟ್ಟದಲ್ಲಿಯೂ ಇದರ ಬಗ್ಗೆ ಅರಿವು ಮೂಡಿಸಬೇಕು~ ಎಂದರು.<br /> <br /> `ಮಧುಮೇಹ ಬಂದ ನಂತರ ಅದನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ, ವೈದ್ಯಕೀಯ ಚಿಕಿತ್ಸೆಯಿಂದ ಅದನ್ನು ನಿಯಂತ್ರಣದಲ್ಲಿಡಬಹುದು. ಜನರಿಗೆ ವೈದ್ಯಕೀಯ ಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸಬೇಕು~ ಎಂದು ಹೇಳಿದರು.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನವನ್ನು ಆಯೋಜಿಸಿ, 1600 ಉಚಿತ ತಪಾಸಣಾ ಶಿಬಿರಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಮಧುಮೇಹ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು~ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಹೇಳಿದರು.<br /> <br /> ರೋಟರಿ ಬೆಂಗಳೂರು ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> `ಗ್ರಾಮೀಣ ಭಾಗದಲ್ಲಿಯೂ ಮಧುಮೇಹ ರೋಗವು ಕಂಡುಬರುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಈ ರೋಗದ ಬಗ್ಗೆ ಅರಿವು ಇರುವುದಿಲ್ಲ. ಇದರಿಂದ ಸರ್ಕಾರ ಗ್ರಾಮೀಣ ಮಟ್ಟದಲ್ಲಿಯೂ ಇದರ ಬಗ್ಗೆ ಅರಿವು ಮೂಡಿಸಬೇಕು~ ಎಂದರು.<br /> <br /> `ಮಧುಮೇಹ ಬಂದ ನಂತರ ಅದನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ, ವೈದ್ಯಕೀಯ ಚಿಕಿತ್ಸೆಯಿಂದ ಅದನ್ನು ನಿಯಂತ್ರಣದಲ್ಲಿಡಬಹುದು. ಜನರಿಗೆ ವೈದ್ಯಕೀಯ ಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸಬೇಕು~ ಎಂದು ಹೇಳಿದರು.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಜಾಗೃತಿ ಅಭಿಯಾನವನ್ನು ಆಯೋಜಿಸಿ, 1600 ಉಚಿತ ತಪಾಸಣಾ ಶಿಬಿರಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>