<p><strong>ಬೆಂಗಳೂರು:</strong> ಜೆಡಿಎಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಿರುವುದು ಸರಿಯಾದ ಕ್ರಮ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.<br /> <br /> ಮಧು ಅವರ ನೇಮಕ ವಿಷಯದಲ್ಲಿ ಗೊಂದಲವಿಲ್ಲ. ಪಕ್ಷದ ವರಿಷ್ಠರೆಲ್ಲ ಸೇರಿ ತೀರ್ಮಾನ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದರು.`<br /> <br /> ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಸಿ.ಮುನಿಕೃಷ್ಣ ಮತ್ತು ಅವರ ಬೆಂಬಲಿಗರನ್ನು ಜೆಡಿಎಸ್ಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, `ಮೂರೂವರೆ ವರ್ಷ ಹುಚ್ಚನಂತೆ ರಾಜ್ಯ ಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಹೇಳಿರುವುದರಿಂದ ಬಿಜೆಪಿ ಸರ್ಕಾರ ಹುಚ್ಚರ ಸಂತೆ ಎಂಬುದು ಸಾಬೀತಾಗಿದೆ~ ಎಂದು ವ್ಯಂಗ್ಯವಾಡಿದರು.<br /> <br /> <strong>ಪ್ರವಾಸ:</strong> ಫೆಬ್ರುವರಿ 10ರಂದು ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸ ಆರಂಭಿಸಲಾಗುವುದು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಮೊದಲಾದವರು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. <br /> <br /> ಬಸನಗೌಡ ಪಾಟೀಲ ಯತ್ನಾಳ್, ಮಧು ಬಂಗಾರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಡಿಎಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಿರುವುದು ಸರಿಯಾದ ಕ್ರಮ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.<br /> <br /> ಮಧು ಅವರ ನೇಮಕ ವಿಷಯದಲ್ಲಿ ಗೊಂದಲವಿಲ್ಲ. ಪಕ್ಷದ ವರಿಷ್ಠರೆಲ್ಲ ಸೇರಿ ತೀರ್ಮಾನ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದರು.`<br /> <br /> ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಸಿ.ಮುನಿಕೃಷ್ಣ ಮತ್ತು ಅವರ ಬೆಂಬಲಿಗರನ್ನು ಜೆಡಿಎಸ್ಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, `ಮೂರೂವರೆ ವರ್ಷ ಹುಚ್ಚನಂತೆ ರಾಜ್ಯ ಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಹೇಳಿರುವುದರಿಂದ ಬಿಜೆಪಿ ಸರ್ಕಾರ ಹುಚ್ಚರ ಸಂತೆ ಎಂಬುದು ಸಾಬೀತಾಗಿದೆ~ ಎಂದು ವ್ಯಂಗ್ಯವಾಡಿದರು.<br /> <br /> <strong>ಪ್ರವಾಸ:</strong> ಫೆಬ್ರುವರಿ 10ರಂದು ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸ ಆರಂಭಿಸಲಾಗುವುದು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಮೊದಲಾದವರು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. <br /> <br /> ಬಸನಗೌಡ ಪಾಟೀಲ ಯತ್ನಾಳ್, ಮಧು ಬಂಗಾರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>