<p><strong>ನವದೆಹಲಿ, (ಪಿಟಿಐ): </strong> ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಶುಕ್ರವಾರ ತಿಳಿಸುವಂತೆ ನ್ಯಾಯಾಲಯವು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.<br /> <br /> ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವುದರಿಂದ ಅವರನ್ನು ತುರ್ತಾಗಿ ಬಿಡುಗಡೆ ಮಾಡುವುದು ಅಗತ್ಯವಾಗಿದ್ದು, ಮಧ್ಯಂತರ ಜಾಮೀನು ನೀಡಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.<br /> <br /> ಈ ತಿಂಗಳ 19ರಂದು ನಡೆಯಲಿರುವ ಜಾಮೀನು ಅರ್ಜಿಯ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರ ಬಯಸಿದ್ದು, ಸಿಂಗ್ ಅವರ ಈಗಿನ ಸ್ಥಿತಿಯಲ್ಲಿ ಜೈಲಿನಲ್ಲಿಯೇ ಬಿಟ್ಟರೆ 19ರಂದು ನ್ಯಾಯಾಲಯಕ್ಕೆ ಹಾಜರಾಗುವ ಸ್ಥಿತಿಯಲ್ಲಿ ಅವರು ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. <br /> <br /> ಆದ್ದರಿಂದ ಮಧ್ಯಂತರ ಜಾಮೀನು ಆದೇಶ ಹೊರಡಿಸಬೇಕು ಎಂದು ವಕೀಲ ಹರಿಹರನ್ ಅವರು ತಿಳಿಸಿದರು.<br /> ಈ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಸಂಗೀತಾ ಧಿಂಗ್ರಾ ಸೆಹಗಲ್ ಅವರು ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶಿಸಿದರು. <br /> <br /> ಮೂತ್ರಪಿಂಡದ ಕಸಿಯ ನಂತರ ಸಿಂಗ್ ಅವರು ಮೂತ್ರನಾಳದ ತೊಂದರೆಯಿಂದ ಬಳಲುತ್ತಿರುವುದರಿಂದ ಜೈಲಿನಲ್ಲಿಯ ಶೌಚಾಲಯ ಬಳಸಿದರೆ ತೊಂದರೆ ಜಾಸ್ತಿಯಾಗುತ್ತದೆ ಹಾಗೂ ಜೀವಕ್ಕೇ ಅಪಾಯವಾಗುವ ಸಾಧ್ಯತೆಗಳು ಇವೆ. ಆದ್ದರಿಂದ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಹರಿಹರನ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ): </strong> ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಶುಕ್ರವಾರ ತಿಳಿಸುವಂತೆ ನ್ಯಾಯಾಲಯವು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.<br /> <br /> ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವುದರಿಂದ ಅವರನ್ನು ತುರ್ತಾಗಿ ಬಿಡುಗಡೆ ಮಾಡುವುದು ಅಗತ್ಯವಾಗಿದ್ದು, ಮಧ್ಯಂತರ ಜಾಮೀನು ನೀಡಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.<br /> <br /> ಈ ತಿಂಗಳ 19ರಂದು ನಡೆಯಲಿರುವ ಜಾಮೀನು ಅರ್ಜಿಯ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರ ಬಯಸಿದ್ದು, ಸಿಂಗ್ ಅವರ ಈಗಿನ ಸ್ಥಿತಿಯಲ್ಲಿ ಜೈಲಿನಲ್ಲಿಯೇ ಬಿಟ್ಟರೆ 19ರಂದು ನ್ಯಾಯಾಲಯಕ್ಕೆ ಹಾಜರಾಗುವ ಸ್ಥಿತಿಯಲ್ಲಿ ಅವರು ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. <br /> <br /> ಆದ್ದರಿಂದ ಮಧ್ಯಂತರ ಜಾಮೀನು ಆದೇಶ ಹೊರಡಿಸಬೇಕು ಎಂದು ವಕೀಲ ಹರಿಹರನ್ ಅವರು ತಿಳಿಸಿದರು.<br /> ಈ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಸಂಗೀತಾ ಧಿಂಗ್ರಾ ಸೆಹಗಲ್ ಅವರು ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶಿಸಿದರು. <br /> <br /> ಮೂತ್ರಪಿಂಡದ ಕಸಿಯ ನಂತರ ಸಿಂಗ್ ಅವರು ಮೂತ್ರನಾಳದ ತೊಂದರೆಯಿಂದ ಬಳಲುತ್ತಿರುವುದರಿಂದ ಜೈಲಿನಲ್ಲಿಯ ಶೌಚಾಲಯ ಬಳಸಿದರೆ ತೊಂದರೆ ಜಾಸ್ತಿಯಾಗುತ್ತದೆ ಹಾಗೂ ಜೀವಕ್ಕೇ ಅಪಾಯವಾಗುವ ಸಾಧ್ಯತೆಗಳು ಇವೆ. ಆದ್ದರಿಂದ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಹರಿಹರನ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>