<p><strong>ಬೆಂಗಳೂರು:</strong> ‘ಕರ್ನಾಟಕದ ಮಧ್ಯ ಭಾಗದಲ್ಲಿ ಜನಪದ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಈ ಸಂಬಂಧ ಈ ವರ್ಷದ ಬಜೆಟ್ನಲ್ಲಿ ಘೋಷಣೆ ಮಾಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಪಡಿಸಿದ್ದಾರೆ.<br /> <br /> ‘ವಿ.ವಿ ಸ್ಥಾಪನೆಗೆ ಕನಿಷ್ಠ 500 ಎಕರೆ ಜಾಗ ಬೇಕಾಗಿದೆ. ಹೀಗಾಗಿ ಹಾವೇರಿಯಲ್ಲಿ ಜಾಗ ಸಿಗಲಿದ್ದು, ಅಲ್ಲೇ ವಿಶ್ವವಿದ್ಯಾಲಯ ಸ್ಥಾಪಿಸುವುದು ಸೂಕ್ತ’ ಎಂದು ಹೇಳಿದರು.ಮುನ್ನೂರಕ್ಕೂ ಹೆಚ್ಚು ಜನಪದ ಕಲೆಗಳು ಜೀವಂತವಾಗಿದ್ದರೂ ವಿನಾಶದ ಅಂಚಿನಲ್ಲಿ ಇವೆ. ಇದೇ ಕಾಲಘಟ್ಟದಲ್ಲಿ 500ಕ್ಕೂ ಹೆಚ್ಚು ಕಲೆಗಳು ನಾಶವಾಗಿವೆ. <br /> <br /> ಇವೆಲ್ಲಕ್ಕೂ ಪುನಶ್ಚೇತನ ನೀಡುವುದಕ್ಕೆ ಜನಪದ ವಿಶ್ವವಿದ್ಯಾಲಯದಂತಹ ಸಂಸ್ಥೆ ಅಗತ್ಯ ಎಂದು ವಿವರಿಸಿದರು. ಕೇವಲ ಘೋಷಣೆಯಿಂದ ಎಲ್ಲವೂ ಈಡೇರುವುದಿಲ್ಲ. ಕನಿಷ್ಠ 100 ಕೋಟಿ ರೂಪಾಯಿ ಮೀಸಲಿಡಬೇಕು ಎಂದೂ ಅವರು ಒತ್ತಾಯಿಸಿದರು.<br /> <br /> <strong>ನುಡಿತೇರು:</strong> ವಿಶ್ವ ಕನ್ನಡ ಸಮ್ಮೇಳನಕ್ಕೆ ಪೂರಕವಾಗಿ ಕನ್ನಡ ನುಡಿತೇರು-ಜಾಗೃತಿ ಜಾಥಾ ಮಂಗಳವಾರದಿಂದ ಫೆ.27ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದೆ.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ನಂದಗಡದಿಂದ ಜಾಥಾಕ್ಕೆ ಚಾಲನೆ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಕೃಷಿ ಸಚಿವ ಉಮೇಶ್ ಕತ್ತಿ, ಸಹಕಾರ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕದ ಮಧ್ಯ ಭಾಗದಲ್ಲಿ ಜನಪದ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಈ ಸಂಬಂಧ ಈ ವರ್ಷದ ಬಜೆಟ್ನಲ್ಲಿ ಘೋಷಣೆ ಮಾಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಪಡಿಸಿದ್ದಾರೆ.<br /> <br /> ‘ವಿ.ವಿ ಸ್ಥಾಪನೆಗೆ ಕನಿಷ್ಠ 500 ಎಕರೆ ಜಾಗ ಬೇಕಾಗಿದೆ. ಹೀಗಾಗಿ ಹಾವೇರಿಯಲ್ಲಿ ಜಾಗ ಸಿಗಲಿದ್ದು, ಅಲ್ಲೇ ವಿಶ್ವವಿದ್ಯಾಲಯ ಸ್ಥಾಪಿಸುವುದು ಸೂಕ್ತ’ ಎಂದು ಹೇಳಿದರು.ಮುನ್ನೂರಕ್ಕೂ ಹೆಚ್ಚು ಜನಪದ ಕಲೆಗಳು ಜೀವಂತವಾಗಿದ್ದರೂ ವಿನಾಶದ ಅಂಚಿನಲ್ಲಿ ಇವೆ. ಇದೇ ಕಾಲಘಟ್ಟದಲ್ಲಿ 500ಕ್ಕೂ ಹೆಚ್ಚು ಕಲೆಗಳು ನಾಶವಾಗಿವೆ. <br /> <br /> ಇವೆಲ್ಲಕ್ಕೂ ಪುನಶ್ಚೇತನ ನೀಡುವುದಕ್ಕೆ ಜನಪದ ವಿಶ್ವವಿದ್ಯಾಲಯದಂತಹ ಸಂಸ್ಥೆ ಅಗತ್ಯ ಎಂದು ವಿವರಿಸಿದರು. ಕೇವಲ ಘೋಷಣೆಯಿಂದ ಎಲ್ಲವೂ ಈಡೇರುವುದಿಲ್ಲ. ಕನಿಷ್ಠ 100 ಕೋಟಿ ರೂಪಾಯಿ ಮೀಸಲಿಡಬೇಕು ಎಂದೂ ಅವರು ಒತ್ತಾಯಿಸಿದರು.<br /> <br /> <strong>ನುಡಿತೇರು:</strong> ವಿಶ್ವ ಕನ್ನಡ ಸಮ್ಮೇಳನಕ್ಕೆ ಪೂರಕವಾಗಿ ಕನ್ನಡ ನುಡಿತೇರು-ಜಾಗೃತಿ ಜಾಥಾ ಮಂಗಳವಾರದಿಂದ ಫೆ.27ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದೆ.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ನಂದಗಡದಿಂದ ಜಾಥಾಕ್ಕೆ ಚಾಲನೆ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಕೃಷಿ ಸಚಿವ ಉಮೇಶ್ ಕತ್ತಿ, ಸಹಕಾರ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>