<p><strong>ಬೆಂಗಳೂರು:</strong> ಬಂದಿಖಾನೆಗಳಲ್ಲಿ ಕೈದಿಗಳಲ್ಲಿ ಮಾದಕ ವಸ್ತುಗಳ ಸೇವನೆ ಪ್ರಮಾಣ ಹೆಚ್ಚುತ್ತಿರುವುದರಿಂದ ಅಪರಾಧಿಗಳ ಮನಪರಿವರ್ತನೆ ಪ್ರಕ್ರಿಯೆಗೆ ಹಿನ್ನಡೆ ಆಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಕಳವಳ ವ್ಯಕ್ತಪಡಿಸಿದರು.<br /> <br /> ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಮಾನಸಿಕ ಆರೋಗ್ಯ ಮತ್ತು ಜೈಲುಗಳಲ್ಲಿ ಬಳಸುವ ಆಹಾರ ಪದಾರ್ಥಗಳಿಂದ ಉಂಟಾಗುವ ಸಮಸ್ಯೆ’ ಕುರಿತ ವಿಭಾಗೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ‘ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗುತ್ತಿದೆ. ಕೈದಿಗಳು ಹೊರಗಡೆ ಇರುವಾಗ ಬಳಸುವ ಮಾದಕ ವಸ್ತುಗಳ ಪ್ರಮಾಣದ ಎರಡರಿಂದ ಮೂರು ಪಟ್ಟು ಹೆಚ್ಚು ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಳಸುತ್ತಿರುವುದು ಕಂಡುಬಂದಿದೆ’ ಎಂದು ಹೇಳಿದರು.<br /> <br /> ಜೈಲುಗಳಲ್ಲಿ ಇರುವ ಕೈದಿಗಳನ್ನು ಸಂಖ್ಯೆಗಳಿಂದಲೇ ಗುರುತಿಸಲಾಗುತ್ತದೆ. ಪರಿಣಾಮವಾಗಿ ಅವರು ಸ್ವಂತಿಕೆ ಕಳೆದುಕೊಂಡಿರುತ್ತಾರೆ. ಅವರು ಮದ್ಯ, ತಂಬಾಕು, ಅಫೀಮು ಮುಂತಾದ ಮಾದಕ ವಸ್ತುಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಕೈದಿಗಳ ಮನ ಪರಿವರ್ತನೆಗೆ ದೊಡ್ಡ ಅಡ್ಡಿಯಾಗುತ್ತದೆ ಎಂದರು.<br /> <br /> ಕಾರಾಗೃಹಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯುವುದು ತುರ್ತು ಅಗತ್ಯ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾ.ಕೇಹರ್ ಎಚ್ಚರಿಕೆ ನೀಡಿದರು.<br /> ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಲ್ತಮಸ್ ಕಬೀರ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ಮಂಜುಳಾ ಚೆಲ್ಲೂರು, ಎನ್.ಕೆ.ಪಾಟೀಲ್, ನಿಮ್ಹಾನ್ಸ್ ನಿರ್ದೇಶಕ ಡಾ.ಪಿ.ಸತೀಶ್ಚಂದ್ರ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ನಿಮ್ಹಾನ್ಸ್ನ ಹೊರ ರೋಗಿಗಳ ಸಂಕೀರ್ಣದಲ್ಲಿ ಸ್ಥಾಪಿಸಿರುವ ‘ಉಚಿತ ಕಾನೂನು ಸೇವಾ ಕ್ಲಿನಿಕ್’ ಅನ್ನು ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಉದ್ಘಾಟಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಂದಿಖಾನೆಗಳಲ್ಲಿ ಕೈದಿಗಳಲ್ಲಿ ಮಾದಕ ವಸ್ತುಗಳ ಸೇವನೆ ಪ್ರಮಾಣ ಹೆಚ್ಚುತ್ತಿರುವುದರಿಂದ ಅಪರಾಧಿಗಳ ಮನಪರಿವರ್ತನೆ ಪ್ರಕ್ರಿಯೆಗೆ ಹಿನ್ನಡೆ ಆಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಕಳವಳ ವ್ಯಕ್ತಪಡಿಸಿದರು.<br /> <br /> ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಮಾನಸಿಕ ಆರೋಗ್ಯ ಮತ್ತು ಜೈಲುಗಳಲ್ಲಿ ಬಳಸುವ ಆಹಾರ ಪದಾರ್ಥಗಳಿಂದ ಉಂಟಾಗುವ ಸಮಸ್ಯೆ’ ಕುರಿತ ವಿಭಾಗೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ‘ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗುತ್ತಿದೆ. ಕೈದಿಗಳು ಹೊರಗಡೆ ಇರುವಾಗ ಬಳಸುವ ಮಾದಕ ವಸ್ತುಗಳ ಪ್ರಮಾಣದ ಎರಡರಿಂದ ಮೂರು ಪಟ್ಟು ಹೆಚ್ಚು ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಳಸುತ್ತಿರುವುದು ಕಂಡುಬಂದಿದೆ’ ಎಂದು ಹೇಳಿದರು.<br /> <br /> ಜೈಲುಗಳಲ್ಲಿ ಇರುವ ಕೈದಿಗಳನ್ನು ಸಂಖ್ಯೆಗಳಿಂದಲೇ ಗುರುತಿಸಲಾಗುತ್ತದೆ. ಪರಿಣಾಮವಾಗಿ ಅವರು ಸ್ವಂತಿಕೆ ಕಳೆದುಕೊಂಡಿರುತ್ತಾರೆ. ಅವರು ಮದ್ಯ, ತಂಬಾಕು, ಅಫೀಮು ಮುಂತಾದ ಮಾದಕ ವಸ್ತುಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಕೈದಿಗಳ ಮನ ಪರಿವರ್ತನೆಗೆ ದೊಡ್ಡ ಅಡ್ಡಿಯಾಗುತ್ತದೆ ಎಂದರು.<br /> <br /> ಕಾರಾಗೃಹಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯುವುದು ತುರ್ತು ಅಗತ್ಯ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾ.ಕೇಹರ್ ಎಚ್ಚರಿಕೆ ನೀಡಿದರು.<br /> ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಲ್ತಮಸ್ ಕಬೀರ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ಮಂಜುಳಾ ಚೆಲ್ಲೂರು, ಎನ್.ಕೆ.ಪಾಟೀಲ್, ನಿಮ್ಹಾನ್ಸ್ ನಿರ್ದೇಶಕ ಡಾ.ಪಿ.ಸತೀಶ್ಚಂದ್ರ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ನಿಮ್ಹಾನ್ಸ್ನ ಹೊರ ರೋಗಿಗಳ ಸಂಕೀರ್ಣದಲ್ಲಿ ಸ್ಥಾಪಿಸಿರುವ ‘ಉಚಿತ ಕಾನೂನು ಸೇವಾ ಕ್ಲಿನಿಕ್’ ಅನ್ನು ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಉದ್ಘಾಟಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>