<p>ಬೆಂಗಳೂರು: ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಇಕ್ಕಟ್ಟಿಗೆ ಸಿಲುಕಿರುವ ಬಿಜೆಪಿ, ಅವರ ಮನವೊಲಿಕೆ ಕಸರತ್ತು ಆರಂಭಿಸಿದೆ. <br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಭಾನುವಾರ ಹೈದರಾಬಾದ್ ಪ್ರವಾಸ ಮೊಟಕುಗೊಳಿಸಿ, ಶ್ರೀರಾಮುಲು ರಾಜೀನಾಮೆ ನಿರ್ಧಾರ ಮತ್ತು ಅದರಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಸಚಿವರಾದ ಸಿ.ಎಂ.ಉದಾಸಿ, ಎಸ್.ಸುರೇಶ್ಕುಮಾರ್, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ ಮತ್ತಿತರರ ಜೊತೆ ಚರ್ಚಿಸಿದರು.<br /> <br /> ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ಶ್ರೀರಾಮುಲು ಅವರ ರಾಜೀನಾಮೆ ನಿರ್ಧಾರದ ಬಗ್ಗೆ ಮಾಧ್ಯಮಗಳಿಂದಲೇ ನನಗೆ ವಿಷಯ ತಿಳಿದಿದೆ. ಅವರನ್ನು ಮನವೊಲಿಸುವ ಕೆಲಸ ಆರಂಭವಾಗಿದೆ. ಅದರಲ್ಲಿ ಪಕ್ಷ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ನನಗಿದೆ~ ಎಂದರು.<br /> <br /> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶನಿವಾರವೇ ಶ್ರೀರಾಮುಲು ಅವರನ್ನು ಸಂಪರ್ಕಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸದಂತೆ ಸೂಚಿಸಿದ್ದರು. ಈಗ ಮತ್ತೊಮ್ಮೆ ಮನವೊಲಿಕೆಗೆ ಪ್ರಯತ್ನಿಸಲು ನಿರ್ಧರಿಸಿದ್ದಾರೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, `ಶ್ರೀರಾಮುಲು ಅವರ ರಾಜೀನಾಮೆ ಅಂಗೀಕಾರವಾಗುವುದಿಲ್ಲ~ ಎಂದು ಹೇಳಿದ್ದಾರೆ. <br /> <br /> <strong>ಹೈಕಮಾಂಡ್ನಿಂದಲೂ ಯತ್ನ:</strong> ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ಬೆಳಿಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಇಕ್ಕಟ್ಟಿಗೆ ಸಿಲುಕಿರುವ ಬಿಜೆಪಿ, ಅವರ ಮನವೊಲಿಕೆ ಕಸರತ್ತು ಆರಂಭಿಸಿದೆ. <br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಭಾನುವಾರ ಹೈದರಾಬಾದ್ ಪ್ರವಾಸ ಮೊಟಕುಗೊಳಿಸಿ, ಶ್ರೀರಾಮುಲು ರಾಜೀನಾಮೆ ನಿರ್ಧಾರ ಮತ್ತು ಅದರಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಸಚಿವರಾದ ಸಿ.ಎಂ.ಉದಾಸಿ, ಎಸ್.ಸುರೇಶ್ಕುಮಾರ್, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ ಮತ್ತಿತರರ ಜೊತೆ ಚರ್ಚಿಸಿದರು.<br /> <br /> ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ಶ್ರೀರಾಮುಲು ಅವರ ರಾಜೀನಾಮೆ ನಿರ್ಧಾರದ ಬಗ್ಗೆ ಮಾಧ್ಯಮಗಳಿಂದಲೇ ನನಗೆ ವಿಷಯ ತಿಳಿದಿದೆ. ಅವರನ್ನು ಮನವೊಲಿಸುವ ಕೆಲಸ ಆರಂಭವಾಗಿದೆ. ಅದರಲ್ಲಿ ಪಕ್ಷ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ನನಗಿದೆ~ ಎಂದರು.<br /> <br /> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶನಿವಾರವೇ ಶ್ರೀರಾಮುಲು ಅವರನ್ನು ಸಂಪರ್ಕಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸದಂತೆ ಸೂಚಿಸಿದ್ದರು. ಈಗ ಮತ್ತೊಮ್ಮೆ ಮನವೊಲಿಕೆಗೆ ಪ್ರಯತ್ನಿಸಲು ನಿರ್ಧರಿಸಿದ್ದಾರೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, `ಶ್ರೀರಾಮುಲು ಅವರ ರಾಜೀನಾಮೆ ಅಂಗೀಕಾರವಾಗುವುದಿಲ್ಲ~ ಎಂದು ಹೇಳಿದ್ದಾರೆ. <br /> <br /> <strong>ಹೈಕಮಾಂಡ್ನಿಂದಲೂ ಯತ್ನ:</strong> ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ಬೆಳಿಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>