<p><strong>ಹಿರಿಯೂರು (ಚಿತ್ರದುರ್ಗ ಜಿಲ್ಲೆ):</strong> ಇತ್ತೀಚೆಗೆ ವಿಶ್ವಕಪ್ ಕಬಡ್ಡಿ ಗೆದ್ದ ಭಾರತ ತಂಡದ ನಾಯಕಿ ಉಡುಪಿಯ ಮಮತಾ ಪೂಜಾರ್ ಅವರಿಗೆ ಸರ್ಕಾರ ರೂ. 1 ಕೋಟಿ ಬಹುಮಾನ ಘೋಷಣೆ ಮಾಡಬೇಕು ಎಂದು ರಾಜ್ಯ ಕಬಡ್ಡಿ ಸಂಸ್ಥೆ ಅಧ್ಯಕ್ಷ ಎಂ. ಹನುಮಂತೇಗೌಡ ಒತ್ತಾಯ ಮಾಡಿದರು.<br /> <br /> ನಗರದ ನೆಹರು ಮೈದಾನದಲ್ಲಿ ಭಾನುವಾರ ನ್ಯೂಡೈಮಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ಕಬಡ್ಡಿ ಸಂಸ್ಥೆ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ವಿಶ್ವಕಪ್ ಕಬಡ್ಡಿ ತಂಡದಲ್ಲಿದ್ದ ನೆರೆಯ ರಾಜ್ಯದ ಆಟಗಾರ್ತಿಯರಿಗೆ ಅಲ್ಲಿನ ಸರ್ಕಾರ ತಲಾ ರೂ. 1 ಕೋಟಿ ಬಹುಮಾನ ನೀಡಿವೆ. ನಮ್ಮ ಸರ್ಕಾರ ಕೇವಲ ರೂ. 5 ಲಕ್ಷ ನೀಡಿದ್ದು, ನಮ್ಮ ರಾಜ್ಯದ ಕ್ರೀಡಾಪಟುವಿಗೆ ಅನ್ಯಾಯ ಮಾಡಿದಂತೆ ಆಗಿದೆ. ನಮ್ಮ ಸರ್ಕಾರವೂ ರೂ. 1 ಕೋಟಿ ಬಹುಮಾನ ನೀಡುವ ಮೂಲಕ ಅಪ್ಪಟ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿಗೆ ಪ್ರೋತ್ಸಾಹ ನೀಡಬೇಕು ಎಂದರು. ಮಮತಾ ಪೂಜಾರಿ ಅವರಿಗೆ ರಾಜ್ಯ ಕಬಡ್ಡಿ ಸಂಸ್ಥೆ ವತಿಯಿಂದ ರೂ. 50 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರು ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು (ಚಿತ್ರದುರ್ಗ ಜಿಲ್ಲೆ):</strong> ಇತ್ತೀಚೆಗೆ ವಿಶ್ವಕಪ್ ಕಬಡ್ಡಿ ಗೆದ್ದ ಭಾರತ ತಂಡದ ನಾಯಕಿ ಉಡುಪಿಯ ಮಮತಾ ಪೂಜಾರ್ ಅವರಿಗೆ ಸರ್ಕಾರ ರೂ. 1 ಕೋಟಿ ಬಹುಮಾನ ಘೋಷಣೆ ಮಾಡಬೇಕು ಎಂದು ರಾಜ್ಯ ಕಬಡ್ಡಿ ಸಂಸ್ಥೆ ಅಧ್ಯಕ್ಷ ಎಂ. ಹನುಮಂತೇಗೌಡ ಒತ್ತಾಯ ಮಾಡಿದರು.<br /> <br /> ನಗರದ ನೆಹರು ಮೈದಾನದಲ್ಲಿ ಭಾನುವಾರ ನ್ಯೂಡೈಮಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ಕಬಡ್ಡಿ ಸಂಸ್ಥೆ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ವಿಶ್ವಕಪ್ ಕಬಡ್ಡಿ ತಂಡದಲ್ಲಿದ್ದ ನೆರೆಯ ರಾಜ್ಯದ ಆಟಗಾರ್ತಿಯರಿಗೆ ಅಲ್ಲಿನ ಸರ್ಕಾರ ತಲಾ ರೂ. 1 ಕೋಟಿ ಬಹುಮಾನ ನೀಡಿವೆ. ನಮ್ಮ ಸರ್ಕಾರ ಕೇವಲ ರೂ. 5 ಲಕ್ಷ ನೀಡಿದ್ದು, ನಮ್ಮ ರಾಜ್ಯದ ಕ್ರೀಡಾಪಟುವಿಗೆ ಅನ್ಯಾಯ ಮಾಡಿದಂತೆ ಆಗಿದೆ. ನಮ್ಮ ಸರ್ಕಾರವೂ ರೂ. 1 ಕೋಟಿ ಬಹುಮಾನ ನೀಡುವ ಮೂಲಕ ಅಪ್ಪಟ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿಗೆ ಪ್ರೋತ್ಸಾಹ ನೀಡಬೇಕು ಎಂದರು. ಮಮತಾ ಪೂಜಾರಿ ಅವರಿಗೆ ರಾಜ್ಯ ಕಬಡ್ಡಿ ಸಂಸ್ಥೆ ವತಿಯಿಂದ ರೂ. 50 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರು ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>