<p><strong>ಕೋಲ್ಕತ್ತ (ಐಎಎನ್ಎಸ್):</strong> ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಹನೆಯ ಸ್ವಭಾವ ಹೊಂದಿದ್ದು, ತಿಕ್ಕಲುತನದಿಂದ ವರ್ತಿಸುತ್ತಿದ್ದಾರೆ. ಅವರು ತಮ್ಮ ಸ್ವಭಾವ ಬದಲಿಸಿಕೊಳ್ಳದಿದ್ದಲ್ಲಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಟ್ಜು ಎಚ್ಚರಿಸಿದ್ದಾರೆ.</p>.<p>ಮಮತಾ ಅವರ ವ್ಯಂಗ್ಯಚಿತ್ರಗಳನ್ನು ಎಲ್ಲರಿಗೂ ಕಳುಹಿಸಿದ್ದ ಜಾಧವ್ಪುರ ವಿಶ್ವವಿದ್ಯಾಲಯದ ಪ್ರೊ.ಅಂಬಿಕೇಶ್ ಮಹಾಪಾತ್ರ ಹಾಗೂ ಮಮತಾ ಸರ್ಕಾರದ ನೀತಿಯನ್ನು ಪ್ರಶ್ನಿಸಿದ್ದ ರೈತ ಶಿಲಾದಿತ್ಯ ಚೌಧರಿ ಅವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಟ್ಜು ಮಮತಾ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಕೋಲ್ಕತ್ತದ ಪಾರ್ಕ್ಸ್ಟ್ರೀಟ್ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ಭೇದಿಸಿದ್ದ ಜಂಟಿ ಪೊಲೀಸ್ ಆಯುಕ್ತೆ ದಮಯಂತಿ ಸೇನ್ ಅವರನ್ನು ಮತ್ತೆ ಹಳೆಯ ಹುದ್ದೆಗೆ ನೇಮಕ ಮಾಡುವಂತೆ ಸಹ ಕಟ್ಜು ಒತ್ತಾಯಿಸಿದ್ದಾರೆ. `ನಾವೆಲ್ಲ ತಪ್ಪು ಮಾಡುತ್ತೇವೆ. ಆದರೆ, ಕ್ಷಮೆ ಕೇಳುವವರೇ ಸಜ್ಜನರು. ಮಹಾಪಾತ್ರ ಮತ್ತು ಚೌಧರಿ ವಿರುದ್ಧ ಕಾನೂನು ಕ್ರಮ ಜರುಗಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಿ. ಈ ಇಬ್ಬರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸು ಪಡೆದು ಕ್ಷಮೆ ಕೇಳಿ' ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಐಎಎನ್ಎಸ್):</strong> ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಹನೆಯ ಸ್ವಭಾವ ಹೊಂದಿದ್ದು, ತಿಕ್ಕಲುತನದಿಂದ ವರ್ತಿಸುತ್ತಿದ್ದಾರೆ. ಅವರು ತಮ್ಮ ಸ್ವಭಾವ ಬದಲಿಸಿಕೊಳ್ಳದಿದ್ದಲ್ಲಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಟ್ಜು ಎಚ್ಚರಿಸಿದ್ದಾರೆ.</p>.<p>ಮಮತಾ ಅವರ ವ್ಯಂಗ್ಯಚಿತ್ರಗಳನ್ನು ಎಲ್ಲರಿಗೂ ಕಳುಹಿಸಿದ್ದ ಜಾಧವ್ಪುರ ವಿಶ್ವವಿದ್ಯಾಲಯದ ಪ್ರೊ.ಅಂಬಿಕೇಶ್ ಮಹಾಪಾತ್ರ ಹಾಗೂ ಮಮತಾ ಸರ್ಕಾರದ ನೀತಿಯನ್ನು ಪ್ರಶ್ನಿಸಿದ್ದ ರೈತ ಶಿಲಾದಿತ್ಯ ಚೌಧರಿ ಅವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಟ್ಜು ಮಮತಾ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಕೋಲ್ಕತ್ತದ ಪಾರ್ಕ್ಸ್ಟ್ರೀಟ್ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ಭೇದಿಸಿದ್ದ ಜಂಟಿ ಪೊಲೀಸ್ ಆಯುಕ್ತೆ ದಮಯಂತಿ ಸೇನ್ ಅವರನ್ನು ಮತ್ತೆ ಹಳೆಯ ಹುದ್ದೆಗೆ ನೇಮಕ ಮಾಡುವಂತೆ ಸಹ ಕಟ್ಜು ಒತ್ತಾಯಿಸಿದ್ದಾರೆ. `ನಾವೆಲ್ಲ ತಪ್ಪು ಮಾಡುತ್ತೇವೆ. ಆದರೆ, ಕ್ಷಮೆ ಕೇಳುವವರೇ ಸಜ್ಜನರು. ಮಹಾಪಾತ್ರ ಮತ್ತು ಚೌಧರಿ ವಿರುದ್ಧ ಕಾನೂನು ಕ್ರಮ ಜರುಗಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಿ. ಈ ಇಬ್ಬರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸು ಪಡೆದು ಕ್ಷಮೆ ಕೇಳಿ' ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>