<p><strong>ಢಾಕಾ (ಪಿಟಿಐ): </strong> ಇಸ್ಲಾಮಿಕ್ ಉಗ್ರವಾದಿಗಳ ಬಗ್ಗೆ ಮೆದು ಧೋರಣೆ ಹೊಂದಿರುವ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಮ್ಮ ಬಾಂಗ್ಲಾ ಪ್ರವಾಸದ ನಿಯೋಗದಲ್ಲಿ ಕರೆತರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಲ್ಲಿನ ಹಿಂದೂ ಸಂಘಟನೆಗಳು ಆಗ್ರಹಿಸಿವೆ.<br /> <br /> ಬುಧವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ‘ವೇದಾಂತ ಸಾಂಸ್ಕೃತಿ ಮಂಚೊ’ ಪ್ರಧಾನ ಕಾರ್ಯದರ್ಶಿ ಬಿನಯ್ ಭೂಷಣ್ ಜಾಯ್ಭರ್, ‘ಇಸ್ಲಾಮಿಕ್ ಉಗ್ರಗಾಮಿಗಳು ಪಶ್ಚಿಮ ಬಂಗಾಲದ ಮುಖ್ಯಮಂತ್ರಿಗಳ ಮೆದು ಧೋರಣೆಯಿಂದಾಗಿ ಬಾಂಗ್ಲಾದೇಶ ಮತ್ತು ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರಬೇಕು. ಎರಡೂ ದೇಶಗಳ ಶಾಂತಿಪ್ರಿಯ ಜನರು ಈ ಬಗ್ಗೆ ಮಾತನಾಡುತ್ತಿದ್ದರೂ ಮೌನ ವಹಿಸಿರುವ ಮಮತಾ ಬಾಯಿಬಿಡಬೇಕು. ಒಂದು ವೇಳೆ ಅವರು ಬಾಂಗ್ಲಾದೇಶಕ್ಕೆ ಬಂದರೆ ಅವರನ್ನು ಹಿಂದಕ್ಕೆ ಕಳುಹಿಸುವವರೆಗೆ ಪ್ರತಿಭಟನೆ ನಡೆಸಬೇಕು’ ಎಂದು ಎಲ್ಲಾ ವಿಮೋಚನಾ ಪರ ಸಂಘಟನೆಗಳನ್ನೂ ಒತ್ತಾಯಿಸಿದರು.<br /> <br /> ಈ ವಾರದಲ್ಲಿ ಎರಡು ದಿನಗಳ ಬಾಂಗ್ಲಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ ಅವರ ತಂಡದಲ್ಲಿ ಮಮತಾ ಬ್ಯಾನರ್ಜಿ ಕೂಡಾ ಸೇರಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಪಿಟಿಐ): </strong> ಇಸ್ಲಾಮಿಕ್ ಉಗ್ರವಾದಿಗಳ ಬಗ್ಗೆ ಮೆದು ಧೋರಣೆ ಹೊಂದಿರುವ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಮ್ಮ ಬಾಂಗ್ಲಾ ಪ್ರವಾಸದ ನಿಯೋಗದಲ್ಲಿ ಕರೆತರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಲ್ಲಿನ ಹಿಂದೂ ಸಂಘಟನೆಗಳು ಆಗ್ರಹಿಸಿವೆ.<br /> <br /> ಬುಧವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ‘ವೇದಾಂತ ಸಾಂಸ್ಕೃತಿ ಮಂಚೊ’ ಪ್ರಧಾನ ಕಾರ್ಯದರ್ಶಿ ಬಿನಯ್ ಭೂಷಣ್ ಜಾಯ್ಭರ್, ‘ಇಸ್ಲಾಮಿಕ್ ಉಗ್ರಗಾಮಿಗಳು ಪಶ್ಚಿಮ ಬಂಗಾಲದ ಮುಖ್ಯಮಂತ್ರಿಗಳ ಮೆದು ಧೋರಣೆಯಿಂದಾಗಿ ಬಾಂಗ್ಲಾದೇಶ ಮತ್ತು ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರಬೇಕು. ಎರಡೂ ದೇಶಗಳ ಶಾಂತಿಪ್ರಿಯ ಜನರು ಈ ಬಗ್ಗೆ ಮಾತನಾಡುತ್ತಿದ್ದರೂ ಮೌನ ವಹಿಸಿರುವ ಮಮತಾ ಬಾಯಿಬಿಡಬೇಕು. ಒಂದು ವೇಳೆ ಅವರು ಬಾಂಗ್ಲಾದೇಶಕ್ಕೆ ಬಂದರೆ ಅವರನ್ನು ಹಿಂದಕ್ಕೆ ಕಳುಹಿಸುವವರೆಗೆ ಪ್ರತಿಭಟನೆ ನಡೆಸಬೇಕು’ ಎಂದು ಎಲ್ಲಾ ವಿಮೋಚನಾ ಪರ ಸಂಘಟನೆಗಳನ್ನೂ ಒತ್ತಾಯಿಸಿದರು.<br /> <br /> ಈ ವಾರದಲ್ಲಿ ಎರಡು ದಿನಗಳ ಬಾಂಗ್ಲಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ ಅವರ ತಂಡದಲ್ಲಿ ಮಮತಾ ಬ್ಯಾನರ್ಜಿ ಕೂಡಾ ಸೇರಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>