<p><strong>ಬೆಂಗಳೂರು:</strong> `ನಗರದಲ್ಲಿ ಇರುವ ಮರಗಳ ಸಂಖ್ಯೆ, ಅವುಗಳ ಬಾಳಿಕೆ, ಪ್ರಬೇಧ ಮತ್ತಿತರ ವಿವರಗಳನ್ನು ಕಲೆ ಹಾಕುವ ಸಲುವಾಗಿ ಮರಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ' ಎಂದು ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ತಿಳಿಸಿದರು.<br /> <br /> ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> `ಮರಗಳ ವ್ಯವಸ್ಥಿತ ನಿರ್ವಹಣೆ ಹಾಗೂ ಅಪಾಯಕಾರಿ ಮರಗಳ ತೆರವುಗೊಳಿಸುವ ಕಾರ್ಯ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಸಲುವಾಗಿ ಸಂಪೂರ್ಣ ವ್ಯವಸ್ಥೆಯನ್ನು ಆನ್ಲೈನ್ಗೆ ಅಳವಡಿಸಲಾಗುತ್ತಿದೆ. ಮುಂದಿನ ಮೂರು ತಿಂಗಳ ಒಳಗಾಗಿ ಈ ವ್ಯವಸ್ಥೆ ಅನುಷ್ಠಾನಕ್ಕೆ ಬರಲಿದೆ' ಎಂದು ತಿಳಿಸಿದರು.<br /> <br /> `ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಮೂಲದಲ್ಲಿಯೇ ವಿಂಗಡಿಸಿ, ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು, 31 ವಾರ್ಡ್ಗಳನ್ನು ಶೀಘ್ರವೇ ಕಸಮುಕ್ತ ವಾರ್ಡ್ಗಳೆಂದು ಘೋಷಿಸಲಾಗುವುದು' ಎಂದರು.<br /> <br /> `ಮಳೆಗಾಲದಲ್ಲಿ ಸುಮ್ಮನೆ ಹರಿದುಹೋಗುವ ನೀರನ್ನು ತಡೆಯಲು ಇಂಗು ಗುಂಡಿಗಳನ್ನು ನಿರ್ಮಿಸಿ, ಅಂತರ್ಜಲ ವೃದ್ಧಿಗೆ ಸಹಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಾಲಿಕೆಯ ಎಲ್ಲ ವಲಯಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ, `ಕಳೆದ ಮಳೆಗಾಲದಲ್ಲಿ 1,72,000 ಸಸಿಗಳನ್ನು ನೆಡಲಾಗಿತ್ತು. ಈ ಸಲ 1,60,000 ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ' ಎಂದು ಹೇಳಿದರು.<br /> <br /> ಪಾಲಿಕೆಯ 8 ನರ್ಸರಿಗಳಲ್ಲಿ ವಿವಿಧ ಜಾತಿಯ 7,56,000 ಸಸಿಗಳನ್ನು ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಸಂಸದ ಅನಂತಕುಮಾರ್ ಮಾತನಾಡಿ, ಬೆಂಗಳೂರು ನಗರವನ್ನು ಈಗಾಗಲೇ ಹಸಿರು ವಲಯವನ್ನಾಗಿ ಮಾಡಲಾಗಿದೆ. ಸಸಿಗಳನ್ನು ನೆಡುವ ಜತೆಗೆ ಅವುಗಳನ್ನು ಬೆಳೆಸಲು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.<br /> <br /> <strong>ವಿಪ್ರೊ : ಬಲ್ಬ್, ಗಿಡ ವಿತರಣೆ<br /> ಬೆಂಗಳೂರು: </strong>ವಿಪ್ರೊ ಎಂಟರ್ ಪ್ರೈಸಸ್ನ ವಿಪ್ರೊ ಗ್ರಾಹಕ ಕೇರ್ ಮತ್ತು ಲೈಟಿಂಗ್ ವಿಭಾಗವು ವಿಶ್ವ ಪರಿಸರದ ದಿನದ ಅಂಗವಾಗಿ ವಾರವಿಡೀ ಕಾರ್ಯಕ್ರಮಗಳನ್ನು ಆಯೋಜಿಸಿದೆ.<br /> <br /> ಆಯ್ಕೆ ಮಾಡಿದ ಕೆಲವು ಪ್ರದೇಶಗಳಲ್ಲಿ ಸಿಎಫ್ಎಲ್ ಬಲ್ಬ್ ಜತೆಗೆ ಗಿಡವೊಂದನ್ನು ವಿಪ್ರೊ ಸಂಸ್ಥೆಯು ನೀಡಲಿದೆ.<br /> ವಿಪ್ರೊ ಗ್ರಾಹಕ ವಿಭಾಗದ ಹಿರಿಯ ಉಪಾಧ್ಯಕ್ಷ ಅನಿಲ್ ಚುಗ್ ಅವರು, `ಪರಿಸರವನ್ನು ಉಳಿಸಲು ಗಿಡವನ್ನು ನೆಡುವುದು ಇಂದಿನ ಅಗತ್ಯವಾಗಿದೆ. ಹೆಚ್ಚಿನ ಶಕ್ತಿ ಸಾಮರ್ಥ್ಯವಿರುವ ಉತ್ಪನ್ನಗಳನ್ನು ಖರೀದಿಸಲು ಜನರಿಗೆ ಪ್ರೇರಣೆ ನೀಡಬೇಕಾಗಿದೆ' ಎಂದರು.<br /> <br /> `ವಿಶ್ವ ಪರಿಸರ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಿ, ಗಿಡಗಳನ್ನು ನೀಡಿ, ಅವರು ಗಿಡಗಳನ್ನು ನೆಡುವ ಮೂಲಕ ಭೂಮಿ ತಾಯಿಯ ಕುರಿತು ಇರುವ ಜವಾಬ್ದಾರಿಯನ್ನು ನೆನಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ನಗರದಲ್ಲಿ ಇರುವ ಮರಗಳ ಸಂಖ್ಯೆ, ಅವುಗಳ ಬಾಳಿಕೆ, ಪ್ರಬೇಧ ಮತ್ತಿತರ ವಿವರಗಳನ್ನು ಕಲೆ ಹಾಕುವ ಸಲುವಾಗಿ ಮರಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ' ಎಂದು ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ತಿಳಿಸಿದರು.<br /> <br /> ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> `ಮರಗಳ ವ್ಯವಸ್ಥಿತ ನಿರ್ವಹಣೆ ಹಾಗೂ ಅಪಾಯಕಾರಿ ಮರಗಳ ತೆರವುಗೊಳಿಸುವ ಕಾರ್ಯ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಸಲುವಾಗಿ ಸಂಪೂರ್ಣ ವ್ಯವಸ್ಥೆಯನ್ನು ಆನ್ಲೈನ್ಗೆ ಅಳವಡಿಸಲಾಗುತ್ತಿದೆ. ಮುಂದಿನ ಮೂರು ತಿಂಗಳ ಒಳಗಾಗಿ ಈ ವ್ಯವಸ್ಥೆ ಅನುಷ್ಠಾನಕ್ಕೆ ಬರಲಿದೆ' ಎಂದು ತಿಳಿಸಿದರು.<br /> <br /> `ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಮೂಲದಲ್ಲಿಯೇ ವಿಂಗಡಿಸಿ, ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು, 31 ವಾರ್ಡ್ಗಳನ್ನು ಶೀಘ್ರವೇ ಕಸಮುಕ್ತ ವಾರ್ಡ್ಗಳೆಂದು ಘೋಷಿಸಲಾಗುವುದು' ಎಂದರು.<br /> <br /> `ಮಳೆಗಾಲದಲ್ಲಿ ಸುಮ್ಮನೆ ಹರಿದುಹೋಗುವ ನೀರನ್ನು ತಡೆಯಲು ಇಂಗು ಗುಂಡಿಗಳನ್ನು ನಿರ್ಮಿಸಿ, ಅಂತರ್ಜಲ ವೃದ್ಧಿಗೆ ಸಹಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಾಲಿಕೆಯ ಎಲ್ಲ ವಲಯಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ, `ಕಳೆದ ಮಳೆಗಾಲದಲ್ಲಿ 1,72,000 ಸಸಿಗಳನ್ನು ನೆಡಲಾಗಿತ್ತು. ಈ ಸಲ 1,60,000 ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ' ಎಂದು ಹೇಳಿದರು.<br /> <br /> ಪಾಲಿಕೆಯ 8 ನರ್ಸರಿಗಳಲ್ಲಿ ವಿವಿಧ ಜಾತಿಯ 7,56,000 ಸಸಿಗಳನ್ನು ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.<br /> <br /> ಸಂಸದ ಅನಂತಕುಮಾರ್ ಮಾತನಾಡಿ, ಬೆಂಗಳೂರು ನಗರವನ್ನು ಈಗಾಗಲೇ ಹಸಿರು ವಲಯವನ್ನಾಗಿ ಮಾಡಲಾಗಿದೆ. ಸಸಿಗಳನ್ನು ನೆಡುವ ಜತೆಗೆ ಅವುಗಳನ್ನು ಬೆಳೆಸಲು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.<br /> <br /> <strong>ವಿಪ್ರೊ : ಬಲ್ಬ್, ಗಿಡ ವಿತರಣೆ<br /> ಬೆಂಗಳೂರು: </strong>ವಿಪ್ರೊ ಎಂಟರ್ ಪ್ರೈಸಸ್ನ ವಿಪ್ರೊ ಗ್ರಾಹಕ ಕೇರ್ ಮತ್ತು ಲೈಟಿಂಗ್ ವಿಭಾಗವು ವಿಶ್ವ ಪರಿಸರದ ದಿನದ ಅಂಗವಾಗಿ ವಾರವಿಡೀ ಕಾರ್ಯಕ್ರಮಗಳನ್ನು ಆಯೋಜಿಸಿದೆ.<br /> <br /> ಆಯ್ಕೆ ಮಾಡಿದ ಕೆಲವು ಪ್ರದೇಶಗಳಲ್ಲಿ ಸಿಎಫ್ಎಲ್ ಬಲ್ಬ್ ಜತೆಗೆ ಗಿಡವೊಂದನ್ನು ವಿಪ್ರೊ ಸಂಸ್ಥೆಯು ನೀಡಲಿದೆ.<br /> ವಿಪ್ರೊ ಗ್ರಾಹಕ ವಿಭಾಗದ ಹಿರಿಯ ಉಪಾಧ್ಯಕ್ಷ ಅನಿಲ್ ಚುಗ್ ಅವರು, `ಪರಿಸರವನ್ನು ಉಳಿಸಲು ಗಿಡವನ್ನು ನೆಡುವುದು ಇಂದಿನ ಅಗತ್ಯವಾಗಿದೆ. ಹೆಚ್ಚಿನ ಶಕ್ತಿ ಸಾಮರ್ಥ್ಯವಿರುವ ಉತ್ಪನ್ನಗಳನ್ನು ಖರೀದಿಸಲು ಜನರಿಗೆ ಪ್ರೇರಣೆ ನೀಡಬೇಕಾಗಿದೆ' ಎಂದರು.<br /> <br /> `ವಿಶ್ವ ಪರಿಸರ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಿ, ಗಿಡಗಳನ್ನು ನೀಡಿ, ಅವರು ಗಿಡಗಳನ್ನು ನೆಡುವ ಮೂಲಕ ಭೂಮಿ ತಾಯಿಯ ಕುರಿತು ಇರುವ ಜವಾಬ್ದಾರಿಯನ್ನು ನೆನಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>