<p>ಅರಸೀಕೆರೆ: ಗುತ್ತಿಗೆದಾರ ಹಾಗೂ ಪ್ರಾಂಶುಪಾಲರ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ನೂತನವಾಗಿ ನಿರ್ಮಿಸಿರುವ ಕಾಲೇಜು ಕೊಠಡಿ ಉದ್ಘಾಟನೆ ನೆನೆಗುದಿಗೆ ಬಿದ್ದಿದ್ದು, ವಿದ್ಯಾರ್ಥಿಗಳು ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ತಾಲ್ಲೂಕಿನ ಬಾಳೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಲವು ದಿನಗಳಿಂದ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ.<br /> <br /> ಕಾಲೇಜಿನಲ್ಲಿರುವ ಕೊಠಡಿ ಕೊರತೆಯನ್ನು ಪರಿಹರಿಸಲು ಸರ್ಕಾರ ಎರಡು ವರ್ಷಗಳ ಹಿಂದೆ 15.94 ಲಕ್ಷ ರೂಪಾಯಿ ಬಿಡುಗಡೆ ಮಾಡಿತ್ತು. ಈ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಮಳೆಯಿಂದ ಅದು ಸೋರುತ್ತಿದೆ. ಹೀಗಾಗಿ ಕಟ್ಟಡವನ್ನು ತಮ್ಮ ಸುಪರ್ದಿಗೆ ವಹಿಸಿಕೊಳ್ಳಲು ಪ್ರಾಂಶುಪಾಲರು ನಿರಾಕರಿಸಿದ್ದಾರೆ. ಈ ನಡುವೆ ಕಟ್ಟಡ ಗುತ್ತಿಗೆದಾರ ತಮಗೆ ಸಂಪೂರ್ಣ ಹಣ ಪಾವತಿಯಾಗಿಲ್ಲ ಎಂಬ ವಾದ ಇಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮರದ ನೆರಳಲ್ಲಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.<br /> <br /> ಅರಸೀಕೆರೆ- ಮೈಸೂರು ರಸ್ತೆ ಬದಿಯಿರುವ ಕಾಲೇಜು ಪ್ರಶಾಂತ ವಾತಾವರಣದಲ್ಲಿದೆ. ಆದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಉದಾಸೀನತೆಯಿಂದ ವಿದ್ಯಾರ್ಥಿಗಳು ಮಾತ್ರ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಾರೆ.<br /> <br /> ಆಧುನಿಕ ಕಾಲದಲ್ಲೂ ಮರಗಳ ನೆರಳಿನಲ್ಲಿ ಕಾಲೇಜು ನಡೆಯುತ್ತಿರುವುದು ಮಾತ್ರ ಶೋಚನೀಯ ಸಂಗತಿ. ಹಳೆಯ ಕಾಲೇಜು ಕಟ್ಟಡದಲ್ಲಿ ಪ್ರೌಢಶಾಲೆಯೂ ನಡೆಯುತ್ತಿದೆ. ಇರುವ 5 ಕೊಠಡಿಗಳಲ್ಲಿ ಕಂಪೂಟರ್ ಶಿಕ್ಷಣಕ್ಕೆ ಒಂದು ಕೊಠಡಿಯನ್ನು ಬಳಸಲಾಗುತ್ತಿದೆ. ಇನ್ನೊಂದು ಶಿಕ್ಷಕರ ಕಾರ್ಯಾಲಯವಾಗಿದೆ. ಇನ್ನುಳಿದ ಮೂರು ಕೊಠಡಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಕಾಲೇಜು ಆರಂಭವಾದರೆ ನಂತರ 10.30 ಗಂಟೆಗೆ ಪ್ರೌಢ ಶಾಲಾ ತರಗತಿಗಳು ಶುರುವಾಗುತ್ತವೆ. ಈ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿರುವ ಹಿಪ್ಪೆ ಹಾಗೂ ಮಾವಿನ ಮರಗಳ ಕೆಳಗೆ ಕುಳಿತು ಪಾಠ ಕೇಳಬೇಕಿದೆ.<br /> <br /> ಬಿಸಿಲು- ಮಳೆ ಬಂದರೆ ನಿಲ್ಲಲೂ ಕೂಡಾ ಸಾಧ್ಯವಿಲ್ಲ. ಆದರೆ ಕಾಲೇಜು ಪಕ್ಕದಲ್ಲಿರುವ ಪಶು ಆಸ್ಪತ್ರೆಯ ಎರಡು ಸಣ್ಣ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಳಗೆ ಕುಳಿತು ಪಾಠ ಕೇಳೋಣ ಎಂದರೆ ಸ್ಥಳಾವಕಾಶ ಇಲ್ಲ ಎಂದು ವಿದ್ಯಾರ್ಥಿಗಳು ನೋವನ್ನು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಗುತ್ತಿಗೆದಾರ ಹಾಗೂ ಪ್ರಾಂಶುಪಾಲರ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ನೂತನವಾಗಿ ನಿರ್ಮಿಸಿರುವ ಕಾಲೇಜು ಕೊಠಡಿ ಉದ್ಘಾಟನೆ ನೆನೆಗುದಿಗೆ ಬಿದ್ದಿದ್ದು, ವಿದ್ಯಾರ್ಥಿಗಳು ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ತಾಲ್ಲೂಕಿನ ಬಾಳೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಲವು ದಿನಗಳಿಂದ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ.<br /> <br /> ಕಾಲೇಜಿನಲ್ಲಿರುವ ಕೊಠಡಿ ಕೊರತೆಯನ್ನು ಪರಿಹರಿಸಲು ಸರ್ಕಾರ ಎರಡು ವರ್ಷಗಳ ಹಿಂದೆ 15.94 ಲಕ್ಷ ರೂಪಾಯಿ ಬಿಡುಗಡೆ ಮಾಡಿತ್ತು. ಈ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಮಳೆಯಿಂದ ಅದು ಸೋರುತ್ತಿದೆ. ಹೀಗಾಗಿ ಕಟ್ಟಡವನ್ನು ತಮ್ಮ ಸುಪರ್ದಿಗೆ ವಹಿಸಿಕೊಳ್ಳಲು ಪ್ರಾಂಶುಪಾಲರು ನಿರಾಕರಿಸಿದ್ದಾರೆ. ಈ ನಡುವೆ ಕಟ್ಟಡ ಗುತ್ತಿಗೆದಾರ ತಮಗೆ ಸಂಪೂರ್ಣ ಹಣ ಪಾವತಿಯಾಗಿಲ್ಲ ಎಂಬ ವಾದ ಇಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮರದ ನೆರಳಲ್ಲಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.<br /> <br /> ಅರಸೀಕೆರೆ- ಮೈಸೂರು ರಸ್ತೆ ಬದಿಯಿರುವ ಕಾಲೇಜು ಪ್ರಶಾಂತ ವಾತಾವರಣದಲ್ಲಿದೆ. ಆದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಉದಾಸೀನತೆಯಿಂದ ವಿದ್ಯಾರ್ಥಿಗಳು ಮಾತ್ರ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಾರೆ.<br /> <br /> ಆಧುನಿಕ ಕಾಲದಲ್ಲೂ ಮರಗಳ ನೆರಳಿನಲ್ಲಿ ಕಾಲೇಜು ನಡೆಯುತ್ತಿರುವುದು ಮಾತ್ರ ಶೋಚನೀಯ ಸಂಗತಿ. ಹಳೆಯ ಕಾಲೇಜು ಕಟ್ಟಡದಲ್ಲಿ ಪ್ರೌಢಶಾಲೆಯೂ ನಡೆಯುತ್ತಿದೆ. ಇರುವ 5 ಕೊಠಡಿಗಳಲ್ಲಿ ಕಂಪೂಟರ್ ಶಿಕ್ಷಣಕ್ಕೆ ಒಂದು ಕೊಠಡಿಯನ್ನು ಬಳಸಲಾಗುತ್ತಿದೆ. ಇನ್ನೊಂದು ಶಿಕ್ಷಕರ ಕಾರ್ಯಾಲಯವಾಗಿದೆ. ಇನ್ನುಳಿದ ಮೂರು ಕೊಠಡಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಕಾಲೇಜು ಆರಂಭವಾದರೆ ನಂತರ 10.30 ಗಂಟೆಗೆ ಪ್ರೌಢ ಶಾಲಾ ತರಗತಿಗಳು ಶುರುವಾಗುತ್ತವೆ. ಈ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿರುವ ಹಿಪ್ಪೆ ಹಾಗೂ ಮಾವಿನ ಮರಗಳ ಕೆಳಗೆ ಕುಳಿತು ಪಾಠ ಕೇಳಬೇಕಿದೆ.<br /> <br /> ಬಿಸಿಲು- ಮಳೆ ಬಂದರೆ ನಿಲ್ಲಲೂ ಕೂಡಾ ಸಾಧ್ಯವಿಲ್ಲ. ಆದರೆ ಕಾಲೇಜು ಪಕ್ಕದಲ್ಲಿರುವ ಪಶು ಆಸ್ಪತ್ರೆಯ ಎರಡು ಸಣ್ಣ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಳಗೆ ಕುಳಿತು ಪಾಠ ಕೇಳೋಣ ಎಂದರೆ ಸ್ಥಳಾವಕಾಶ ಇಲ್ಲ ಎಂದು ವಿದ್ಯಾರ್ಥಿಗಳು ನೋವನ್ನು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>