<p><strong>ತುಮಕೂರು: </strong>ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ದಂಧೆ ಮೇಲೆ ಪೊಲೀಸರು ಭಾನುವಾರ ಮುಗಿ ಬಿದ್ದರು. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 44 ಲಾರಿಗಳನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡರು.ಮರಳಿನ ಮೌಲ್ಯ ರೂ. 15 ಲಕ್ಷ ಎಂದು ಅಂದಾಜಿಸಲಾಗಿದೆ.<br /> <br /> ಅಕ್ರಮ ಮರಳು ಗಣಿಗಾರಿಕೆ ಕುರಿತು `ಪ್ರಜಾವಾಣಿ' ಆರಂಭಿಸಿರುವ ಸರಣಿಯ ಭಾನುವಾರದ ಸಂಚಿಕೆಯಲ್ಲಿ ತುಮಕೂರು ಜಿಲ್ಲೆಯ ಅಕ್ರಮ ಮರಳು ದಂಧೆ ಕುರಿತು ಸಮಗ್ರ ವರದಿ ಪ್ರಕಟವಾಗಿತ್ತು.<br /> <br /> ಈ ವರದಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಅವರು ಭಾನುವಾರ ಬೆಳಿಗ್ಗೆಯೇ ಇಲಾಖೆಯ ಎಲ್ಲ ಹಿರಿ ಮತ್ತು ಕಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮರಳು ಸಾಗಣೆಯನ್ನು ತಡೆಯುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು ಎಂದು ತಿಳಿದುಬಂದಿದೆ.<br /> <br /> `ಅಕ್ರಮ ಮರಳು ಗಣಿಗಾರಿಕೆಯಿಂದ ಜಿಲ್ಲೆಯೇ ನಾಶವಾಗುತ್ತಿದೆ. ಆದರೆ ಅಕ್ರಮ ಮರಳು ಗಣಿಗಾರಿಕೆಯನ್ನು ಇಷ್ಟು ದಿನ ಗಂಭೀರವಾಗಿ ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿಗಳು ಅಕ್ರಮ ಮರಳು ದಂಧೆ ಭಾನುವಾರ ಬೆಳಿಗ್ಗೆ ವಿರುದ್ಧ ಕಳಹೆ ಊದಿದರು. ಇದಕ್ಕೆ `ಪ್ರಜಾವಾಣಿ'ಯಲ್ಲಿ ಬಂದ ವರದಿಯೇ ಕಾರಣ.</p>.<p>ಎಲ್ಲೇ ಅಕ್ರಮ ಮರಳು ಗಣಿಗಾರಿಕೆ ನಡೆದರೂ ಆಯಾ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು' ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಒಬ್ಬರು ಸಬ್ ಇನ್ಸ್ಪೆಕ್ಟರ್`ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ದಂಧೆ ಮೇಲೆ ಪೊಲೀಸರು ಭಾನುವಾರ ಮುಗಿ ಬಿದ್ದರು. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 44 ಲಾರಿಗಳನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡರು.ಮರಳಿನ ಮೌಲ್ಯ ರೂ. 15 ಲಕ್ಷ ಎಂದು ಅಂದಾಜಿಸಲಾಗಿದೆ.<br /> <br /> ಅಕ್ರಮ ಮರಳು ಗಣಿಗಾರಿಕೆ ಕುರಿತು `ಪ್ರಜಾವಾಣಿ' ಆರಂಭಿಸಿರುವ ಸರಣಿಯ ಭಾನುವಾರದ ಸಂಚಿಕೆಯಲ್ಲಿ ತುಮಕೂರು ಜಿಲ್ಲೆಯ ಅಕ್ರಮ ಮರಳು ದಂಧೆ ಕುರಿತು ಸಮಗ್ರ ವರದಿ ಪ್ರಕಟವಾಗಿತ್ತು.<br /> <br /> ಈ ವರದಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಅವರು ಭಾನುವಾರ ಬೆಳಿಗ್ಗೆಯೇ ಇಲಾಖೆಯ ಎಲ್ಲ ಹಿರಿ ಮತ್ತು ಕಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮರಳು ಸಾಗಣೆಯನ್ನು ತಡೆಯುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು ಎಂದು ತಿಳಿದುಬಂದಿದೆ.<br /> <br /> `ಅಕ್ರಮ ಮರಳು ಗಣಿಗಾರಿಕೆಯಿಂದ ಜಿಲ್ಲೆಯೇ ನಾಶವಾಗುತ್ತಿದೆ. ಆದರೆ ಅಕ್ರಮ ಮರಳು ಗಣಿಗಾರಿಕೆಯನ್ನು ಇಷ್ಟು ದಿನ ಗಂಭೀರವಾಗಿ ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿಗಳು ಅಕ್ರಮ ಮರಳು ದಂಧೆ ಭಾನುವಾರ ಬೆಳಿಗ್ಗೆ ವಿರುದ್ಧ ಕಳಹೆ ಊದಿದರು. ಇದಕ್ಕೆ `ಪ್ರಜಾವಾಣಿ'ಯಲ್ಲಿ ಬಂದ ವರದಿಯೇ ಕಾರಣ.</p>.<p>ಎಲ್ಲೇ ಅಕ್ರಮ ಮರಳು ಗಣಿಗಾರಿಕೆ ನಡೆದರೂ ಆಯಾ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು' ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಒಬ್ಬರು ಸಬ್ ಇನ್ಸ್ಪೆಕ್ಟರ್`ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>