<p><strong>ಬೆಳಗಾವಿ:</strong> ಶಾಲೆಯಲ್ಲಿ ಇರುವುದೊಂದೆ ವರ್ಗಕೋಣೆ... ಮೂಲ ಸೌಕರ್ಯಗಳಂತೂ ಇಲ್ಲವೇ ಇಲ್ಲ... ಮೂವರು ಶಿಕ್ಷಕಿಯರಿದ್ದರೂ ಒಬ್ಬ ವಿದ್ಯಾರ್ಥಿಯು ಶಾಲೆಯತ್ತ ಸುಳಿದಿಲ್ಲ... ಅನಾಥ ಪ್ರಜ್ಞೆಯಿಂದ ನರಳುತ್ತಿದೆ ಮರಾಠಿ ಶಾಲೆ....<br /> <br /> ಬೆಳಗಾವಿ ನಗರದ ಕೋಟೆಯ ಆವರಣದ ದುರ್ಗಾದೇವಿ ಮಂದಿರದ ಪಕ್ಕದಲ್ಲಿರುವ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ ನಂಬರ್ 30ರ ದುಸ್ಥಿತಿ ಇದು. ಹೌದು, ರಾಜ್ಯದಲ್ಲಿನ ವಿವಿಧ ಶಾಲೆಗಳಲ್ಲಿ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದರೆ, ಇಲ್ಲಿ ಮೂವರು ಶಿಕ್ಷಕಿಯರು ವಿದ್ಯಾರ್ಥಿಗಳಿಲ್ಲದೇ ಪರದಾಡುತ್ತಿದ್ದಾರೆ.<br /> <br /> 1951ರಲ್ಲಿ ಆರಂಭಗೊಂಡಿರುವ ಈ ಶಾಲೆಗೆ 62ರ ಹರೆಯ. ಆದರೆ, ಇಲ್ಲಿಯವರೆಗೆ ಸ್ವಂತ ಕಟ್ಟಡದ ಭಾಗ್ಯ ಕೂಡಿ ಬಂದಿಲ್ಲ. ಲೋಕೋಪಯೋಗಿ ಇಲಾಖೆಯ ಕಟ್ಟಡದ ಕೋಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆ ಅನಾಥ ಪ್ರಜ್ಞೆಯಿಂದ ನರಳುತ್ತಿದೆ.<br /> <br /> <strong>ವಿದ್ಯಾರ್ಥಿಗಳೇ ಇಲ್ಲ:</strong> ಈ ಶಾಲೆಯು 1 ರಿಂದ 5 ತರಗತಿಯನ್ನು ಹೊಂದಿದ್ದು, ಒಬ್ಬರು ಕನ್ನಡ ಹಾಗೂ ಇಬ್ಬರು ಮರಾಠಿ ಶಿಕ್ಷಕಿಯರು ಇದ್ದಾರೆ. ಆದರೆ, ಒಬ್ಬ ವಿದ್ಯಾರ್ಥಿಯೂ ಇಲ್ಲ. ಹೀಗಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಸುಮ್ಮನೆ ಕುಳಿತುಕೊಳ್ಳುವುದು ಶಿಕ್ಷಕಿಯರ ಕೆಲಸ.<br /> <br /> 2010-11ನೇ ಸಾಲಿನಲ್ಲಿ 18, 2011-12ನೇ ಸಾಲಿನಲ್ಲಿ 14, 2012-13 ಸಾಲಿನಲ್ಲಿ 14 ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದರು. ಇದರಲ್ಲಿ ಒಬ್ಬ ವಿದ್ಯಾರ್ಥಿ 5ನೇ ತರಗತಿ ಪೂರೈಸಿ ಬೇರೆ ಶಾಲೆಗೆ ಹೋಗಿದ್ದಾನೆ. ಇನ್ನುಳಿದವರು ಶಾಲೆಯಲ್ಲಿನ ಸೌಲಭ್ಯಗಳ ಕೊರತೆಯನ್ನು ಕಂಡು ತಮ್ಮ ಮಕ್ಕಳನ್ನು ಈ ವರ್ಷ ಬೇರೆ ಶಾಲೆಗೆ ದಾಖಲಿಸಿದ್ದಾರೆ. ಹೀಗಾಗಿ ಶಾಲೆಯು ವಿದ್ಯಾರ್ಥಿಗಳ ಆಗಮನದ ನಿರೀಕ್ಷೆಯಲ್ಲಿಯೇ ಇದೆ.<br /> <br /> <strong>`ಇಲ್ಲ' ಗಳ ಶಾಲೆ: </strong>ಆಟದ ಮೈದಾನ, ಶೌಚಾಲಯ, ಕುಡಿಯುವ ನೀರು, ಪೀಠೋಪಕರಣಗಳು, ವಿದ್ಯುತ್ ಸೌಲಭ್ಯ ದೂರದ ಮಾತು. ಈ ಶಾಲೆಗೆ ಸ್ವಂತ ಕಟ್ಟಡವೇ ಇಲ್ಲ. ಒಟ್ಟಿನಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಿದೆ.<br /> <br /> ಶಾಲೆಯಲ್ಲಿರುವ ಕೆಲವು ಪೀಠೋಪಕರಣಗಳು, ಚಿತ್ರಪಟಗಳು ಹಾಗೂ ಕಲಿಕಾ ಸಾಮಗ್ರಿಗಳು ಬಳಕೆಯಾಗದ ಪರಿಣಾಮ ಧೂಳು ಹಿಡಿದು ಮೂಲೆ ಸೇರಿವೆ.<br /> <br /> `ಶಾಲೆಯಲ್ಲಿನ ಸುತ್ತ ಮುತ್ತಲಿನ ಪರಿಸರದಲ್ಲಿ ಭಾಷಾ ಅಲ್ಪಸಂಖ್ಯಾತ ಕುಟುಂಬಗಳಿರುವುದು ಕಡಿಮೆ. ಮುಖ್ಯವಾಗಿ ಶಾಲೆಯಲ್ಲಿ ಅಂತಹ ಹೇಳಿಕೊಳ್ಳುವಂತಹ ಯಾವುದೇ ಸೌಲಭ್ಯಗಳಿಲ್ಲ. ಇದರಿಂದಾಗಿ ಪಾಲಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕುರಿತು ಮೇಲಿನ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಅವರೇ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಶಾಲೆಯ ಮುಖ್ಯ ಶಿಕ್ಷಕಿ ಎಸ್.ಬಿ.ಭಾತಖಾಂಡೆ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಶೈಕ್ಷಣಿಕ ವರ್ಷದ ಆರಂಭದಿಂದ 45 ದಿನಗಳರೆಗೆ ಶಾಲೆಯಲ್ಲಿ ಯಾವುದಾದರೂ ವಿದ್ಯಾರ್ಥಿ ಪ್ರವೇಶ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಒಬ್ಬ ವಿದ್ಯಾರ್ಥಿಯು ದಾಖಲಾತಿ ಪಡೆದಿಲ್ಲ. ಹೀಗಾಗಿ ಶಾಲೆಯನ್ನು ಮುಚ್ಚಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.</p>.<p>ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಶಿಕ್ಷಕಿಯರ ಪೈಕಿ ಇಬ್ಬರನ್ನು ಹಳೇ ಗಾಂಧಿನಗರದ ಸರ್ಕಾರಿ ಕಿರಿಯ ಮರಾಠಿ ಪ್ರಾಥಮಿಕ ಶಾಲೆ ಹಾಗೂ ಒಬ್ಬರನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 29 ಕ್ಕೆ ವರ್ಗಾವಣೆ ಮಾಡಲಾಗುವುದು' ಎಂದು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಂಡಲೀಕ ಹೇಳಿದರು.<br /> <strong>-ಇಮಾಮಹುಸೇನ್. ಎಂ.ಗೂಡುನವರ .</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಶಾಲೆಯಲ್ಲಿ ಇರುವುದೊಂದೆ ವರ್ಗಕೋಣೆ... ಮೂಲ ಸೌಕರ್ಯಗಳಂತೂ ಇಲ್ಲವೇ ಇಲ್ಲ... ಮೂವರು ಶಿಕ್ಷಕಿಯರಿದ್ದರೂ ಒಬ್ಬ ವಿದ್ಯಾರ್ಥಿಯು ಶಾಲೆಯತ್ತ ಸುಳಿದಿಲ್ಲ... ಅನಾಥ ಪ್ರಜ್ಞೆಯಿಂದ ನರಳುತ್ತಿದೆ ಮರಾಠಿ ಶಾಲೆ....<br /> <br /> ಬೆಳಗಾವಿ ನಗರದ ಕೋಟೆಯ ಆವರಣದ ದುರ್ಗಾದೇವಿ ಮಂದಿರದ ಪಕ್ಕದಲ್ಲಿರುವ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ ನಂಬರ್ 30ರ ದುಸ್ಥಿತಿ ಇದು. ಹೌದು, ರಾಜ್ಯದಲ್ಲಿನ ವಿವಿಧ ಶಾಲೆಗಳಲ್ಲಿ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದರೆ, ಇಲ್ಲಿ ಮೂವರು ಶಿಕ್ಷಕಿಯರು ವಿದ್ಯಾರ್ಥಿಗಳಿಲ್ಲದೇ ಪರದಾಡುತ್ತಿದ್ದಾರೆ.<br /> <br /> 1951ರಲ್ಲಿ ಆರಂಭಗೊಂಡಿರುವ ಈ ಶಾಲೆಗೆ 62ರ ಹರೆಯ. ಆದರೆ, ಇಲ್ಲಿಯವರೆಗೆ ಸ್ವಂತ ಕಟ್ಟಡದ ಭಾಗ್ಯ ಕೂಡಿ ಬಂದಿಲ್ಲ. ಲೋಕೋಪಯೋಗಿ ಇಲಾಖೆಯ ಕಟ್ಟಡದ ಕೋಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆ ಅನಾಥ ಪ್ರಜ್ಞೆಯಿಂದ ನರಳುತ್ತಿದೆ.<br /> <br /> <strong>ವಿದ್ಯಾರ್ಥಿಗಳೇ ಇಲ್ಲ:</strong> ಈ ಶಾಲೆಯು 1 ರಿಂದ 5 ತರಗತಿಯನ್ನು ಹೊಂದಿದ್ದು, ಒಬ್ಬರು ಕನ್ನಡ ಹಾಗೂ ಇಬ್ಬರು ಮರಾಠಿ ಶಿಕ್ಷಕಿಯರು ಇದ್ದಾರೆ. ಆದರೆ, ಒಬ್ಬ ವಿದ್ಯಾರ್ಥಿಯೂ ಇಲ್ಲ. ಹೀಗಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಸುಮ್ಮನೆ ಕುಳಿತುಕೊಳ್ಳುವುದು ಶಿಕ್ಷಕಿಯರ ಕೆಲಸ.<br /> <br /> 2010-11ನೇ ಸಾಲಿನಲ್ಲಿ 18, 2011-12ನೇ ಸಾಲಿನಲ್ಲಿ 14, 2012-13 ಸಾಲಿನಲ್ಲಿ 14 ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದರು. ಇದರಲ್ಲಿ ಒಬ್ಬ ವಿದ್ಯಾರ್ಥಿ 5ನೇ ತರಗತಿ ಪೂರೈಸಿ ಬೇರೆ ಶಾಲೆಗೆ ಹೋಗಿದ್ದಾನೆ. ಇನ್ನುಳಿದವರು ಶಾಲೆಯಲ್ಲಿನ ಸೌಲಭ್ಯಗಳ ಕೊರತೆಯನ್ನು ಕಂಡು ತಮ್ಮ ಮಕ್ಕಳನ್ನು ಈ ವರ್ಷ ಬೇರೆ ಶಾಲೆಗೆ ದಾಖಲಿಸಿದ್ದಾರೆ. ಹೀಗಾಗಿ ಶಾಲೆಯು ವಿದ್ಯಾರ್ಥಿಗಳ ಆಗಮನದ ನಿರೀಕ್ಷೆಯಲ್ಲಿಯೇ ಇದೆ.<br /> <br /> <strong>`ಇಲ್ಲ' ಗಳ ಶಾಲೆ: </strong>ಆಟದ ಮೈದಾನ, ಶೌಚಾಲಯ, ಕುಡಿಯುವ ನೀರು, ಪೀಠೋಪಕರಣಗಳು, ವಿದ್ಯುತ್ ಸೌಲಭ್ಯ ದೂರದ ಮಾತು. ಈ ಶಾಲೆಗೆ ಸ್ವಂತ ಕಟ್ಟಡವೇ ಇಲ್ಲ. ಒಟ್ಟಿನಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಿದೆ.<br /> <br /> ಶಾಲೆಯಲ್ಲಿರುವ ಕೆಲವು ಪೀಠೋಪಕರಣಗಳು, ಚಿತ್ರಪಟಗಳು ಹಾಗೂ ಕಲಿಕಾ ಸಾಮಗ್ರಿಗಳು ಬಳಕೆಯಾಗದ ಪರಿಣಾಮ ಧೂಳು ಹಿಡಿದು ಮೂಲೆ ಸೇರಿವೆ.<br /> <br /> `ಶಾಲೆಯಲ್ಲಿನ ಸುತ್ತ ಮುತ್ತಲಿನ ಪರಿಸರದಲ್ಲಿ ಭಾಷಾ ಅಲ್ಪಸಂಖ್ಯಾತ ಕುಟುಂಬಗಳಿರುವುದು ಕಡಿಮೆ. ಮುಖ್ಯವಾಗಿ ಶಾಲೆಯಲ್ಲಿ ಅಂತಹ ಹೇಳಿಕೊಳ್ಳುವಂತಹ ಯಾವುದೇ ಸೌಲಭ್ಯಗಳಿಲ್ಲ. ಇದರಿಂದಾಗಿ ಪಾಲಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕುರಿತು ಮೇಲಿನ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಅವರೇ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಶಾಲೆಯ ಮುಖ್ಯ ಶಿಕ್ಷಕಿ ಎಸ್.ಬಿ.ಭಾತಖಾಂಡೆ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಶೈಕ್ಷಣಿಕ ವರ್ಷದ ಆರಂಭದಿಂದ 45 ದಿನಗಳರೆಗೆ ಶಾಲೆಯಲ್ಲಿ ಯಾವುದಾದರೂ ವಿದ್ಯಾರ್ಥಿ ಪ್ರವೇಶ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಒಬ್ಬ ವಿದ್ಯಾರ್ಥಿಯು ದಾಖಲಾತಿ ಪಡೆದಿಲ್ಲ. ಹೀಗಾಗಿ ಶಾಲೆಯನ್ನು ಮುಚ್ಚಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.</p>.<p>ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಶಿಕ್ಷಕಿಯರ ಪೈಕಿ ಇಬ್ಬರನ್ನು ಹಳೇ ಗಾಂಧಿನಗರದ ಸರ್ಕಾರಿ ಕಿರಿಯ ಮರಾಠಿ ಪ್ರಾಥಮಿಕ ಶಾಲೆ ಹಾಗೂ ಒಬ್ಬರನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 29 ಕ್ಕೆ ವರ್ಗಾವಣೆ ಮಾಡಲಾಗುವುದು' ಎಂದು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಂಡಲೀಕ ಹೇಳಿದರು.<br /> <strong>-ಇಮಾಮಹುಸೇನ್. ಎಂ.ಗೂಡುನವರ .</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>