<p><strong>ದಾವಣಗೆರೆ: </strong>ನಗರದ ಪುಣೆ-ಬೆಂಗಳೂರು (ಪಿಬಿ) ರಸ್ತೆಯ ಮರ-ಗಿಡಗಳನ್ನು ಕಡಿದು, ಸ್ಥಳ ಲಭ್ಯತೆ ಪರಿಗಣಿಸಿ, ಎಷ್ಟು ಅಡಿ ರಸ್ತೆ ವಿಸ್ತರಿಸಬೇಕು ಎಂದು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪಿಬಿ ರಸ್ತೆ ವಿಸ್ತರಣೆ ಕುರಿತ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಪಿಬಿ ರಸ್ತೆ ವಿಸ್ತರಣೆ ಕುರಿತ ಸಭೆಯಲ್ಲಿ ಸಾರ್ವಜನಿಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<br /> <br /> ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಲಹೆಯಂತೆ ನಗರದ ಪಿಬಿ ರಸ್ತೆಯ ಮರ-ಗಿಡಗಳನ್ನು ಕಡಿಸಿ, ಸ್ಥಳದ ಲಭ್ಯತೆ ಪರಿಗಣಿಸಿ ಶೀಘ್ರದಲ್ಲೇ ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣಶೆಟ್ಟಿ ವಿವರಿಸಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ರಾಜ್ಯದ ತುಮಕೂರು, ಹಿರಿಯೂರು, ಹಾವೇರಿ, ರಾಣೇಬೆನ್ನೂರು ಮತ್ತಿತರ ಕಡೆಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಿಸಲಾಗಿದೆ. <br /> <br /> ಈ ಭಾಗಗಳಲ್ಲಿ ರಸ್ತೆ ವಿಸ್ತರಣೆಗೆ ಬಳಸಿರುವ ಮಾನದಂಡಗಳನ್ನು ಅಧ್ಯಯನ ಮಾಡಿ, ನಗರದಲ್ಲಿ ಆವಶ್ಯಕತೆಗೆ ತಕ್ಕಂತೆ ಪಿಬಿ ರಸ್ತೆ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.<br /> ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪಿಬಿ ರಸ್ತೆಯ ಅಕ್ಕಪಕ್ಕದ ಸ್ಥಳಗಳಲ್ಲಿ ನೀತಿ-ನಿಯಮಕ್ಕೆ ಅನುಸಾರವಾಗಿ ನಿವೇಶನ ಖರೀದಿಸಿ, ಅನೇಕರು ಕಟ್ಟಡ ಕಟ್ಟಿಕೊಂಡಿದ್ದಾರೆ. <br /> <br /> ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಗೆ ನಿಯಮಿತವಾಗಿ ಕಂದಾಯ ಇತರ ಶುಲ್ಕ ಪಾವತಿಸಲಾಗಿದೆ. ರಸ್ತೆ ವಿಸ್ತರಣೆ ವೇಳೆ ಕಟ್ಟಡ ಮಾಲೀಕರಿಗೆ ಪೂರ್ವಮಾಹಿತಿ ಹಾಗೂ ಪರಿಹಾರ ನೀಡಬೇಕು ಎಂದು ಹೇಳಿದರು.<br /> ಮಹಾನಗರ ಪಾಲಿಕೆಗೆ ನಿಗದಿಯಾದ ಮುಖ್ಯಮಂತ್ರಿ ವಿಶೇಷ ಅನುದಾನ ರೂ 100 ಕೋಟಿಯಲ್ಲಿ ರೂ 20ಕೋಟಿ ರಸ್ತೆ ಅಭಿವೃದ್ಧಿಗಾಗಿಯೇ ಮೀಸಲಿಡಲಾಗಿದೆ. <br /> <br /> ಪಾಲಿಕೆಯ ವರದಿ ಪ್ರಕಾರ ಪಿಬಿ ರಸ್ತೆ ಇಕ್ಕೆಲಗಳಲ್ಲಿ 792 ಕಟ್ಟಡಗಳಿವೆ. ಬ್ರಿಟಿಷರ ಕಾಲದಲ್ಲಿ ನಡೆಸಲಾದ ರಸ್ತೆ ಸರ್ವೇ ಮಾಹಿತಿಯನ್ನೂ ಪರಿಗಣಿಸಿ, ಪಿಬಿ ರಸ್ತೆ ವಿಸ್ತರಿಸಬೇಕು ಎಂದು ಸಲಹೆ ನೀಡಿದರು. <br /> ವಿಧಾನ ಪರಿಷತ್ ಮುಖ್ಯಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ನಗರದ ಇಂದಿನ ಜನಸಂಖ್ಯೆ, ವಾಹನ ದಟ್ಟಣೆ ಆಧಾರದಲ್ಲಿ ರಸ್ತೆ ವಿಸ್ತರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಎಂ.ಎಸ್. ವಿಠ್ಠಲ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದ ಪುಣೆ-ಬೆಂಗಳೂರು (ಪಿಬಿ) ರಸ್ತೆಯ ಮರ-ಗಿಡಗಳನ್ನು ಕಡಿದು, ಸ್ಥಳ ಲಭ್ಯತೆ ಪರಿಗಣಿಸಿ, ಎಷ್ಟು ಅಡಿ ರಸ್ತೆ ವಿಸ್ತರಿಸಬೇಕು ಎಂದು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪಿಬಿ ರಸ್ತೆ ವಿಸ್ತರಣೆ ಕುರಿತ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಪಿಬಿ ರಸ್ತೆ ವಿಸ್ತರಣೆ ಕುರಿತ ಸಭೆಯಲ್ಲಿ ಸಾರ್ವಜನಿಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<br /> <br /> ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಲಹೆಯಂತೆ ನಗರದ ಪಿಬಿ ರಸ್ತೆಯ ಮರ-ಗಿಡಗಳನ್ನು ಕಡಿಸಿ, ಸ್ಥಳದ ಲಭ್ಯತೆ ಪರಿಗಣಿಸಿ ಶೀಘ್ರದಲ್ಲೇ ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣಶೆಟ್ಟಿ ವಿವರಿಸಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ರಾಜ್ಯದ ತುಮಕೂರು, ಹಿರಿಯೂರು, ಹಾವೇರಿ, ರಾಣೇಬೆನ್ನೂರು ಮತ್ತಿತರ ಕಡೆಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಿಸಲಾಗಿದೆ. <br /> <br /> ಈ ಭಾಗಗಳಲ್ಲಿ ರಸ್ತೆ ವಿಸ್ತರಣೆಗೆ ಬಳಸಿರುವ ಮಾನದಂಡಗಳನ್ನು ಅಧ್ಯಯನ ಮಾಡಿ, ನಗರದಲ್ಲಿ ಆವಶ್ಯಕತೆಗೆ ತಕ್ಕಂತೆ ಪಿಬಿ ರಸ್ತೆ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.<br /> ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪಿಬಿ ರಸ್ತೆಯ ಅಕ್ಕಪಕ್ಕದ ಸ್ಥಳಗಳಲ್ಲಿ ನೀತಿ-ನಿಯಮಕ್ಕೆ ಅನುಸಾರವಾಗಿ ನಿವೇಶನ ಖರೀದಿಸಿ, ಅನೇಕರು ಕಟ್ಟಡ ಕಟ್ಟಿಕೊಂಡಿದ್ದಾರೆ. <br /> <br /> ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಗೆ ನಿಯಮಿತವಾಗಿ ಕಂದಾಯ ಇತರ ಶುಲ್ಕ ಪಾವತಿಸಲಾಗಿದೆ. ರಸ್ತೆ ವಿಸ್ತರಣೆ ವೇಳೆ ಕಟ್ಟಡ ಮಾಲೀಕರಿಗೆ ಪೂರ್ವಮಾಹಿತಿ ಹಾಗೂ ಪರಿಹಾರ ನೀಡಬೇಕು ಎಂದು ಹೇಳಿದರು.<br /> ಮಹಾನಗರ ಪಾಲಿಕೆಗೆ ನಿಗದಿಯಾದ ಮುಖ್ಯಮಂತ್ರಿ ವಿಶೇಷ ಅನುದಾನ ರೂ 100 ಕೋಟಿಯಲ್ಲಿ ರೂ 20ಕೋಟಿ ರಸ್ತೆ ಅಭಿವೃದ್ಧಿಗಾಗಿಯೇ ಮೀಸಲಿಡಲಾಗಿದೆ. <br /> <br /> ಪಾಲಿಕೆಯ ವರದಿ ಪ್ರಕಾರ ಪಿಬಿ ರಸ್ತೆ ಇಕ್ಕೆಲಗಳಲ್ಲಿ 792 ಕಟ್ಟಡಗಳಿವೆ. ಬ್ರಿಟಿಷರ ಕಾಲದಲ್ಲಿ ನಡೆಸಲಾದ ರಸ್ತೆ ಸರ್ವೇ ಮಾಹಿತಿಯನ್ನೂ ಪರಿಗಣಿಸಿ, ಪಿಬಿ ರಸ್ತೆ ವಿಸ್ತರಿಸಬೇಕು ಎಂದು ಸಲಹೆ ನೀಡಿದರು. <br /> ವಿಧಾನ ಪರಿಷತ್ ಮುಖ್ಯಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ನಗರದ ಇಂದಿನ ಜನಸಂಖ್ಯೆ, ವಾಹನ ದಟ್ಟಣೆ ಆಧಾರದಲ್ಲಿ ರಸ್ತೆ ವಿಸ್ತರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಎಂ.ಎಸ್. ವಿಠ್ಠಲ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>