<p><strong>ರಾಜರಾಜೇಶ್ವರಿನಗರ:</strong> `ಉದ್ಯಾನವನಗಳು ಹಾಗೂ ಮರ ಗಿಡಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು~ ಎಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಕರೆ ನೀಡಿದರು.<br /> <br /> ಉತ್ತರಹಳ್ಳಿ ಸಮೀಪದ ರಾಮಾಂಜನೇಯ ನಗರದಲ್ಲಿ ಬಿಬಿಎಂಪಿ ವತಿಯಿಂದ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಉದ್ಯಾನವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಉತ್ತಮ ಪರಿಸರದ ದೃಷ್ಠಿಯಿಂದ ಅವಶ್ಯಕತೆ ಇರುವ ಕಡೆ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗುವುದು. ಜೊತೆಗೆ ಉತ್ತರಹಳ್ಳಿಯ ವಿವಿಧ ಕಡೆಗಳಲ್ಲಿ ಯೋಗಕೇಂದ್ರ ಮತ್ತು ಗ್ರಂಥಾಲಯಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು~ ಎಂದು ತಿಳಿಸಿದರು.<br /> <br /> ಮಂಜುನಾಥನಗರದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬಿಬಿಎಂಪಿ ಸದಸ್ಯೆ ವಿಜಯಾ ರಮೇಶ್, ಎಂಜಿನಿಯರ್ಗಳಾದ ಶ್ರೀಕಂಠೇಗೌಡ, ಎಸ್.ವೆಂಕಟೇಶ್, ಉದಯಕುಮಾರ್, ರಾಮಾಂಜನೇಯನಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಕೃಷ್ಣ ಅಯ್ಯರ್, ಟಿ.ಎ.ನಾಗನರಸಿಂಹ, ಬಲರಾಮ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> `ಉದ್ಯಾನವನಗಳು ಹಾಗೂ ಮರ ಗಿಡಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು~ ಎಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಕರೆ ನೀಡಿದರು.<br /> <br /> ಉತ್ತರಹಳ್ಳಿ ಸಮೀಪದ ರಾಮಾಂಜನೇಯ ನಗರದಲ್ಲಿ ಬಿಬಿಎಂಪಿ ವತಿಯಿಂದ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಉದ್ಯಾನವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಉತ್ತಮ ಪರಿಸರದ ದೃಷ್ಠಿಯಿಂದ ಅವಶ್ಯಕತೆ ಇರುವ ಕಡೆ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗುವುದು. ಜೊತೆಗೆ ಉತ್ತರಹಳ್ಳಿಯ ವಿವಿಧ ಕಡೆಗಳಲ್ಲಿ ಯೋಗಕೇಂದ್ರ ಮತ್ತು ಗ್ರಂಥಾಲಯಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು~ ಎಂದು ತಿಳಿಸಿದರು.<br /> <br /> ಮಂಜುನಾಥನಗರದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬಿಬಿಎಂಪಿ ಸದಸ್ಯೆ ವಿಜಯಾ ರಮೇಶ್, ಎಂಜಿನಿಯರ್ಗಳಾದ ಶ್ರೀಕಂಠೇಗೌಡ, ಎಸ್.ವೆಂಕಟೇಶ್, ಉದಯಕುಮಾರ್, ರಾಮಾಂಜನೇಯನಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಕೃಷ್ಣ ಅಯ್ಯರ್, ಟಿ.ಎ.ನಾಗನರಸಿಂಹ, ಬಲರಾಮ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>