<p>ತ್ರಿಶ್ಶೂರ್ (ಪಿಟಿಐ): ಖ್ಯಾತ ಮಲೆಯಾಳಂ ಸಾಹಿತಿ ಹಾಗೂ ವಾಗ್ಮಿ ಸುಕುಮಾರ್ ಅಯಿಕ್ಕೋಡ್ (86) ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಸುಮಾರು ಐದು ದಶಕಗಳ ಕಾಲ ತಮ್ಮ ಬರಹಗಳ ಮೂಲಕ ಮಲೆಯಾಳಂ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದ ಅವರು ವಿಮರ್ಶಕರಾಗಿಯೂ ಖ್ಯಾತಿ ಗಳಿಸಿದ್ದರು. ಜತೆಗೆ ಶಿಕ್ಷಣ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಮಿಂಚಿದ್ದರು. ಅಲ್ಲದೇ ವಿವಾದಗಳಿಂದಾಗಿಯೂ ಅವರು ಆಗಾಗ್ಗೆ ಸುದ್ದಿಯಲ್ಲಿದ್ದರು.<br /> <br /> ಅವಿವಾಹಿತರಾಗಿದ್ದ ಅವರು, ಕಳೆದ ಕೆಲವು ವಾರಗಳಿಂದ ಇಲ್ಲಿನ ಅಮಲಾ ಕ್ಯಾನ್ಸರ್ ಸೆಂಟರ್ನಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತ್ದ್ದಿದರು. ಅಯಿಕ್ಕೋಡ್ ಅವರ ಆರೋಗ್ಯ ಮೂರು ದಿನಗಳ ಹಿಂದೆ ತೀರಾ ಹದಗೆಟ್ಟಿತ್ತು. <br /> ನ್ಯಾಷನಲ್ ಬುಕ್ ಟ್ರಸ್ಟ್ (ಎನ್ಬಿಟಿ)ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಕೇರಳ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. <br /> <br /> ಭಾರತೀಯ ತತ್ವಶಾಸ್ತ್ರ, ಉಪನಿಷತ್ ಮತ್ತು ವೇದಗಳ ಕುರಿತು 1984ರಲ್ಲಿ ಅವರು ಬರೆದ `ತತ್ವಮಸಿ~ ಅವರ ಖ್ಯಾತ ಕೃತಿಗಳಲ್ಲಿ ಒಂದಾಗಿದ್ದು, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಯಲಾರ್ ಪ್ರಶಸ್ತಿ ಸೇರಿದಂತೆ ಒಟ್ಟು 12 ಪ್ರಶಸ್ತಿಗಳು ಈ ಕೃತಿಗೆ ದೊರೆತಿದ್ದವು. <br /> <br /> 2007ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮೂಲಕ ಅವರು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದರು. <br /> <br /> ಅಯಿಕ್ಕೋಡ್ ಅವರ ಅಂತ್ಯಸಂಸ್ಕಾರ ಬುಧವಾರ 11 ಗಂಟೆಗೆ ಕಣ್ಣೂರಿನ ಪಯ್ಯಂಬಲದಲ್ಲಿ ನೆರವೇರಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ರಿಶ್ಶೂರ್ (ಪಿಟಿಐ): ಖ್ಯಾತ ಮಲೆಯಾಳಂ ಸಾಹಿತಿ ಹಾಗೂ ವಾಗ್ಮಿ ಸುಕುಮಾರ್ ಅಯಿಕ್ಕೋಡ್ (86) ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಸುಮಾರು ಐದು ದಶಕಗಳ ಕಾಲ ತಮ್ಮ ಬರಹಗಳ ಮೂಲಕ ಮಲೆಯಾಳಂ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದ ಅವರು ವಿಮರ್ಶಕರಾಗಿಯೂ ಖ್ಯಾತಿ ಗಳಿಸಿದ್ದರು. ಜತೆಗೆ ಶಿಕ್ಷಣ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಮಿಂಚಿದ್ದರು. ಅಲ್ಲದೇ ವಿವಾದಗಳಿಂದಾಗಿಯೂ ಅವರು ಆಗಾಗ್ಗೆ ಸುದ್ದಿಯಲ್ಲಿದ್ದರು.<br /> <br /> ಅವಿವಾಹಿತರಾಗಿದ್ದ ಅವರು, ಕಳೆದ ಕೆಲವು ವಾರಗಳಿಂದ ಇಲ್ಲಿನ ಅಮಲಾ ಕ್ಯಾನ್ಸರ್ ಸೆಂಟರ್ನಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತ್ದ್ದಿದರು. ಅಯಿಕ್ಕೋಡ್ ಅವರ ಆರೋಗ್ಯ ಮೂರು ದಿನಗಳ ಹಿಂದೆ ತೀರಾ ಹದಗೆಟ್ಟಿತ್ತು. <br /> ನ್ಯಾಷನಲ್ ಬುಕ್ ಟ್ರಸ್ಟ್ (ಎನ್ಬಿಟಿ)ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಕೇರಳ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. <br /> <br /> ಭಾರತೀಯ ತತ್ವಶಾಸ್ತ್ರ, ಉಪನಿಷತ್ ಮತ್ತು ವೇದಗಳ ಕುರಿತು 1984ರಲ್ಲಿ ಅವರು ಬರೆದ `ತತ್ವಮಸಿ~ ಅವರ ಖ್ಯಾತ ಕೃತಿಗಳಲ್ಲಿ ಒಂದಾಗಿದ್ದು, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಯಲಾರ್ ಪ್ರಶಸ್ತಿ ಸೇರಿದಂತೆ ಒಟ್ಟು 12 ಪ್ರಶಸ್ತಿಗಳು ಈ ಕೃತಿಗೆ ದೊರೆತಿದ್ದವು. <br /> <br /> 2007ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮೂಲಕ ಅವರು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದರು. <br /> <br /> ಅಯಿಕ್ಕೋಡ್ ಅವರ ಅಂತ್ಯಸಂಸ್ಕಾರ ಬುಧವಾರ 11 ಗಂಟೆಗೆ ಕಣ್ಣೂರಿನ ಪಯ್ಯಂಬಲದಲ್ಲಿ ನೆರವೇರಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>