<p>ಘಟಪ್ರಭಾ (ಗೋಕಾಕ): `ಅಧ್ಯಾತ್ಮ ಪರಂಪರೆಯನ್ನು ಹೊಂದಿರುವ ಕೇಂದ್ರಗಳೇ ಮಠಗಳು~ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಸೋಮವಾರ ಇಲ್ಲಿಯ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಮಲ್ಲಿಕಾರ್ಜುನ ದೇವರ ಪಟ್ಟಾಧಿಕಾರ ಮಹೋತ್ಸವದ ಶೂನ್ಯ ಸಿಂಹಾಸನಾರೋಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.<br /> <br /> `ಕರ್ನಾಟಕದ ಮಠಗಳು ಶ್ರೇಷ್ಠ ಐತಿಹಾಸಿಕ ಹಿನ್ನೆಲೆ ಹೊಂದಿವೆ. ಎಲ್ಲರಿಗೂ ಶಿವಸ್ವರೂಪದ ದೀಕ್ಷೆ ಕೊಟ್ಟು, ಅವರು ಯಾವಾಗಲೂ ಸನ್ಮಾರ್ಗದಲ್ಲಿ ನಡೆಯಬೇಕು ಮತ್ತು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂಬುದೇ ಮಠಗಳ ಉದ್ದೇಶ. ಇಂತಹ ಮಠಗಳ ಅಧಿಪತ್ಯ ಹೊಂದಿದವರಿಗೆ ಜಂಗಮ, ಚರಮೂರ್ತಿಗಳು, ಪೀಠಾಧಿಪತಿಗಳೆಂದು ಕರೆಯುವುದು ರೂಢಿಯಲ್ಲಿದೆ~ಎಂದರು. <br /> <br /> `ಮಹಾ ತಪಸ್ವಿಗಳಾದ ವಿಜಯ ಮಹಾಂತ ಶಿವಯೋಗಿಗಳು, ಲಿಂಗೈಕ್ಯ ಡಾ.ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳು ಸಹ ಅರಸಿಕೇರೆ ತಾಲ್ಲೂಕಿನ ಶಶಿವಾಳ ಗ್ರಾಮದವರು. ಗುಬ್ಬಲಗುಡ್ಡ ಮಠಕ್ಕೆ ಪಟ್ಟಾಧಿಕಾರಿಯಾದ ಮಲ್ಲಿಕಾರ್ಜುನ ಸ್ವಾಮೀಜಿ ಕೂಡಾ ಶಶಿವಾಳ ಗ್ರಾಮದವರು ಎಂಬುದು ಹೆಮ್ಮೆಯ ವಿಷಯ. ಅವರು ಈ ಭಾಗದ ಜನರಿಗೆ ಉತ್ತಮ ಸಂಸ್ಕಾರ ನೀಡುತ್ತಿದ್ದಾರೆ~ ಎಂದು ಹೇಳಿದರು.<br /> <br /> ಬೆಳಗಾವಿ ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಮುರಗೋಡದ ನೀಲಕಂಠ ಸ್ವಾಮೀಜಿ ನೇತೃತ್ವ ವಹಿಸಿದ್ದರು.<br /> <br /> ಹುಬ್ಬಳ್ಳಿಯ ಸಿದ್ಧಲಿಂಗ ಸ್ವಾಮೀಜಿ ಹಾಗೂ ಬಸವಲಿಂಗ ಸ್ವಾಮೀಜಿ, ಮುನವಳ್ಳಿಯ ಮುರುಘೇಂದ್ರ ಸ್ವಾಮೀಜಿ, ನವಲಗುಂದ ಬಸವಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಎ.ಬಿ. ಪಾಟೀಲ, ಪಿ.ಸಿ. ಸಿದ್ಧನಗೌಡ, ಅಶೋಕ ಪೂಜೇರಿ, ಜೆ.ಜಿ. ಸಹಕಾರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಆರ್. ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಘಟಪ್ರಭಾ (ಗೋಕಾಕ): `ಅಧ್ಯಾತ್ಮ ಪರಂಪರೆಯನ್ನು ಹೊಂದಿರುವ ಕೇಂದ್ರಗಳೇ ಮಠಗಳು~ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಸೋಮವಾರ ಇಲ್ಲಿಯ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಮಲ್ಲಿಕಾರ್ಜುನ ದೇವರ ಪಟ್ಟಾಧಿಕಾರ ಮಹೋತ್ಸವದ ಶೂನ್ಯ ಸಿಂಹಾಸನಾರೋಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.<br /> <br /> `ಕರ್ನಾಟಕದ ಮಠಗಳು ಶ್ರೇಷ್ಠ ಐತಿಹಾಸಿಕ ಹಿನ್ನೆಲೆ ಹೊಂದಿವೆ. ಎಲ್ಲರಿಗೂ ಶಿವಸ್ವರೂಪದ ದೀಕ್ಷೆ ಕೊಟ್ಟು, ಅವರು ಯಾವಾಗಲೂ ಸನ್ಮಾರ್ಗದಲ್ಲಿ ನಡೆಯಬೇಕು ಮತ್ತು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂಬುದೇ ಮಠಗಳ ಉದ್ದೇಶ. ಇಂತಹ ಮಠಗಳ ಅಧಿಪತ್ಯ ಹೊಂದಿದವರಿಗೆ ಜಂಗಮ, ಚರಮೂರ್ತಿಗಳು, ಪೀಠಾಧಿಪತಿಗಳೆಂದು ಕರೆಯುವುದು ರೂಢಿಯಲ್ಲಿದೆ~ಎಂದರು. <br /> <br /> `ಮಹಾ ತಪಸ್ವಿಗಳಾದ ವಿಜಯ ಮಹಾಂತ ಶಿವಯೋಗಿಗಳು, ಲಿಂಗೈಕ್ಯ ಡಾ.ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳು ಸಹ ಅರಸಿಕೇರೆ ತಾಲ್ಲೂಕಿನ ಶಶಿವಾಳ ಗ್ರಾಮದವರು. ಗುಬ್ಬಲಗುಡ್ಡ ಮಠಕ್ಕೆ ಪಟ್ಟಾಧಿಕಾರಿಯಾದ ಮಲ್ಲಿಕಾರ್ಜುನ ಸ್ವಾಮೀಜಿ ಕೂಡಾ ಶಶಿವಾಳ ಗ್ರಾಮದವರು ಎಂಬುದು ಹೆಮ್ಮೆಯ ವಿಷಯ. ಅವರು ಈ ಭಾಗದ ಜನರಿಗೆ ಉತ್ತಮ ಸಂಸ್ಕಾರ ನೀಡುತ್ತಿದ್ದಾರೆ~ ಎಂದು ಹೇಳಿದರು.<br /> <br /> ಬೆಳಗಾವಿ ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಮುರಗೋಡದ ನೀಲಕಂಠ ಸ್ವಾಮೀಜಿ ನೇತೃತ್ವ ವಹಿಸಿದ್ದರು.<br /> <br /> ಹುಬ್ಬಳ್ಳಿಯ ಸಿದ್ಧಲಿಂಗ ಸ್ವಾಮೀಜಿ ಹಾಗೂ ಬಸವಲಿಂಗ ಸ್ವಾಮೀಜಿ, ಮುನವಳ್ಳಿಯ ಮುರುಘೇಂದ್ರ ಸ್ವಾಮೀಜಿ, ನವಲಗುಂದ ಬಸವಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಎ.ಬಿ. ಪಾಟೀಲ, ಪಿ.ಸಿ. ಸಿದ್ಧನಗೌಡ, ಅಶೋಕ ಪೂಜೇರಿ, ಜೆ.ಜಿ. ಸಹಕಾರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಆರ್. ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>