<p><strong>ಶಿರಾ: </strong>ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ಹದಗೆಟ್ಟಿದೆ. ಮಳೆ ಬಂದರೆ ಸಂತೋಷ ಪಡಬೇಕು. ಆದರೆ ಇಲ್ಲಿ ಮಳೆ ಯಾಕಾದರೂ ಬರುತ್ತದೆ ಎಂದು ನಾಗರಿಕರು ಆಲಾಪಿಸುವಂತಾಗಿದೆ. ಕೆಸರು ಗದ್ದೆಯಾಗುವ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾಗಿದೆ.<br /> <br /> ತಾಲ್ಲೂಕಿನ ನೇಜಯಂತಿ ಗ್ರಾಮದಿಂದ ದ್ವಾರನಕುಂಟೆಗೆ ಹೋಗುವ ರಸ್ತೆಯ ಸ್ಥಿತಿಯಂತೂ ಕೇಳುವರಿಲ್ಲದಂತಾಗಿದೆ. ಹುಲಿಕುಂಟೆ ಹೋಬಳಿ ಗಡಿ ಗ್ರಾಮವಾದ ನೇಜಯಂತಿ ಗ್ರಾಮದಲ್ಲಿ ಹಿಂದುಳಿದ ವರ್ಗದವರು, ದಲಿತರು ಸೇರಿದಂತೆ ರೈತ ಕುಟುಂಬಗಳು ಹೆಚ್ಚಾಗಿ ವಾಸವಾಗಿವೆ.<br /> <br /> ಸುಮಾರು 800 ಜನಸಂಖ್ಯೆಯಿರುವ ಗ್ರಾಮದಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಹಾಗೂ ಬಡ ರೋಗಿಗಳು ಚಿಕಿತ್ಸೆಗಾಗಿ ಈ ರಸ್ತೆಯ ಮೂಲಕವೇ ಸುಮಾರು 3 ಕಿ.ಮೀ ದೂರದಲ್ಲಿರುವ ದ್ವಾರನಕುಂಟೆ ಗ್ರಾಮಕ್ಕೆ ಹೋಗಬೇಕಿದ್ದು, ರಸ್ತೆ ಗುಂಡಿ ಬಿದ್ದಿರುವ ಕಾರಣ ದ್ವಿಚಕ್ರ ವಾಹನ, ಸೈಕಲ್ಗಳಲ್ಲಿ ಸಂಚರಿಸಲು ಪರದಾಡಬೇಕಿದೆ.<br /> <br /> ಆಸ್ಪತ್ರೆಗೆ ಹೋಗುವ ವೃದ್ಧರು, ಅಂಗವಿಕಲರು, ಮಹಿಳೆಯರಿಗೆ ತೀವ್ರ ತೊಂದರೆಯಾಗಿದ್ದು ತಕ್ಷಣ ಈ ರಸ್ತೆಯನ್ನು ಅಭಿವೃದ್ದಿಪಡಿಸಿ ಡಾಂಬರು ಹಾಕುವಂತೆ ಗ್ರಾಮಸ್ಥರು ಮತ್ತು ವಿಧ್ಯಾರ್ಥಿಗಳು ಒತ್ತಾಯಿಸಿದ್ದಾರೆ.<br /> <br /> ನೇಜಯಂತಿ– ದ್ವಾರನಕುಂಟೆ ರಸ್ತೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುತ್ತಿದ್ದು ರಸ್ತೆಯ ಅವ್ಯವಸ್ಥೆಯ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ದೂರನ್ನು ಯಾರೂ ಕೇಳುವರಿಲ್ಲ ಎನ್ನುವುದು ಗ್ರಾಮಸ್ಥರ ದೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ಹದಗೆಟ್ಟಿದೆ. ಮಳೆ ಬಂದರೆ ಸಂತೋಷ ಪಡಬೇಕು. ಆದರೆ ಇಲ್ಲಿ ಮಳೆ ಯಾಕಾದರೂ ಬರುತ್ತದೆ ಎಂದು ನಾಗರಿಕರು ಆಲಾಪಿಸುವಂತಾಗಿದೆ. ಕೆಸರು ಗದ್ದೆಯಾಗುವ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾಗಿದೆ.<br /> <br /> ತಾಲ್ಲೂಕಿನ ನೇಜಯಂತಿ ಗ್ರಾಮದಿಂದ ದ್ವಾರನಕುಂಟೆಗೆ ಹೋಗುವ ರಸ್ತೆಯ ಸ್ಥಿತಿಯಂತೂ ಕೇಳುವರಿಲ್ಲದಂತಾಗಿದೆ. ಹುಲಿಕುಂಟೆ ಹೋಬಳಿ ಗಡಿ ಗ್ರಾಮವಾದ ನೇಜಯಂತಿ ಗ್ರಾಮದಲ್ಲಿ ಹಿಂದುಳಿದ ವರ್ಗದವರು, ದಲಿತರು ಸೇರಿದಂತೆ ರೈತ ಕುಟುಂಬಗಳು ಹೆಚ್ಚಾಗಿ ವಾಸವಾಗಿವೆ.<br /> <br /> ಸುಮಾರು 800 ಜನಸಂಖ್ಯೆಯಿರುವ ಗ್ರಾಮದಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಹಾಗೂ ಬಡ ರೋಗಿಗಳು ಚಿಕಿತ್ಸೆಗಾಗಿ ಈ ರಸ್ತೆಯ ಮೂಲಕವೇ ಸುಮಾರು 3 ಕಿ.ಮೀ ದೂರದಲ್ಲಿರುವ ದ್ವಾರನಕುಂಟೆ ಗ್ರಾಮಕ್ಕೆ ಹೋಗಬೇಕಿದ್ದು, ರಸ್ತೆ ಗುಂಡಿ ಬಿದ್ದಿರುವ ಕಾರಣ ದ್ವಿಚಕ್ರ ವಾಹನ, ಸೈಕಲ್ಗಳಲ್ಲಿ ಸಂಚರಿಸಲು ಪರದಾಡಬೇಕಿದೆ.<br /> <br /> ಆಸ್ಪತ್ರೆಗೆ ಹೋಗುವ ವೃದ್ಧರು, ಅಂಗವಿಕಲರು, ಮಹಿಳೆಯರಿಗೆ ತೀವ್ರ ತೊಂದರೆಯಾಗಿದ್ದು ತಕ್ಷಣ ಈ ರಸ್ತೆಯನ್ನು ಅಭಿವೃದ್ದಿಪಡಿಸಿ ಡಾಂಬರು ಹಾಕುವಂತೆ ಗ್ರಾಮಸ್ಥರು ಮತ್ತು ವಿಧ್ಯಾರ್ಥಿಗಳು ಒತ್ತಾಯಿಸಿದ್ದಾರೆ.<br /> <br /> ನೇಜಯಂತಿ– ದ್ವಾರನಕುಂಟೆ ರಸ್ತೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುತ್ತಿದ್ದು ರಸ್ತೆಯ ಅವ್ಯವಸ್ಥೆಯ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ದೂರನ್ನು ಯಾರೂ ಕೇಳುವರಿಲ್ಲ ಎನ್ನುವುದು ಗ್ರಾಮಸ್ಥರ ದೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>