<p><strong>ನವದೆಹಲಿ (ಪಿಟಿಐ): </strong>ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರತ ತತ್ತರಿಸಿದ್ದು, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣದಲ್ಲಿ ಭಾರಿ ಸಾವು-ನೋವು ಸಂಭವಿಸಿದೆ.<br /> <br /> ಯಮುನಾ ಸೇರಿದಂತೆ ಈ ರಾಜ್ಯಗಳ ಪ್ರಮುಖ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಭೂಕುಸಿತ ಮತ್ತು ನೆರೆಯಿಂದಾಗಿ 60ಕ್ಕೂ ಜನರು ಮೃತಪಟ್ಟಿದ್ದಾರೆ. ಸಾವಿರಾರು ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ. ಸಾವಿನ ಸಂಖ್ಯೆ ಏರುವ ನಿರೀಕ್ಷೆ ಇದೆ.ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಪ್ರತಿಕೂಲ ಹವಾಮಾನದಿಂದ ಹಲವು ಕಡೆಗಳಲ್ಲಿ ಪರಿಹಾರ ಕಾರ್ಯಕ್ಕೆ ಅಡಚಣೆಯಾಗಿದೆ.</p>.<p><strong>ಉತ್ತರಾಖಂಡ- 30 ಸಾವು (ಡೆಹ್ರಾಡೂನ್ ವರದಿ):</strong> ಪ್ರವಾಹ ಹಾಗೂ ಭೂ ಕುಸಿತಕ್ಕೆ ಸಿಲುಕಿ ಉತ್ತರಾಖಂಡದಲ್ಲಿ 30 ಜನರು ಮೃತಪಟ್ಟಿದ್ದಾರೆ. 19 ಜನ ಗಾಯಗೊಂಡಿದ್ದಾರೆ.164ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಇನ್ನೂ ಭಾರಿ ಮಳೆಯಾಗಲಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.<br /> <br /> ಮಳೆಯ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಬದರಿನಾಥ ಮತ್ತಿತರ ಪುಣ್ಯಕ್ಷೇತ್ರಗಳ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಾರ್ಷಿಕವಾಗಿ ನಡೆಯುವ ಕೈಲಾಸ ಮಾನಸ ಸರೋವರ ಯಾತ್ರೆಯನ್ನೂ ಸ್ಥಗಿತಗೊಳಿಸಲಾಗಿದೆ. ಈ ಪವಿತ್ರ ಕ್ಷೇತ್ರಗಳಿಗೆ ಯಾತ್ರೆ ತೆರಳಿರುವ ಸಾವಿರಾರು ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. <br /> <br /> ತುಂಬಿ ಹರಿಯುತ್ತಿರುವ ನದಿಗಳು: ಭಾರಿ ಮಳೆಯ ಕಾರಣದಿಂದ ಗಂಗಾ, ಯಮುನಾ ಹಾಗೂ ಅವುಗಳ ಉಪನದಿಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹಕ್ಕೆ ಸಿಲುಕಿ ರಸ್ತೆಗಳು, ಸೇತುವೆಗಳು, ಕಟ್ಟಡಗಳು ಕೊಚ್ಚಿಹೋಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ.<br /> <br /> <strong>ಹರಿಯಾಣ ವರದಿ: </strong>ಹರಿಯಾಣದಲ್ಲೂ ಭಾರಿ ಮಳೆಯಾಗುತ್ತಿದ್ದು, ಯಮುನಾನಗರ ಜಿಲ್ಲೆಯು ನೆರೆಯಿಂದ ತತ್ತರಿಸಿದೆ. ಪ್ರವಾಹದಲ್ಲಿ ಸಿಲುಕಿದ್ದ 15 ಮಕ್ಕಳು ಸೇರಿದಂತೆ 50 ಜನರನ್ನು ರಕ್ಷಿಸಲಾಗಿದೆ.<br /> <br /> ಮಾರ್ಗ ಮಧ್ಯೆ ಹರಭಜನ್ (ಡೆಹ್ರಾಡೂನ್ ವರದಿ): ಮಳೆ ಹಾಗೂ ಭೂ ಕುಸಿತದಿಂದಾಗಿ ಉತ್ತರಾಖಂಡದಲ್ಲಿ ಮಾರ್ಗ ಮಧ್ಯೆ ಸಿಲುಕಿರುವ ಯಾತ್ರಾರ್ಥಿಗಳಲ್ಲಿ ಕ್ರಿಕೆಟಿಗ ಹರಭಜನ್ ಸಿಂಗ್ ಕೂಡ ಸೇರಿದ್ದಾರೆ.<br /> <br /> ಸಿಂಗ್ ಅವರು ಈಗ ಜೋಶಿಮತ್ನಲ್ಲಿರುವ ಭಾರತ-ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ. ಭಾನುವಾರದಿಂದ ಅವರು ಗಡಿ ಕಾಯುತ್ತಿರುವ ಯೋಧರ ಆಶ್ರಯದಲ್ಲಿದ್ದಾರೆ.<br /> <br /> ಡೆಹ್ರಾಡೂನ್ನ ಹೇಮಕುಂಡ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಹರಭಜನ್ ಸಿಂಗ್ ಅವರು ಅಲ್ಲಿಂದ ಹಿಂದಿರುಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಸಿಕ್ಕಿಹಾಕಿಕೊಂಡಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರತ ತತ್ತರಿಸಿದ್ದು, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣದಲ್ಲಿ ಭಾರಿ ಸಾವು-ನೋವು ಸಂಭವಿಸಿದೆ.<br /> <br /> ಯಮುನಾ ಸೇರಿದಂತೆ ಈ ರಾಜ್ಯಗಳ ಪ್ರಮುಖ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಭೂಕುಸಿತ ಮತ್ತು ನೆರೆಯಿಂದಾಗಿ 60ಕ್ಕೂ ಜನರು ಮೃತಪಟ್ಟಿದ್ದಾರೆ. ಸಾವಿರಾರು ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ. ಸಾವಿನ ಸಂಖ್ಯೆ ಏರುವ ನಿರೀಕ್ಷೆ ಇದೆ.ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಪ್ರತಿಕೂಲ ಹವಾಮಾನದಿಂದ ಹಲವು ಕಡೆಗಳಲ್ಲಿ ಪರಿಹಾರ ಕಾರ್ಯಕ್ಕೆ ಅಡಚಣೆಯಾಗಿದೆ.</p>.<p><strong>ಉತ್ತರಾಖಂಡ- 30 ಸಾವು (ಡೆಹ್ರಾಡೂನ್ ವರದಿ):</strong> ಪ್ರವಾಹ ಹಾಗೂ ಭೂ ಕುಸಿತಕ್ಕೆ ಸಿಲುಕಿ ಉತ್ತರಾಖಂಡದಲ್ಲಿ 30 ಜನರು ಮೃತಪಟ್ಟಿದ್ದಾರೆ. 19 ಜನ ಗಾಯಗೊಂಡಿದ್ದಾರೆ.164ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಇನ್ನೂ ಭಾರಿ ಮಳೆಯಾಗಲಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.<br /> <br /> ಮಳೆಯ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಬದರಿನಾಥ ಮತ್ತಿತರ ಪುಣ್ಯಕ್ಷೇತ್ರಗಳ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಾರ್ಷಿಕವಾಗಿ ನಡೆಯುವ ಕೈಲಾಸ ಮಾನಸ ಸರೋವರ ಯಾತ್ರೆಯನ್ನೂ ಸ್ಥಗಿತಗೊಳಿಸಲಾಗಿದೆ. ಈ ಪವಿತ್ರ ಕ್ಷೇತ್ರಗಳಿಗೆ ಯಾತ್ರೆ ತೆರಳಿರುವ ಸಾವಿರಾರು ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. <br /> <br /> ತುಂಬಿ ಹರಿಯುತ್ತಿರುವ ನದಿಗಳು: ಭಾರಿ ಮಳೆಯ ಕಾರಣದಿಂದ ಗಂಗಾ, ಯಮುನಾ ಹಾಗೂ ಅವುಗಳ ಉಪನದಿಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹಕ್ಕೆ ಸಿಲುಕಿ ರಸ್ತೆಗಳು, ಸೇತುವೆಗಳು, ಕಟ್ಟಡಗಳು ಕೊಚ್ಚಿಹೋಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ.<br /> <br /> <strong>ಹರಿಯಾಣ ವರದಿ: </strong>ಹರಿಯಾಣದಲ್ಲೂ ಭಾರಿ ಮಳೆಯಾಗುತ್ತಿದ್ದು, ಯಮುನಾನಗರ ಜಿಲ್ಲೆಯು ನೆರೆಯಿಂದ ತತ್ತರಿಸಿದೆ. ಪ್ರವಾಹದಲ್ಲಿ ಸಿಲುಕಿದ್ದ 15 ಮಕ್ಕಳು ಸೇರಿದಂತೆ 50 ಜನರನ್ನು ರಕ್ಷಿಸಲಾಗಿದೆ.<br /> <br /> ಮಾರ್ಗ ಮಧ್ಯೆ ಹರಭಜನ್ (ಡೆಹ್ರಾಡೂನ್ ವರದಿ): ಮಳೆ ಹಾಗೂ ಭೂ ಕುಸಿತದಿಂದಾಗಿ ಉತ್ತರಾಖಂಡದಲ್ಲಿ ಮಾರ್ಗ ಮಧ್ಯೆ ಸಿಲುಕಿರುವ ಯಾತ್ರಾರ್ಥಿಗಳಲ್ಲಿ ಕ್ರಿಕೆಟಿಗ ಹರಭಜನ್ ಸಿಂಗ್ ಕೂಡ ಸೇರಿದ್ದಾರೆ.<br /> <br /> ಸಿಂಗ್ ಅವರು ಈಗ ಜೋಶಿಮತ್ನಲ್ಲಿರುವ ಭಾರತ-ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ. ಭಾನುವಾರದಿಂದ ಅವರು ಗಡಿ ಕಾಯುತ್ತಿರುವ ಯೋಧರ ಆಶ್ರಯದಲ್ಲಿದ್ದಾರೆ.<br /> <br /> ಡೆಹ್ರಾಡೂನ್ನ ಹೇಮಕುಂಡ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಹರಭಜನ್ ಸಿಂಗ್ ಅವರು ಅಲ್ಲಿಂದ ಹಿಂದಿರುಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಸಿಕ್ಕಿಹಾಕಿಕೊಂಡಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>