<p><span style="font-size: 26px;"><strong>ನಾಪೋಕ್ಲು: </strong>ನಾಪೋಕ್ಲು ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮಂಗಾರು ಬಿರುಸುಗೊಂಡಿದ್ದು, ರೈತರು ಬಿರುಸಿನ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.</span><br /> <br /> ಗದ್ದೆಗಳನ್ನು ಉಳುಮೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಿಟ್ಟುಬಿಟ್ಟು ಮಳೆಯಾಗುತ್ತಿ ರುವುದರಿಂದ ಕಾಫಿ ಬೆಳೆಗಾರರು ಕಾಫಿ ಗಿಡಗಳಿಗೆ ರಸಗೊಬ್ಬರ ಪೂರೈಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೂಲಿ ಕಾರ್ಮಿಕರ ಕೊರತೆಯಿಂದ ಬೇರೆಡೆಗಳಿಂದ ಕೂಲಿ ಕಾರ್ಮಿಕರನ್ನು ವಾಹನಗಳಲ್ಲಿ ಸಾಗಿಸುತ್ತಿರುವುದು ಸಾಮಾನ್ಯವಾಗಿದೆ.<br /> <br /> ನಾಪೋಕ್ಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಅವಶ್ಯಕ ರಸಗೊಬ್ಬರ ದಾಸ್ತಾನು ಇದೆ. ಈ ವರ್ಷ ರಸಗೊಬ್ಬರ ಕೊರತೆಯಾಗುವುದಿಲ್ಲ. ರೈತರಿಗೆ ವಿತರಿಸಲು ಅವಶ್ಯವಿರುವ ಗೊಬ್ಬರ ಸರಬರಾಜಾಗುತ್ತಿದೆ ಎಂಬುದು ಮಾರಾಟಗಾರರ ಅಭಿಪ್ರಾಯ.<br /> <br /> ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿಯೂ ರೈತರಿಗೆ ಬೇಕಾದ ಇಂಟಾನ್ ಹಾಗೂ ತುಂಗಾ ಬತ್ತದ ಬೀಜಗಳು ಅವಶ್ಯವಿರುವಷ್ಟು ದಾಸ್ತಾನು ಇದೆ ಎಂದು ನಾಪೋಕ್ಲು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮೀರಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ನಾಪೋಕ್ಲು: </strong>ನಾಪೋಕ್ಲು ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮಂಗಾರು ಬಿರುಸುಗೊಂಡಿದ್ದು, ರೈತರು ಬಿರುಸಿನ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.</span><br /> <br /> ಗದ್ದೆಗಳನ್ನು ಉಳುಮೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಿಟ್ಟುಬಿಟ್ಟು ಮಳೆಯಾಗುತ್ತಿ ರುವುದರಿಂದ ಕಾಫಿ ಬೆಳೆಗಾರರು ಕಾಫಿ ಗಿಡಗಳಿಗೆ ರಸಗೊಬ್ಬರ ಪೂರೈಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೂಲಿ ಕಾರ್ಮಿಕರ ಕೊರತೆಯಿಂದ ಬೇರೆಡೆಗಳಿಂದ ಕೂಲಿ ಕಾರ್ಮಿಕರನ್ನು ವಾಹನಗಳಲ್ಲಿ ಸಾಗಿಸುತ್ತಿರುವುದು ಸಾಮಾನ್ಯವಾಗಿದೆ.<br /> <br /> ನಾಪೋಕ್ಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಖಾಸಗಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಅವಶ್ಯಕ ರಸಗೊಬ್ಬರ ದಾಸ್ತಾನು ಇದೆ. ಈ ವರ್ಷ ರಸಗೊಬ್ಬರ ಕೊರತೆಯಾಗುವುದಿಲ್ಲ. ರೈತರಿಗೆ ವಿತರಿಸಲು ಅವಶ್ಯವಿರುವ ಗೊಬ್ಬರ ಸರಬರಾಜಾಗುತ್ತಿದೆ ಎಂಬುದು ಮಾರಾಟಗಾರರ ಅಭಿಪ್ರಾಯ.<br /> <br /> ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿಯೂ ರೈತರಿಗೆ ಬೇಕಾದ ಇಂಟಾನ್ ಹಾಗೂ ತುಂಗಾ ಬತ್ತದ ಬೀಜಗಳು ಅವಶ್ಯವಿರುವಷ್ಟು ದಾಸ್ತಾನು ಇದೆ ಎಂದು ನಾಪೋಕ್ಲು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮೀರಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>