ಮಳೆ ಸಂಭವ
ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ.
ಕಾರ್ಕಳದಲ್ಲಿ 6 ಸೆಂ.ಮೀ ಮಳೆಯಾಗಿದೆ. ಕೊಲ್ಲೂರು, ಯಲಹಂಕ 4, ಚಿಕ್ಕಮಗಳೂರು, ನುಗ್ಗೇಹಳ್ಳಿ, ಹೆಸರಘಟ್ಟ 3, ಹೊಳಲೂರು, ಮೂಡಿಗೆರೆ, ಬಾಳೆಹೊನ್ನೂರು, ಲಿಂಗದಹಳ್ಳಿ, ಕಡೂರು, ಮಧುಗುರಿ, ಚಿಂತಾಮಣಿ 2, ಮಂಗಳೂರು ವಿಮಾನ ನಿಲ್ದಾಣ, ಆಗುಂಬೆ, ಲಿಂಗನಮಕ್ಕಿ, ಭದ್ರಾವತಿ, ಎನ್.ಆರ್.ಪುರ, ಶಿಡ್ಲಘಟ್ಟ 1 ಸೆಂ.ಮೀ ಮಳೆಯಾಗಿದೆ.
ಚಾಮರಾಜನಗರದಲ್ಲಿ ಅತಿ ಕಡಿಮೆ ಉಷ್ಣಾಂಶ 18.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.