<p>ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಬೆಳಗಾವಿ, ವಿಜಾಪುರ, ಧಾರವಾಡ ಜಿಲ್ಲೆಗಳಲ್ಲಿ ಸೋಮವಾರವೂ ಮಳೆಯಾಗಿದ್ದು, ವಿಜಾಪುರ ಜಿಲ್ಲೆಯಲ್ಲಿ ಗೋಡೆ ಕುಸಿದು ಇಬ್ಬರು, ಬೆಳಗಾವಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಒಬ್ಬರು ಸೇರಿ ಒಟ್ಟು ಮೂವರು ಸಾವಿಗೀಡಾಗಿದ್ದಾರೆ.<br /> <br /> ವಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರಹಿಪ್ಪರಗಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ರಜಾಕ್ಬೀ ಬಾಷಾಸಾಬ್ ಕೊಕಟನೂರ (55) ಮತ್ತು ಸಿಮ್ರನ್ ದಾವಲ್ಸಾಬ್ ಕೊಕಟನೂರ (6) ಮೃತಪಟ್ಟಿದ್ದಾರೆ.<br /> <br /> ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ಪ ಮಹಾದೇವಪ್ಪ ನರಗುಂದ (45) ಸಾವಿಗೀಡಾಗಿದ್ದಾರೆ.<br /> <br /> ಧಾರವಾಡ ತಾಲ್ಲೂಕಿನ ಹುಲ್ಲಿಕೆರೆ ಗ್ರಾಮದಲ್ಲಿನ ಹೊಲದಲ್ಲಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ.<br /> <br /> <strong>ಆಲಿಕಲ್ಲು ಮಳೆ</strong>: ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಉಮರಾಣಿ, ಟಾಕಳಿ, ಹತ್ತಳ್ಳಿ ಸುತ್ತಮುತ್ತ ಸೋಮವಾರ ಸಂಜೆ ಆಲಿಕಲ್ಲು ಮಳೆ ಬಿದ್ದು ಜನ–ಜಾನುವಾರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಬೆಳಗಾವಿ, ವಿಜಾಪುರ, ಧಾರವಾಡ ಜಿಲ್ಲೆಗಳಲ್ಲಿ ಸೋಮವಾರವೂ ಮಳೆಯಾಗಿದ್ದು, ವಿಜಾಪುರ ಜಿಲ್ಲೆಯಲ್ಲಿ ಗೋಡೆ ಕುಸಿದು ಇಬ್ಬರು, ಬೆಳಗಾವಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಒಬ್ಬರು ಸೇರಿ ಒಟ್ಟು ಮೂವರು ಸಾವಿಗೀಡಾಗಿದ್ದಾರೆ.<br /> <br /> ವಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರಹಿಪ್ಪರಗಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ರಜಾಕ್ಬೀ ಬಾಷಾಸಾಬ್ ಕೊಕಟನೂರ (55) ಮತ್ತು ಸಿಮ್ರನ್ ದಾವಲ್ಸಾಬ್ ಕೊಕಟನೂರ (6) ಮೃತಪಟ್ಟಿದ್ದಾರೆ.<br /> <br /> ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ಪ ಮಹಾದೇವಪ್ಪ ನರಗುಂದ (45) ಸಾವಿಗೀಡಾಗಿದ್ದಾರೆ.<br /> <br /> ಧಾರವಾಡ ತಾಲ್ಲೂಕಿನ ಹುಲ್ಲಿಕೆರೆ ಗ್ರಾಮದಲ್ಲಿನ ಹೊಲದಲ್ಲಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ.<br /> <br /> <strong>ಆಲಿಕಲ್ಲು ಮಳೆ</strong>: ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಉಮರಾಣಿ, ಟಾಕಳಿ, ಹತ್ತಳ್ಳಿ ಸುತ್ತಮುತ್ತ ಸೋಮವಾರ ಸಂಜೆ ಆಲಿಕಲ್ಲು ಮಳೆ ಬಿದ್ದು ಜನ–ಜಾನುವಾರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>