<p><strong>ಮೈಸೂರು:</strong> ನಗರದ ದೇವರಾಜ ಮೊಹಲ್ಲಾದ ರಹಮಾನಿಯಾ ಅರಬ್ಬಿ ಮಸೀದಿಯ ಆವರಣದಲ್ಲಿ ಶುಕ್ರವಾರ ಸಂಕ್ರಾಂತಿಯ ಸಂಭ್ರಮ ಮನೆ ಮಾಡಿತ್ತು. ಹೊಸ ಬಟ್ಟೆ ಧರಿಸಿದ ಮಕ್ಕಳು ಎಳ್ಳು–ಬೆಲ್ಲವನ್ನು ಹಂಚಿ ಹಿಂದೂ–ಮುಸ್ಲಿಂ ಸಮುದಾಯದ ನಡುವೆ ಬಾಂಧವ್ಯ ಬೆಸೆದ ಕ್ಷಣಕ್ಕೆ ಪಾಲಿಕೆಯ ಸದಸ್ಯರು ಸಾಕ್ಷಿಯಾದರು.<br /> <br /> ಮಧ್ಯಾಹ್ನದ ಪ್ರಾರ್ಥನೆಗೆ ಮಸೀದಿಯ ಆವರಣದಲ್ಲಿ ಮುಸ್ಲಿಮರು ನೆರೆದಿದ್ದರು. ಪ್ರಾರ್ಥನೆ ಮುಗಿಸಿ ಹೊರಬಂದವರಿಗೆ ಮಕ್ಕಳು ಕಬ್ಬು, ಎಳ್ಳು, ಬೆಲ್ಲವನ್ನು ನೀಡಿದರು. ಬಳಿಕ ಸಂಕ್ರಾಂತಿಯ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಎರಡೂ ಧರ್ಮದವರು ಒಂದೆಡೆ ಸೇರಿ ಹಬ್ಬ ಆಚರಿಸಿದ್ದು ಸಂಕ್ರಾಂತಿಯ ಸಡಗರ ಹೆಚ್ಚಿಸಿತ್ತು.<br /> <br /> ಪಾಲಿಕೆ ಸದಸ್ಯ ಪಿ. ಪ್ರಶಾಂತ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನವೇ ಹಿಂದೂ ಮತ್ತು ಮುಸ್ಲಿಮರು ಸಹೋದರರಂತೆ ಇದ್ದರು. ಕೆಲ ರಾಜಕೀಯ ಉದ್ದೇಶಗಳಿಗಾಗಿ ಈ ಬಾಂಧವ್ಯವನ್ನು ಒಡೆಯುವ ಹುನ್ನಾರಗಳು ನಿರಂತರವಾಗಿ ನಡೆಯುತ್ತಿವೆ. ಎರಡೂ ಸಮುದಾಯಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಸೌಹಾರ್ದ ಮನೋಭಾವ ಬೆಳೆಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ಕಾಂಗ್ರೆಸ್ ಜಿಲ್ಲಾ ನಗರ ಘಟಕದ ಅಧ್ಯಕ್ಷ ರವಿಶಂಕರ್ ಮಾತನಾಡಿ, ರೈತರ ಸುಗ್ಗಿಯ ಸಂಭ್ರಮವೇ ಸಂಕ್ರಾಂತಿ. ಬೆಳೆದ ಬೆಳೆಯನ್ನು ಹಂಚಿ ತಿನ್ನುವ ಪದ್ಧತಿ ಹಿಂದಿನಿಂದಲೂ ಇದೆ. ಈ ಮನೋಭಾವ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.<br /> <br /> ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಡಿ. ನಾಗಭೂಷಣ್, ಹಾಜಿ ಫಕೀರ್ ಮಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ದೇವರಾಜ ಮೊಹಲ್ಲಾದ ರಹಮಾನಿಯಾ ಅರಬ್ಬಿ ಮಸೀದಿಯ ಆವರಣದಲ್ಲಿ ಶುಕ್ರವಾರ ಸಂಕ್ರಾಂತಿಯ ಸಂಭ್ರಮ ಮನೆ ಮಾಡಿತ್ತು. ಹೊಸ ಬಟ್ಟೆ ಧರಿಸಿದ ಮಕ್ಕಳು ಎಳ್ಳು–ಬೆಲ್ಲವನ್ನು ಹಂಚಿ ಹಿಂದೂ–ಮುಸ್ಲಿಂ ಸಮುದಾಯದ ನಡುವೆ ಬಾಂಧವ್ಯ ಬೆಸೆದ ಕ್ಷಣಕ್ಕೆ ಪಾಲಿಕೆಯ ಸದಸ್ಯರು ಸಾಕ್ಷಿಯಾದರು.<br /> <br /> ಮಧ್ಯಾಹ್ನದ ಪ್ರಾರ್ಥನೆಗೆ ಮಸೀದಿಯ ಆವರಣದಲ್ಲಿ ಮುಸ್ಲಿಮರು ನೆರೆದಿದ್ದರು. ಪ್ರಾರ್ಥನೆ ಮುಗಿಸಿ ಹೊರಬಂದವರಿಗೆ ಮಕ್ಕಳು ಕಬ್ಬು, ಎಳ್ಳು, ಬೆಲ್ಲವನ್ನು ನೀಡಿದರು. ಬಳಿಕ ಸಂಕ್ರಾಂತಿಯ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಎರಡೂ ಧರ್ಮದವರು ಒಂದೆಡೆ ಸೇರಿ ಹಬ್ಬ ಆಚರಿಸಿದ್ದು ಸಂಕ್ರಾಂತಿಯ ಸಡಗರ ಹೆಚ್ಚಿಸಿತ್ತು.<br /> <br /> ಪಾಲಿಕೆ ಸದಸ್ಯ ಪಿ. ಪ್ರಶಾಂತ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನವೇ ಹಿಂದೂ ಮತ್ತು ಮುಸ್ಲಿಮರು ಸಹೋದರರಂತೆ ಇದ್ದರು. ಕೆಲ ರಾಜಕೀಯ ಉದ್ದೇಶಗಳಿಗಾಗಿ ಈ ಬಾಂಧವ್ಯವನ್ನು ಒಡೆಯುವ ಹುನ್ನಾರಗಳು ನಿರಂತರವಾಗಿ ನಡೆಯುತ್ತಿವೆ. ಎರಡೂ ಸಮುದಾಯಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಸೌಹಾರ್ದ ಮನೋಭಾವ ಬೆಳೆಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ಕಾಂಗ್ರೆಸ್ ಜಿಲ್ಲಾ ನಗರ ಘಟಕದ ಅಧ್ಯಕ್ಷ ರವಿಶಂಕರ್ ಮಾತನಾಡಿ, ರೈತರ ಸುಗ್ಗಿಯ ಸಂಭ್ರಮವೇ ಸಂಕ್ರಾಂತಿ. ಬೆಳೆದ ಬೆಳೆಯನ್ನು ಹಂಚಿ ತಿನ್ನುವ ಪದ್ಧತಿ ಹಿಂದಿನಿಂದಲೂ ಇದೆ. ಈ ಮನೋಭಾವ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.<br /> <br /> ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಡಿ. ನಾಗಭೂಷಣ್, ಹಾಜಿ ಫಕೀರ್ ಮಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>