ದೋವಲ್ ಅವರು ಚೀನಾ ಭದ್ರತಾ ಸಲಹೆಗಾರ ಯಾಂಗ್ ಜಿಯೆಚಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಚೀನಾಕ್ಕೆ ಭೇಟಿ ನೀಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಸೂದ್ ವಿಷಯದ ಬಗ್ಗೆ ಆ ದೇಶದ ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ರಕ್ಷಣಾ ಸಚಿವರೊಂದಿಗೆ ಚರ್ಚೆ ನಡೆಸಿ, ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದರು.
ಮಹತ್ವ ನೀಡದ ಮಾಧ್ಯಮಗಳು: ಚೀನಾ–ಭಾರತದ ನಡುವಣ ದ್ವಿಪಕ್ಷೀಯ ಸಂಬಂಧದ ಮೇಲೆ ಮೂರನೇಯವರಿಂದ ಯಾವುದೇ ತೊಂದರೆ ಆಗದು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿರುವುದಕ್ಕೆ ಚೀನಾ ಮಾಧ್ಯಮಗಳು ಮಂಗಳವಾರ ಹೆಚ್ಚು ಮಹತ್ವ ನೀಡಿವೆ.
ಆದರೆ, ಪಠಾಣ್ಕೋಟ್ ವಾಯುನೆಲೆ ಮೇಲೆ ನಡೆದ ದಾಳಿಯ ಸಂಚುಕೋರ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯ ನಿರ್ಬಂಧ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ವಿಷಯದ ಕುರಿತು ನಡೆದ ಚರ್ಚೆಯ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.