<p>ಬೆಂಗಳೂರು: ಮಹಾದಾಯಿ ನದಿ ತಿರುವು ಯೋಜನೆಯ ವಾಸ್ತವ ಸಂಗತಿಯನ್ನು ನ್ಯಾಯಮಂಡಳಿಗೆ ತಿಳಿಸುವ ಉದ್ದೇಶದಿಂದ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ<br /> ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.<br /> <br /> ನ್ಯಾಯಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ಇದೇ 24ರವರೆಗೆ ಜಲಾನಯನ ಪ್ರದೇಶದಲ್ಲಿ ಅಧ್ಯಯನ ನಡೆಸಲಿದೆ. ತಂಡಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದು, ತಂಡವನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಹಾದಾಯಿ ನದಿ ತಿರುವು ಯೋಜನೆಯ ವಾಸ್ತವ ಸಂಗತಿಯನ್ನು ನ್ಯಾಯಮಂಡಳಿಗೆ ತಿಳಿಸುವ ಉದ್ದೇಶದಿಂದ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ<br /> ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.<br /> <br /> ನ್ಯಾಯಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ಇದೇ 24ರವರೆಗೆ ಜಲಾನಯನ ಪ್ರದೇಶದಲ್ಲಿ ಅಧ್ಯಯನ ನಡೆಸಲಿದೆ. ತಂಡಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದು, ತಂಡವನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>