<p><strong>ಮುಂಬೈ (ಐಎಎನ್ಎಸ್): </strong>ಮಹಾರಾಷ್ಟ್ರದ ಕೆಲವೆಡೆ ಈಶಾನ್ಯ ರಾಜ್ಯಗಳ ಜನರ ಮೇಲೆ ನಡೆದ ಹಲ್ಲೆಯ ಘಟನೆಗಳಿಂದಾಗಿ, ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳ ಜನ 1 ವಾರದಿಂದ ತವರು ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಮುಂಬೈ, ಪುಣೆ ಹಾಗೂ ನಾಸಿಕ್ಗಳಿಂದ 1,500ಕ್ಕೂ ಹೆಚ್ಚು ಜನ ತವರು ರಾಜ್ಯಗಳಿಗೆ ಮರಳಿದ್ದಾರೆ ಎನ್ನಲಾಗಿದೆ. ಮೊಬೈಲ್ ಸಂದೇಶಗಳಿಂದ ಈ ಜನ ಭಯಭೀತಿಗೆ ಒಳಗಾಗಿದ್ದಾರೆ ಎಂದು ಪುಣೆ ಪೊಲೀಸ್ ಆಯುಕ್ತರು ಹೇಳಿದ್ದಾರೆ.<br /> <br /> <strong>ಹೈದರಾಬಾದ್ವರದಿ:</strong> ಆಂಧ್ರಪ್ರದೇಶದ ವಿವಿಧೆಡೆಯಿಂದ ಕೋಲ್ಕತ್ತ ಹಾಗೂ ಈಶಾನ್ಯ ರಾಜ್ಯಗಳತ್ತ ಹೊರಡುವ ರೈಲುಗಳು ಕಳೆದ ಮೂರು ದಿನಗಳಿಂದ ತುಂಬಿ ತುಳುಕುತ್ತಿದ್ದು, ಸಾಮೂಹಿಕ ವಲಸೆ ನಿರಂತರವಾಗಿ ಮುಂದುವರೆದಿದೆ.<br /> <br /> ಶನಿವಾರದ ಮುಂಬೈ ಹಿಂಸಾಚಾರದಿಂದಾಗಿ ಹೈದರಾಬಾದ್, ವಿಶಾಖಪಟ್ಟಣ ಹಾಗೂ ಇತರ ಕರಾವಳಿ ಪ್ರದೇಶದಲ್ಲಿ ನೆಲೆಸಿರುವ ಅಸ್ಸಾಂನ ಕೂಲಿ ಕಾರ್ಮಿಕರಲ್ಲಿ ಭಯ ಆವರಿಸಿದ್ದು ತಮ್ಮ ರಾಜ್ಯಗಳಿಗೆ ಹಿಂತಿರುಗುತ್ತಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಐಎಎನ್ಎಸ್): </strong>ಮಹಾರಾಷ್ಟ್ರದ ಕೆಲವೆಡೆ ಈಶಾನ್ಯ ರಾಜ್ಯಗಳ ಜನರ ಮೇಲೆ ನಡೆದ ಹಲ್ಲೆಯ ಘಟನೆಗಳಿಂದಾಗಿ, ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳ ಜನ 1 ವಾರದಿಂದ ತವರು ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಮುಂಬೈ, ಪುಣೆ ಹಾಗೂ ನಾಸಿಕ್ಗಳಿಂದ 1,500ಕ್ಕೂ ಹೆಚ್ಚು ಜನ ತವರು ರಾಜ್ಯಗಳಿಗೆ ಮರಳಿದ್ದಾರೆ ಎನ್ನಲಾಗಿದೆ. ಮೊಬೈಲ್ ಸಂದೇಶಗಳಿಂದ ಈ ಜನ ಭಯಭೀತಿಗೆ ಒಳಗಾಗಿದ್ದಾರೆ ಎಂದು ಪುಣೆ ಪೊಲೀಸ್ ಆಯುಕ್ತರು ಹೇಳಿದ್ದಾರೆ.<br /> <br /> <strong>ಹೈದರಾಬಾದ್ವರದಿ:</strong> ಆಂಧ್ರಪ್ರದೇಶದ ವಿವಿಧೆಡೆಯಿಂದ ಕೋಲ್ಕತ್ತ ಹಾಗೂ ಈಶಾನ್ಯ ರಾಜ್ಯಗಳತ್ತ ಹೊರಡುವ ರೈಲುಗಳು ಕಳೆದ ಮೂರು ದಿನಗಳಿಂದ ತುಂಬಿ ತುಳುಕುತ್ತಿದ್ದು, ಸಾಮೂಹಿಕ ವಲಸೆ ನಿರಂತರವಾಗಿ ಮುಂದುವರೆದಿದೆ.<br /> <br /> ಶನಿವಾರದ ಮುಂಬೈ ಹಿಂಸಾಚಾರದಿಂದಾಗಿ ಹೈದರಾಬಾದ್, ವಿಶಾಖಪಟ್ಟಣ ಹಾಗೂ ಇತರ ಕರಾವಳಿ ಪ್ರದೇಶದಲ್ಲಿ ನೆಲೆಸಿರುವ ಅಸ್ಸಾಂನ ಕೂಲಿ ಕಾರ್ಮಿಕರಲ್ಲಿ ಭಯ ಆವರಿಸಿದ್ದು ತಮ್ಮ ರಾಜ್ಯಗಳಿಗೆ ಹಿಂತಿರುಗುತ್ತಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>