<p>ಮುಂಬೈ(ಪಿಟಿಐ): ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಬಿದ್ದು 8 ಲಕ್ಷ ಹೆಕ್ಟೇರ್ಗೂ ಅಧಿಕ ಜಾಗದಲ್ಲಿ ಬೆಳೆನಾಶ ಸಂಭವಿಸಿದೆ ಎಂದು ಮಹಾರಾಷ್ಟ್ರ ಸಿ.ಎಂ ಪೃಥ್ವಿರಾಜ್ ಚೌಹಾಣ್ ಸೋಮವಾರ ಹೇಳಿದ್ದಾರೆ.<br /> <br /> ಆಲಿಕಲ್ಲಿನಿಂದಾಗಿ ದ್ರಾಕ್ಷಿ, ಸಾಸಿವೆ ಹಾಗೂ ತರಕಾರಿ ಬೆಳೆಗೆ ಹಾನಿಯಾಗಿದೆ. ಈ ಸಂಬಂಧ ಪ್ರಧಾನಿ ಮನಮೋಹನ ಸಿಂಗ್ ಮತ್ತು ಕೃಷಿ ಸಚಿವ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಬೆಳೆಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.<br /> <br /> ಬೆಳೆಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಇದಕ್ಕೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗ ಲಾರದು ಎಂದು ವಿವರಿಸಿದ್ದಾರೆ. ಇನ್ನು ಮೂರು ದಿನಗಳಲ್ಲಿ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ(ಪಿಟಿಐ): ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಬಿದ್ದು 8 ಲಕ್ಷ ಹೆಕ್ಟೇರ್ಗೂ ಅಧಿಕ ಜಾಗದಲ್ಲಿ ಬೆಳೆನಾಶ ಸಂಭವಿಸಿದೆ ಎಂದು ಮಹಾರಾಷ್ಟ್ರ ಸಿ.ಎಂ ಪೃಥ್ವಿರಾಜ್ ಚೌಹಾಣ್ ಸೋಮವಾರ ಹೇಳಿದ್ದಾರೆ.<br /> <br /> ಆಲಿಕಲ್ಲಿನಿಂದಾಗಿ ದ್ರಾಕ್ಷಿ, ಸಾಸಿವೆ ಹಾಗೂ ತರಕಾರಿ ಬೆಳೆಗೆ ಹಾನಿಯಾಗಿದೆ. ಈ ಸಂಬಂಧ ಪ್ರಧಾನಿ ಮನಮೋಹನ ಸಿಂಗ್ ಮತ್ತು ಕೃಷಿ ಸಚಿವ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಬೆಳೆಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.<br /> <br /> ಬೆಳೆಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಇದಕ್ಕೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗ ಲಾರದು ಎಂದು ವಿವರಿಸಿದ್ದಾರೆ. ಇನ್ನು ಮೂರು ದಿನಗಳಲ್ಲಿ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>