<p><strong>ಮುಂಬೈ (ಪಿಟಿಐ): </strong>ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಬೆಳಗಾವಿ ವಿವಾದ ಮತ್ತೆ ಪ್ರತಿಧ್ವನಿಸಿತು.<br /> ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಮರಾಠಿ ಭಾಷಿಕರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ತಮ್ಮ ರಾಜ್ಯಕ್ಕೆ ಸೇರ್ಪಡೆ ಮಾಡಬೇಕೆಂದು ಸದಸ್ಯರು ಆಗ್ರಹಿಸಿದರು. <br /> <br /> ಬೆಳಗಾವಿಯ ಕೆಲವು ಮರಾಠಿಗರು ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಆಜಾದ್ ಮೈದಾನದಲ್ಲಿ ಧರಣಿ ನಡೆಸುತ್ತಿದ್ದು, ಈ ವಿಷಯವನ್ನು ಪಿಡಬ್ಲ್ಯುಪಿ ಶಾಸಕ ಗಣಪತಿ ರಾವ್ ದೇಶಮುಖ್ ಅವರು ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದರು. <br /> <br /> ಧರಣಿ ನಡೆಸುತ್ತಿದ್ದವರಿಗೆ ಬೆಂಬಲ ವ್ಯಕ್ತಪಡಿಸಿ ವಿಧಾನಸಭೆಯ ಕಲಾಪವನ್ನು ಸುಮಾರು 90 ನಿಮಿಷಗಳ ಕಾಲ ಮುಂದೂಡಲಾಯಿತು. <br /> <br /> `ದೂಧಗಂಗಾ ಹಾಗೂ ವರ್ಣಾ ಜಲಾಶಯಗಳಿಂದ ಕರ್ನಾಟಕಕ್ಕೆ ತಲಾ ಒಂದೊಂದು ಟಿಎಂಸಿ (ಒಟ್ಟು 2 ಟಿಎಂಸಿ) ನೀರು ಬಿಡಲಾಗುವ ಬಗ್ಗೆ ಯಾವುದೇ ವಿರೋಧವಿಲ್ಲ~ ಎಂದು ಹೇಳಿದ ಅವರು, ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಒತ್ತಾಯಿಸಿದರು. ಕಳೆದ 56 ವರ್ಷಗಳಿಂದ ಭಾಷಾ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹೋರಾಡಬೇಕೆಂದು ಆಗ್ರಹಿಸಿದರು.<br /> <br /> ಅವರ ಬೇಡಿಕೆಗೆ ಬಿಜೆಪಿಯ ಗಿರೀಶ್ ಬಾಪಟ್, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಬಾಳ್ ನಂದಗಾಂವ್ಕರ್, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಜಿತೇಂದ್ರ ಅವಹದ್ ಮತ್ತು ಕೈಗಾರಿಕಾ ಸಚಿವ ನಾರಾಯಣ ರಾಣೆ ಬೆಂಬಲ ವ್ಯಕ್ತಪಡಿಸಿದರು.<br /> <br /> ಅಧಿವೇಶನವನ್ನು ಮುಂದೂಡಿ ಎಲ್ಲ ಶಾಸಕರು, ಮುಖಂಡರು ಪಕ್ಷಾತೀತವಾಗಿ ಧರಣಿ ನಡೆಯುತ್ತಿರುವ ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ಮರಾಠಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.<br /> <br /> ರಾಜ್ಯದಿಂದ ನೀರು ಹರಿಸುವ ಮೊದಲು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಿಂದ ಭರವಸೆಯನ್ನು ಪಡೆಯಬೇಕಿತ್ತು ಎಂದು ಜಿತೇಂದ್ರ ಅವಹದ್ ಹೇಳಿದರು.<br /> <br /> ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಇರುವುದರಿಂದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬೆಳಗಾವಿ ಮರಾಠಿಗರ ರಕ್ಷಣೆ ಕುರಿತು ಮಾತನಾಡುವಂತೆ ಗಾಂವ್ಕರ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಬೆಳಗಾವಿ ವಿವಾದ ಮತ್ತೆ ಪ್ರತಿಧ್ವನಿಸಿತು.<br /> ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಮರಾಠಿ ಭಾಷಿಕರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ತಮ್ಮ ರಾಜ್ಯಕ್ಕೆ ಸೇರ್ಪಡೆ ಮಾಡಬೇಕೆಂದು ಸದಸ್ಯರು ಆಗ್ರಹಿಸಿದರು. <br /> <br /> ಬೆಳಗಾವಿಯ ಕೆಲವು ಮರಾಠಿಗರು ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಆಜಾದ್ ಮೈದಾನದಲ್ಲಿ ಧರಣಿ ನಡೆಸುತ್ತಿದ್ದು, ಈ ವಿಷಯವನ್ನು ಪಿಡಬ್ಲ್ಯುಪಿ ಶಾಸಕ ಗಣಪತಿ ರಾವ್ ದೇಶಮುಖ್ ಅವರು ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದರು. <br /> <br /> ಧರಣಿ ನಡೆಸುತ್ತಿದ್ದವರಿಗೆ ಬೆಂಬಲ ವ್ಯಕ್ತಪಡಿಸಿ ವಿಧಾನಸಭೆಯ ಕಲಾಪವನ್ನು ಸುಮಾರು 90 ನಿಮಿಷಗಳ ಕಾಲ ಮುಂದೂಡಲಾಯಿತು. <br /> <br /> `ದೂಧಗಂಗಾ ಹಾಗೂ ವರ್ಣಾ ಜಲಾಶಯಗಳಿಂದ ಕರ್ನಾಟಕಕ್ಕೆ ತಲಾ ಒಂದೊಂದು ಟಿಎಂಸಿ (ಒಟ್ಟು 2 ಟಿಎಂಸಿ) ನೀರು ಬಿಡಲಾಗುವ ಬಗ್ಗೆ ಯಾವುದೇ ವಿರೋಧವಿಲ್ಲ~ ಎಂದು ಹೇಳಿದ ಅವರು, ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಒತ್ತಾಯಿಸಿದರು. ಕಳೆದ 56 ವರ್ಷಗಳಿಂದ ಭಾಷಾ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹೋರಾಡಬೇಕೆಂದು ಆಗ್ರಹಿಸಿದರು.<br /> <br /> ಅವರ ಬೇಡಿಕೆಗೆ ಬಿಜೆಪಿಯ ಗಿರೀಶ್ ಬಾಪಟ್, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಬಾಳ್ ನಂದಗಾಂವ್ಕರ್, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಜಿತೇಂದ್ರ ಅವಹದ್ ಮತ್ತು ಕೈಗಾರಿಕಾ ಸಚಿವ ನಾರಾಯಣ ರಾಣೆ ಬೆಂಬಲ ವ್ಯಕ್ತಪಡಿಸಿದರು.<br /> <br /> ಅಧಿವೇಶನವನ್ನು ಮುಂದೂಡಿ ಎಲ್ಲ ಶಾಸಕರು, ಮುಖಂಡರು ಪಕ್ಷಾತೀತವಾಗಿ ಧರಣಿ ನಡೆಯುತ್ತಿರುವ ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ಮರಾಠಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.<br /> <br /> ರಾಜ್ಯದಿಂದ ನೀರು ಹರಿಸುವ ಮೊದಲು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಿಂದ ಭರವಸೆಯನ್ನು ಪಡೆಯಬೇಕಿತ್ತು ಎಂದು ಜಿತೇಂದ್ರ ಅವಹದ್ ಹೇಳಿದರು.<br /> <br /> ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಇರುವುದರಿಂದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬೆಳಗಾವಿ ಮರಾಠಿಗರ ರಕ್ಷಣೆ ಕುರಿತು ಮಾತನಾಡುವಂತೆ ಗಾಂವ್ಕರ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>