<p><strong>ಬೆಂಗಳೂರು: </strong>ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಜಾಗೃತಿ ಸಮಿತಿಯ ಸದಸ್ಯರು ಗುರುವಾರ ನಗರದ ಕಾರ್ಮಿಕರ ಭವನದ ಬಳಿ ಧರಣಿ ನಡೆಸಿದರು.<br /> <br /> ಸಮಿತಿಯ ಕಾರ್ಯದರ್ಶಿ ಗೀತಾ ಮೆನನ್ ಮಾತನಾಡಿ, `ಅಂತರರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಶತಮಾನ ಪೂರೈಸಿದೆ. ಆದರೆ ಮಹಿಳಾ ಕಾರ್ಮಿಕರಿಗೆ ಇದುವರೆಗೂ ಮೂಲಭೂತ ಹಕ್ಕುಗಳು ಸಿಕ್ಕಿಲ್ಲ. <br /> <br /> ಚಿಂದಿ ಆಯುವ ಮತ್ತು ಮನೆಕೆಲಸ ಮಾಡುವ ಮಹಿಳೆಯರನ್ನು ಜನ ಕಳ್ಳರಂತೆ ನೋಡುತ್ತಾರೆ. ಆದ್ದರಿಂದ ಎಲ್ಲಾ ಮಹಿಳಾ ಕಾರ್ಮಿಕರಿಗೂ ಇಲಾಖೆಯಿಂದ ಗುರುತಿನ ಚೀಟಿ ನೀಡಬೇಕು~ ಎಂದು ಒತ್ತಾಯಿಸಿದರು.<br /> <br /> ಮಹಿಳಾ ಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕು ಹಾಗೂ ಕೊಳೆಗೇರಿಗಳಲ್ಲಿ ಕೆಲಸ ಮಾಡುತ್ತಿರುವ ಕೆಲವು ಮಹಿಳೆಯರು ಕಾಯಿಲೆಗಳಿಂದ ನರಳುವಂತಾಗಿದೆ. ಅವರಿಗೆ ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ಮನವಿ ಸ್ವೀಕರಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಶೀಘ್ರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. <br /> <br /> ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೆ ಧರಣಿ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಜಾಗೃತಿ ಸಮಿತಿಯ ಸದಸ್ಯರು ಗುರುವಾರ ನಗರದ ಕಾರ್ಮಿಕರ ಭವನದ ಬಳಿ ಧರಣಿ ನಡೆಸಿದರು.<br /> <br /> ಸಮಿತಿಯ ಕಾರ್ಯದರ್ಶಿ ಗೀತಾ ಮೆನನ್ ಮಾತನಾಡಿ, `ಅಂತರರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಶತಮಾನ ಪೂರೈಸಿದೆ. ಆದರೆ ಮಹಿಳಾ ಕಾರ್ಮಿಕರಿಗೆ ಇದುವರೆಗೂ ಮೂಲಭೂತ ಹಕ್ಕುಗಳು ಸಿಕ್ಕಿಲ್ಲ. <br /> <br /> ಚಿಂದಿ ಆಯುವ ಮತ್ತು ಮನೆಕೆಲಸ ಮಾಡುವ ಮಹಿಳೆಯರನ್ನು ಜನ ಕಳ್ಳರಂತೆ ನೋಡುತ್ತಾರೆ. ಆದ್ದರಿಂದ ಎಲ್ಲಾ ಮಹಿಳಾ ಕಾರ್ಮಿಕರಿಗೂ ಇಲಾಖೆಯಿಂದ ಗುರುತಿನ ಚೀಟಿ ನೀಡಬೇಕು~ ಎಂದು ಒತ್ತಾಯಿಸಿದರು.<br /> <br /> ಮಹಿಳಾ ಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕು ಹಾಗೂ ಕೊಳೆಗೇರಿಗಳಲ್ಲಿ ಕೆಲಸ ಮಾಡುತ್ತಿರುವ ಕೆಲವು ಮಹಿಳೆಯರು ಕಾಯಿಲೆಗಳಿಂದ ನರಳುವಂತಾಗಿದೆ. ಅವರಿಗೆ ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ಮನವಿ ಸ್ವೀಕರಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಶೀಘ್ರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. <br /> <br /> ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೆ ಧರಣಿ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>