<p>ಅಂದು ಅಲ್ಲಿ ಸೇರಿದರವರ ಕಣ್ಣಲ್ಲಿ ಸಂಭ್ರಮ ಕಾಣಿಸುತ್ತಿತ್ತು. ವಿದ್ಯಾರ್ಥಿನಿಯರೆಲ್ಲ ಬಣ್ಣ ಬಣ್ಣದ ಸೀರೆ ತೊಟ್ಟು ನಲಿಯುತ್ತಿದ್ದರು. ಅವರೆಲ್ಲ ಎಂವಿಜೆ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯರು. ಅಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ ಅವರೆಲ್ಲ ಭಾಗಿಯಾಗಿದ್ದರು.<br /> <br /> ಅವಕಾಶ ವಂಚಿತ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಸ್ಥೆ ಸುಕೃಪಾ ಪ್ರತಿಷ್ಠಾನದ ಸಂಸ್ಥಾಪಕಿ ಕೃಪಾಲತಾ ಮಾರ್ಟಿನ್ ದಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹರಸಿದರು.<br /> <br /> ಮಹಿಳೆಯರ ಬಲ ಮತ್ತು ಒಗ್ಗಟ್ಟನ್ನು ಪ್ರತಿನಿಧಿಸಲು ಫುಟ್ಬಾಲ್ ಮೈದಾನದಲ್ಲಿ ವೃತ್ತಾಕಾರದಲ್ಲಿ ವಿದ್ಯಾರ್ಥಿನಿಯರೆಲ್ಲ ಸೇರಿದ್ದರು. ಇದರ ನಂತರ ಕಾಲೇಜಿನ ಮೊದಲ ಅಕ್ಷರ ಎಂವಿಜೆಸಿಇ ಮಾದರಿಯಲ್ಲಿ ನಿಂತು ಸಂಭ್ರಮಿಸಿದರು.<br /> <br /> ಡಾ.ಕೆ.ಎಸ್.ಬದ್ರಿನಾರಾಯಣ್ ಅವರು ಮಾತನಾಡುತ್ತಾ ಮಹಿಳಾ ಸಬಲೀಕರಣ, ಗ್ರಾಮೀಣ ಬಡತನ ನಿವಾರಣೆಗೆ ಒತ್ತು ನೀಡಿದರು. ಎಂವಿಜೆಸಿಇ ಬಾಲಕಿಯರು ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಮಂತ್ರ ಮುಗ್ಧರನ್ನಾಗಿಸಿದವು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂದು ಅಲ್ಲಿ ಸೇರಿದರವರ ಕಣ್ಣಲ್ಲಿ ಸಂಭ್ರಮ ಕಾಣಿಸುತ್ತಿತ್ತು. ವಿದ್ಯಾರ್ಥಿನಿಯರೆಲ್ಲ ಬಣ್ಣ ಬಣ್ಣದ ಸೀರೆ ತೊಟ್ಟು ನಲಿಯುತ್ತಿದ್ದರು. ಅವರೆಲ್ಲ ಎಂವಿಜೆ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯರು. ಅಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ ಅವರೆಲ್ಲ ಭಾಗಿಯಾಗಿದ್ದರು.<br /> <br /> ಅವಕಾಶ ವಂಚಿತ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಸ್ಥೆ ಸುಕೃಪಾ ಪ್ರತಿಷ್ಠಾನದ ಸಂಸ್ಥಾಪಕಿ ಕೃಪಾಲತಾ ಮಾರ್ಟಿನ್ ದಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹರಸಿದರು.<br /> <br /> ಮಹಿಳೆಯರ ಬಲ ಮತ್ತು ಒಗ್ಗಟ್ಟನ್ನು ಪ್ರತಿನಿಧಿಸಲು ಫುಟ್ಬಾಲ್ ಮೈದಾನದಲ್ಲಿ ವೃತ್ತಾಕಾರದಲ್ಲಿ ವಿದ್ಯಾರ್ಥಿನಿಯರೆಲ್ಲ ಸೇರಿದ್ದರು. ಇದರ ನಂತರ ಕಾಲೇಜಿನ ಮೊದಲ ಅಕ್ಷರ ಎಂವಿಜೆಸಿಇ ಮಾದರಿಯಲ್ಲಿ ನಿಂತು ಸಂಭ್ರಮಿಸಿದರು.<br /> <br /> ಡಾ.ಕೆ.ಎಸ್.ಬದ್ರಿನಾರಾಯಣ್ ಅವರು ಮಾತನಾಡುತ್ತಾ ಮಹಿಳಾ ಸಬಲೀಕರಣ, ಗ್ರಾಮೀಣ ಬಡತನ ನಿವಾರಣೆಗೆ ಒತ್ತು ನೀಡಿದರು. ಎಂವಿಜೆಸಿಇ ಬಾಲಕಿಯರು ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಮಂತ್ರ ಮುಗ್ಧರನ್ನಾಗಿಸಿದವು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>