<p><strong>ಬೆಂಗಳೂರು: `</strong>ಹೆಣ್ಣು ಭ್ರೂಣಗಳ ಹತ್ಯೆ ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಇದನ್ನು ತಡೆಯುವಲ್ಲಿ ಪ್ರತಿಯೊಬ್ಬರ ಪಾತ್ರವು ಬಹಳ ಪ್ರಮುಖವಾದುದು~ ಎಂದು ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ ಹೇಳಿದರು.<br /> <br /> ನಗರದ ಶೇಷಾದ್ರಿಪುರ ಸಂಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, `ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಮೂಲ ಕಾರಣವಾಗಿರುವ ಭ್ರೂಣ ಪತ್ತೆ ಯಂತ್ರವನ್ನು ನಿಷೇಧಿಸಬೇಕು~<br /> `ಹೆಣ್ಣು ಸಂಸಾರದ ಕಣ್ಣಾಗಿ ತನ್ನ ಕುಟುಂಬದ ಅಭಿವೃದ್ಧಿಗೆ ಶ್ರಮಿಸುತ್ತಾಳೆ. <br /> <br /> ಆದರೆ ಆಕೆಯನ್ನು ಸಮಾಜ ಕೀಳಾಗಿ ನೊಡುವ ಮನೋಭಾವವನ್ನು ಬೆಳೆಸಿಕೊಂಡಿರುವುದು ವಿಷಾದನೀಯ~ ಎಂದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್.ಆರ್.ಪಂಡಿತರಾದ್ಯ, ಮುಖ್ಯ ಅತಿಥಿಗಳಾಗಿ ಸಹಾಯಕ ಕಾರ್ಯದರ್ಶಿಗಳಾದ ಸರೋಜ. ಕೆ.ಎಂ.ನಂಜಪ್ಪ, ಕೆ.ಎಂ.ಕೃಷ್ಣಸ್ವಾಮಿ, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷರಾದ ಪ್ರೊ.ಸಿ.ಎಲ್. ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಹೆಣ್ಣು ಭ್ರೂಣಗಳ ಹತ್ಯೆ ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಇದನ್ನು ತಡೆಯುವಲ್ಲಿ ಪ್ರತಿಯೊಬ್ಬರ ಪಾತ್ರವು ಬಹಳ ಪ್ರಮುಖವಾದುದು~ ಎಂದು ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ ಹೇಳಿದರು.<br /> <br /> ನಗರದ ಶೇಷಾದ್ರಿಪುರ ಸಂಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, `ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಮೂಲ ಕಾರಣವಾಗಿರುವ ಭ್ರೂಣ ಪತ್ತೆ ಯಂತ್ರವನ್ನು ನಿಷೇಧಿಸಬೇಕು~<br /> `ಹೆಣ್ಣು ಸಂಸಾರದ ಕಣ್ಣಾಗಿ ತನ್ನ ಕುಟುಂಬದ ಅಭಿವೃದ್ಧಿಗೆ ಶ್ರಮಿಸುತ್ತಾಳೆ. <br /> <br /> ಆದರೆ ಆಕೆಯನ್ನು ಸಮಾಜ ಕೀಳಾಗಿ ನೊಡುವ ಮನೋಭಾವವನ್ನು ಬೆಳೆಸಿಕೊಂಡಿರುವುದು ವಿಷಾದನೀಯ~ ಎಂದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್.ಆರ್.ಪಂಡಿತರಾದ್ಯ, ಮುಖ್ಯ ಅತಿಥಿಗಳಾಗಿ ಸಹಾಯಕ ಕಾರ್ಯದರ್ಶಿಗಳಾದ ಸರೋಜ. ಕೆ.ಎಂ.ನಂಜಪ್ಪ, ಕೆ.ಎಂ.ಕೃಷ್ಣಸ್ವಾಮಿ, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷರಾದ ಪ್ರೊ.ಸಿ.ಎಲ್. ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>