<p><strong>ಮಸ್ಕಿ: </strong>ಭಾರತ ಸಮುೃದ್ಧ ರಾಷ್ಟ್ರವಾಗಬೇಕಾದರೆ ಮಹಿಳೆಯರ ಸಬಲಿಕರಣವಾಗಬೇಕು ಎಂದು ಪಿಎಸ್ಐ ಉದಯರವಿ ಹೇಳಿದರು.<br /> <br /> ಪಟ್ಟಣದ ಶತಮಾನೋತ್ಸವ ಭವನದಲ್ಲಿ ಮಂಗಳವಾರ ನಡೆದ ಹೆಣ್ಣುಮಕ್ಕಳ ಮಾರ್ಗದರ್ಶಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಿದೆ ಎಂದರು.<br /> <br /> ಪುರುಷರಿಗಿಂತ ಮಹಿಳೆಯರು ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಮಹಿಳೆಯರು ತಮಗಿರುವ ಸೌಲಭ್ಯವನ್ನು ಪಡೆದುಕೊಂಡು ಉನ್ನತಿ ಸಾಧಿಸಬೇಕು ಎಂದರು.<br /> <br /> ಪ್ರಸಕ್ತ ದಿನಗಳಲ್ಲಿ ಮಹಿಳೆಯರು ದುಡಿಮೆ ಮತ್ತು ಕುಟುಂಬ ನಿರ್ವಹಣೆಯ ಜತೆಗೆ ತಮ್ಮತನವನ್ನು ಉಳಿಸಿಕೊಳ್ಳಬೇಕಾದ ಸವಾಲು ಇದೆ ಎಂದು ಡಾ.ಶಿವಶರಣಪ್ಪ ಇತ್ಲಿ ಅಭಿಪ್ರಾಯಪಟ್ಟರು.<br /> <br /> ಮುಖ್ಯೋಪಾಧ್ಯಾಯ ಹೇಮಯ್ಯ, ಉಪನ್ಯಾಸಕ ಮಹಾಂತೇಶ ಮಸ್ಕಿ, ರಂಗಯ್ಯ ಶಟ್ಟಿ ಮಾತನಾಡಿದರು. ಪಿ.ಜಿ.ಹಚ್ಚೊಳ್ಳಿ, ದುರುಗಣ್ಣ, ಬಸವರಾಜ ಶಿಕ್ಷಕರು ಉಪಸ್ಥಿತರಿದ್ದರು. ದೊಡ್ಡಪ್ಪ ಬುಳ್ಳಾ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಭಾರತ ಸಮುೃದ್ಧ ರಾಷ್ಟ್ರವಾಗಬೇಕಾದರೆ ಮಹಿಳೆಯರ ಸಬಲಿಕರಣವಾಗಬೇಕು ಎಂದು ಪಿಎಸ್ಐ ಉದಯರವಿ ಹೇಳಿದರು.<br /> <br /> ಪಟ್ಟಣದ ಶತಮಾನೋತ್ಸವ ಭವನದಲ್ಲಿ ಮಂಗಳವಾರ ನಡೆದ ಹೆಣ್ಣುಮಕ್ಕಳ ಮಾರ್ಗದರ್ಶಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಿದೆ ಎಂದರು.<br /> <br /> ಪುರುಷರಿಗಿಂತ ಮಹಿಳೆಯರು ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಮಹಿಳೆಯರು ತಮಗಿರುವ ಸೌಲಭ್ಯವನ್ನು ಪಡೆದುಕೊಂಡು ಉನ್ನತಿ ಸಾಧಿಸಬೇಕು ಎಂದರು.<br /> <br /> ಪ್ರಸಕ್ತ ದಿನಗಳಲ್ಲಿ ಮಹಿಳೆಯರು ದುಡಿಮೆ ಮತ್ತು ಕುಟುಂಬ ನಿರ್ವಹಣೆಯ ಜತೆಗೆ ತಮ್ಮತನವನ್ನು ಉಳಿಸಿಕೊಳ್ಳಬೇಕಾದ ಸವಾಲು ಇದೆ ಎಂದು ಡಾ.ಶಿವಶರಣಪ್ಪ ಇತ್ಲಿ ಅಭಿಪ್ರಾಯಪಟ್ಟರು.<br /> <br /> ಮುಖ್ಯೋಪಾಧ್ಯಾಯ ಹೇಮಯ್ಯ, ಉಪನ್ಯಾಸಕ ಮಹಾಂತೇಶ ಮಸ್ಕಿ, ರಂಗಯ್ಯ ಶಟ್ಟಿ ಮಾತನಾಡಿದರು. ಪಿ.ಜಿ.ಹಚ್ಚೊಳ್ಳಿ, ದುರುಗಣ್ಣ, ಬಸವರಾಜ ಶಿಕ್ಷಕರು ಉಪಸ್ಥಿತರಿದ್ದರು. ದೊಡ್ಡಪ್ಪ ಬುಳ್ಳಾ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>