<p><strong>ಹುಕ್ಕೇರಿ: </strong>ಮಹಿಳೆಯರ ರಕ್ಷಣೆ ಗಾಗಿಯೇ ಸರ್ಕಾರ ವಿಶೇಷ ಕಾನೂನು ರೂಪಿಸಿದೆ. ಈ ಕುರಿತು ಮಹಿಳೆಯರಿಗೆ ಅರಿವು ಅಗತ್ಯ ಎಂದು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ವಿ.ವಿ. ಮಲ್ಲಾಪೂರ ಹೇಳಿದರು.<br /> ಅವರು ಸ್ಥಳೀಯ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ಕಾನೂನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಪಿತ್ರಾರ್ಜಿತ ಆಸ್ತಿಯಲ್ಲಿ ಎರಡನೆಯ ಹೆಂಡತಿಗೆ ಹಾಗೂ ಆಕೆಯ ಮಕ್ಕಳಿಗೆ ಹಕ್ಕು ಇರುವುದಿಲ್ಲ ಎಂದು ತಿಳಿಸಿದರು.ದಿವಾಣಿ ನ್ಯಾಯಾಧೀಶ ಸುನೀಲ ಹೊಸಮನಿ ಮಾತನಾಡಿ ಬಾಲ್ಯ ವಿವಾಹ ಕಾಯ್ದೆ, ಜೀವನಾಂಶ ಕುರಿತು ವಿವರಿಸಿ, ಮಹಿಳಾ ಕಾಯ್ದೆ ದುರುಪಯೋಗ ಆಗುತ್ತಿದೆ ಎಂದರು. <br /> <br /> ಬಡವರಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ದಾವೆ ಮಾಡಲು ಕಾನೂನು ಸೇವಾ ಸಮಿತಿಯಲ್ಲಿ ವಕೀಲರಿದ್ದು ಅವರು ಯಾವುದೇ ರೀತಿಯ ಶುಲ್ಕ ಆಕಾರಣೆ ಮಾಡುವುದಿಲ್ಲ. ಮಹಿಳೆಯರಿಗೆ ಅನ್ಯಾಯವಾದಲ್ಲಿ ಕಾನೂನು ಸೇವಾ ಸಮಿತಿಯ ನೆರವು ಪಡೆಯಲು ಸೂಚಿಸಿದರು.<br /> <br /> ಹಿರಿಯ ದಿವಾಣಿ ನ್ಯಾಯಾಧೀಶೆ ರೇಣುಕಾ ಕುಲಕರ್ಣಿ ಮಾತನಾಡಿ, ಧರ್ಮ ಹಾಗೂ ಕಾನೂನು ಒಂದೇ ನಾಣ್ಯದ ಎರಡು ಮುಖಗಳು. ಕುಟುಂಬದಲ್ಲಿ ಮಹಿಳೆಯ ಪಾತ್ರ ಪುರುಷನಿಗಿಂತ ದೊಡ್ಡದಾಗಿದ್ದು ತಂದೆ- ತಾಯಿ, ಅತ್ತೆ-ಮಾವ ಮತ್ತಿತರರನ್ನು ಇಳೆ ವಯಸ್ಸಿನಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ಆಸ್ತಿ ಮಾಡದೆ ಮಕ್ಕಳಿಗೆ ಒಳ್ಳೇ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಕಿವಿ ಮಾತು ಹೇಳಿದರು.<br /> ಮುಖ್ಯ ಶಿಕ್ಷಕಿ ಪಿ.ಬಿ. ಪಾಟೀಲ ಸ್ವಾಗತಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ತೇರದಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ: </strong>ಮಹಿಳೆಯರ ರಕ್ಷಣೆ ಗಾಗಿಯೇ ಸರ್ಕಾರ ವಿಶೇಷ ಕಾನೂನು ರೂಪಿಸಿದೆ. ಈ ಕುರಿತು ಮಹಿಳೆಯರಿಗೆ ಅರಿವು ಅಗತ್ಯ ಎಂದು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ವಿ.ವಿ. ಮಲ್ಲಾಪೂರ ಹೇಳಿದರು.<br /> ಅವರು ಸ್ಥಳೀಯ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ಕಾನೂನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಪಿತ್ರಾರ್ಜಿತ ಆಸ್ತಿಯಲ್ಲಿ ಎರಡನೆಯ ಹೆಂಡತಿಗೆ ಹಾಗೂ ಆಕೆಯ ಮಕ್ಕಳಿಗೆ ಹಕ್ಕು ಇರುವುದಿಲ್ಲ ಎಂದು ತಿಳಿಸಿದರು.ದಿವಾಣಿ ನ್ಯಾಯಾಧೀಶ ಸುನೀಲ ಹೊಸಮನಿ ಮಾತನಾಡಿ ಬಾಲ್ಯ ವಿವಾಹ ಕಾಯ್ದೆ, ಜೀವನಾಂಶ ಕುರಿತು ವಿವರಿಸಿ, ಮಹಿಳಾ ಕಾಯ್ದೆ ದುರುಪಯೋಗ ಆಗುತ್ತಿದೆ ಎಂದರು. <br /> <br /> ಬಡವರಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ದಾವೆ ಮಾಡಲು ಕಾನೂನು ಸೇವಾ ಸಮಿತಿಯಲ್ಲಿ ವಕೀಲರಿದ್ದು ಅವರು ಯಾವುದೇ ರೀತಿಯ ಶುಲ್ಕ ಆಕಾರಣೆ ಮಾಡುವುದಿಲ್ಲ. ಮಹಿಳೆಯರಿಗೆ ಅನ್ಯಾಯವಾದಲ್ಲಿ ಕಾನೂನು ಸೇವಾ ಸಮಿತಿಯ ನೆರವು ಪಡೆಯಲು ಸೂಚಿಸಿದರು.<br /> <br /> ಹಿರಿಯ ದಿವಾಣಿ ನ್ಯಾಯಾಧೀಶೆ ರೇಣುಕಾ ಕುಲಕರ್ಣಿ ಮಾತನಾಡಿ, ಧರ್ಮ ಹಾಗೂ ಕಾನೂನು ಒಂದೇ ನಾಣ್ಯದ ಎರಡು ಮುಖಗಳು. ಕುಟುಂಬದಲ್ಲಿ ಮಹಿಳೆಯ ಪಾತ್ರ ಪುರುಷನಿಗಿಂತ ದೊಡ್ಡದಾಗಿದ್ದು ತಂದೆ- ತಾಯಿ, ಅತ್ತೆ-ಮಾವ ಮತ್ತಿತರರನ್ನು ಇಳೆ ವಯಸ್ಸಿನಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ಆಸ್ತಿ ಮಾಡದೆ ಮಕ್ಕಳಿಗೆ ಒಳ್ಳೇ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಕಿವಿ ಮಾತು ಹೇಳಿದರು.<br /> ಮುಖ್ಯ ಶಿಕ್ಷಕಿ ಪಿ.ಬಿ. ಪಾಟೀಲ ಸ್ವಾಗತಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ತೇರದಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>