<p>ಶಿವಮೊಗ್ಗ: ಒಂದು ಕುಟುಂಬ ಹಾಗೂ ಸಮಾಜವನ್ನು ಅಭಿವೃದ್ಧಿಪಡಿಸುವ ಗುರುತರ ಜವಾಬ್ದಾರಿ ಮಹಿಳೆ ಮೇಲಿರುವುದರಿಂದ ಆಕೆಗೆ ತಂತ್ರಜ್ಞಾನ, ವಿಜ್ಞಾನ ಕುರಿತು ಸಾಮಾನ್ಯಜ್ಞಾನ ಅಗತ್ಯ ಎಂದು ಮನೋವೈದ್ಯ ಡಾ.ಕೆ.ಆರ್. ಶ್ರೀಧರ್ ತಿಳಿಸಿದರು. <br /> <br /> ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ `ಮಹಿಳೆ ಮತ್ತು ವಿಜ್ಞಾನ~ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಇಂದಿನ ತಂತ್ರಜ್ಞಾನ ಯುಗದಲ್ಲಿ ತಾಯಂದಿರಿಗೆ ವಿಜ್ಞಾನದ ಉಪಯೋಗ ಕುರಿತು ಅರಿವು ಮೂಡಿಸಬೇಕಾಗಿದೆ. ಅದಕ್ಕಾಗಿ ಇಂತಹ ಕಾರ್ಯಾಗಾರಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಸದಸ್ಯ ಎನ್.ಜೆ. ರಾಜಶೇಖರ್ ಮಾತನಾಡಿ, ಸಂಶೋಧನೆಯಲ್ಲಿ ಮಹಿಳೆ ಅತ್ಯಂತ ಹಿಂದುಳಿದಿದ್ದು, ಮಹಿಳಾ ಸಬಲೀಕರಣದ ಮೂಲಕ ಶಿಕ್ಷಣ, ವಿಜ್ಞಾನಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.<br /> <br /> ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೀಟಾ ಮಾಡ್ತಾ ಮಾತನಾಡಿ, ಒಂದು ಕುಟುಂಬದಲ್ಲಿ ಮಹಿಳೆ ಆದರ್ಶ ತಾಯಿಯಾಗಿ, ಹೆಂಡತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬಡತನ, ದೈಹಿಕ ತೊಂದರೆಗಳಿಂದ ಮಾನಸಿಕವಾಗಿ ದುರ್ಬಲವಾಗಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು. <br /> <br /> ಉಪನ್ಯಾಸಕ ಡಾ.ಪರಿಸರ ನಾಗರಾಜ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಚಾಲಕ ಡಾ.ಶೇಖರ್ ಗೌಳೇರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಅಂಗನವಾಡಿ ಸಂಘ, ಸ್ತ್ರೀಶಕ್ತಿ ಸಂಘಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಒಂದು ಕುಟುಂಬ ಹಾಗೂ ಸಮಾಜವನ್ನು ಅಭಿವೃದ್ಧಿಪಡಿಸುವ ಗುರುತರ ಜವಾಬ್ದಾರಿ ಮಹಿಳೆ ಮೇಲಿರುವುದರಿಂದ ಆಕೆಗೆ ತಂತ್ರಜ್ಞಾನ, ವಿಜ್ಞಾನ ಕುರಿತು ಸಾಮಾನ್ಯಜ್ಞಾನ ಅಗತ್ಯ ಎಂದು ಮನೋವೈದ್ಯ ಡಾ.ಕೆ.ಆರ್. ಶ್ರೀಧರ್ ತಿಳಿಸಿದರು. <br /> <br /> ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ `ಮಹಿಳೆ ಮತ್ತು ವಿಜ್ಞಾನ~ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಇಂದಿನ ತಂತ್ರಜ್ಞಾನ ಯುಗದಲ್ಲಿ ತಾಯಂದಿರಿಗೆ ವಿಜ್ಞಾನದ ಉಪಯೋಗ ಕುರಿತು ಅರಿವು ಮೂಡಿಸಬೇಕಾಗಿದೆ. ಅದಕ್ಕಾಗಿ ಇಂತಹ ಕಾರ್ಯಾಗಾರಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಸದಸ್ಯ ಎನ್.ಜೆ. ರಾಜಶೇಖರ್ ಮಾತನಾಡಿ, ಸಂಶೋಧನೆಯಲ್ಲಿ ಮಹಿಳೆ ಅತ್ಯಂತ ಹಿಂದುಳಿದಿದ್ದು, ಮಹಿಳಾ ಸಬಲೀಕರಣದ ಮೂಲಕ ಶಿಕ್ಷಣ, ವಿಜ್ಞಾನಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.<br /> <br /> ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೀಟಾ ಮಾಡ್ತಾ ಮಾತನಾಡಿ, ಒಂದು ಕುಟುಂಬದಲ್ಲಿ ಮಹಿಳೆ ಆದರ್ಶ ತಾಯಿಯಾಗಿ, ಹೆಂಡತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬಡತನ, ದೈಹಿಕ ತೊಂದರೆಗಳಿಂದ ಮಾನಸಿಕವಾಗಿ ದುರ್ಬಲವಾಗಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು. <br /> <br /> ಉಪನ್ಯಾಸಕ ಡಾ.ಪರಿಸರ ನಾಗರಾಜ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಚಾಲಕ ಡಾ.ಶೇಖರ್ ಗೌಳೇರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಅಂಗನವಾಡಿ ಸಂಘ, ಸ್ತ್ರೀಶಕ್ತಿ ಸಂಘಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>