<p><strong>ಚಾಮರಾಜನಗರ</strong>: ‘ಮನೆಯಲ್ಲಿರುವ ಮಹಿಳೆಯರು ಬದಲಾದರೆ ಮಾತ್ರ ಮೌಢ್ಯ ತಡೆಗಟ್ಟಲು ಸಾಧ್ಯ’ ಎಂದು ವಿಚಾರವಾದಿ ಕೆ.ಎಸ್. ಭಗವಾನ್ ಅಭಿಪ್ರಾಯಪಟ್ಟರು.<br /> <br /> ನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 57ನೇ ಮಹಾ ಪರಿನಿರ್ವಾಣ ದಿನಾಚರಣೆ ಹಾಗೂ ಮೌಢ್ಯ, ಅಂಧಶ್ರದ್ದೆ ಮತ್ತು ಶೋಷಣೆಯನ್ನು ನಿಷೇಧಿಸುವ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> ದಾರ್ಶನಿಕರೆಲ್ಲರೂ ಹಿಂದೂ ಧರ್ಮದಲ್ಲಿನ ಮೌಢ್ಯ, ಕಂದಾಚಾರ, ಶೋಷಣೆ, ಜಾತಿ ವ್ಯವಸ್ಥೆ ವಿರುದ್ಧ ಅಂದಿನಿಂದಲೇ ಹೋರಾಟ ಮಾಡಿದ್ದರು. ರಾಜ್ಯ ಸರ್ಕಾರ ಕೂಡ ಮೌಢ್ಯವನ್ನು ತಡೆಗಟ್ಟಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.<br /> ಪ್ರಗತಿಪರ ಚಿಂತಕ ವೆಂಕಟರಮಣಸ್ವಾಮಿ, ಹಿರಿಯ ರಂಗಕರ್ಮಿ ಕೆ. ವೆಂಕಟರಾಜು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಡಿ. ಸಿಲ್ವ, ಅರಕಲವಾಡಿ ನಾಗೇಂದ್ರ, ಅಬ್ರಾರ್, ಸಿ.ಎನ್. ಗೋವಿಂದರಾಜು, ಸಿ.ಎಂ. ನರಸಿಂಹಮೂರ್ತಿ ಹಾಜರಿದ್ದರು.<br /> <br /> <strong>‘ಶೋಷಿತರ ಸಮಾನತೆಗೆ ಹೋರಾಟ’<br /> ಚಾಮರಾಜನಗರ:</strong> ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಉಳಿಸಿಕೊಳ್ಳಲು ಯುವಜನರು ಮುಂದಾಗಬೇಕು’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಹೇಳಿದರು.<br /> <br /> ನಗರದ ಜಿಲ್ಲಾ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಅಂಬೇಡ್ಕರ್ ಅವರು ಸಮಾಜದಲ್ಲಿ ಜಡ್ಡುಗಟ್ಟಿದ್ದ ಜಾತಿ ವ್ಯವಸ್ಥೆಗೆ ಕೊಡಲಿ ಪೆಟ್ಟು ತಂದು ಶೋಷಿತರ ಸಮಾನತೆ ಬದುಕಿಗೆ ಅವಿರತ ಹೋರಾಟದ ಮೂಲಕ ವ್ಯವಸ್ಥಿತ ಬದುಕಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪಿ. ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಸ್.ಪಿ. ಮಹೇಶ್, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಬಸವರಾಜು, ಹೊಂಗನೂರು ಬಸವರಾಜು, ಬ.ಮ. ಕೃಷ್ಣಮೂರ್ತಿ, ಪರ್ವತರಾಜ್ ಹಾಜರಿದ್ದರು. <br /> <br /> <strong>‘ಕಾಂಗ್ರೆಸ್ ಮೊಸಳೆ ಕಣ್ಣೀರು’<br /> ಚಾಮರಾಜನಗರ:</strong> ‘ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ, ಅವರ ಆತ್ಮ ಚರಿತ್ರೆಯ ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು’ ಎಂದು ರಾಜ್ಯ ರೇಷ್ಮೆ ಉದ್ದಿಮೆ ನಿಗಮದ ಮಾಜಿ ಅಧ್ಯಕ್ಷ ನೂರೊಂದು ಶೆಟ್ಟಿ ಹೇಳಿದರು.<br /> <br /> ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎಸ್.ಸಿ ಮೋರ್ಚಾದಿಂದ ಶುಕ್ರವಾರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಅಂಬೇಡ್ಕರ್ ಅವರ ಬೆಳವಣಿಗೆಯನ್ನು ಸಹಿಸದ ಕಾಂಗ್ರೆಸ್ ಪಕ್ಷ ಅವರ ಎಲ್ಲಾ ಹೋರಾಟಕ್ಕೆ ವಿರುದ್ಧವಾಗಿ ನಡೆದುಕೊಂಡಿತ್ತು. ಈಗ ಅಂಬೇಡ್ಕರ್ ಅವರ ಅನುಯಾಯಿಗಳಂತೆ ವರ್ತಿಸುವ ಮೂಲಕ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.<br /> <br /> ತಾಲ್ಲೂಕು ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಆರ್. ಮಹದೇವ್ ಮಾತನಾಡಿದರು. ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯೆ ನಿತ್ಯಾ, ರೇವಣ್ಣ, ಎಂ. ಶಿವನಂಜಯ್ಯ. ಶಿವಣ್ಣ ಇದ್ದರು.<br /> <br /> <strong>‘ಚಿಂತನೆ ಸಮರ್ಪಕ ಅನುಷ್ಠಾನವಾಗಲಿ’<br /> ಕೊಳ್ಳೇಗಾಲ:</strong> ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕೆಂಬ ಅಂಬೇಡ್ಕರ್ ಅವರ ಚಿಂತನೆ ಸಮರ್ಪಕ ಅನುಷ್ಠಾನ ಆಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಮ್ಮ ತಿಳಿಸಿದರು.<br /> <br /> ಪಟ್ಟಣದ ಗುರುಭವನದಲ್ಲಿ ಶುಕ್ರವಾರ ನಡೆದ ಮುಖ್ಯಶಿಕ್ಷಕರ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ವಾಸು, ದೈಹಿಕ ಪರಿವೀಕ್ಷಕ ಜಾರ್ಜ್ ಪಿಲೀಪ್, ಬುಕಾನಿ, ಎಂ. ಬಸವಣ್ಣ, ನೇತ್ರಾವತಿ, ನಟರಾಜ್, ಆನಂದರಾಜ್ ಇತರರು ಇದ್ದರು.<br /> <br /> <strong>ಪರಿಪೂರ್ಣ ಶಿಕ್ಷಣ ನೀಡಲು ಸಲಹೆ<br /> ಕೊಳ್ಳೇಗಾಲ</strong>: ದಲಿತರು, ಹಿಂದುಳಿದವರು ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಪ್ರಭುಸ್ವಾಮಿ ತಿಳಿಸಿದರು.<br /> <br /> ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ನಂಜುಂಡಸ್ವಾಮಿ, ಮಲಬಾರ್ಗೋಲ್ಡ್ ಮೈಸೂರು ವಿಭಾಗ ನಿರ್ದೇಶಕ ಶರಪುದ್ದೀನ್, ಡಾ.ಶರತ್, ಡಾ.ಶಹಿರ್, ಡಾ.ಮರಿಯಪ್ಪ, ಬಸವಣ್ಣ, ದೊರೆರಾಜ್, ಕಮಲ್, ಕನಕರಾಜು ಇದ್ದರು.<br /> <br /> <strong>‘ಶೋಷಿತರು ಆಳುವ ವರ್ಗವಾಗಲಿ’<br /> ಯಳಂದೂರು:</strong> ‘ಸಮಾಜದಲ್ಲಿ ಶೋಷಿತ ವರ್ಗ ಆಳುವ ವರ್ಗವಾದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಮಂಜುನಾಥ್ ತಿಳಿಸಿದರು.<br /> <br /> ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತಹಶೀಲ್ದಾರ್ ಮಾಳಿಗಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿಜಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಂಗನಾಥ್, ಉಪಾಧ್ಯಕ್ಷ ಮಹೇಶ್ಕುಮಾರ್ ಮಾತನಾಡಿದರು.<br /> <br /> ತಾ.ಪಂ. ಸದಸ್ಯ ಕೆ.ಪಿ. ಶಿವಣ್ಣ, ಎಲ್. ರಾಮಚಂದ್ರು, ಉಪ ತಹಶೀಲ್ದಾರ್ ವೈ.ಎಂ. ನಂಜಯ್ಯ, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ರೇಷ್ಮೆ ಇಲಾಖೆಯ ರಾಚಪ್ಪ, ಉಪನೋಂದಣಾಧಿಕಾರಿ ರುದ್ರಯ್ಯ, ತೋಟಗಾರಿಕೆ ಇಲಾಖೆಯ ಚಂದ್ರು, ಸಿಡಿಪಿಒ ನಾಗೇಶ್, ಮಹದೇವಸ್ವಾಮಿ, ಕಂದಹಳ್ಳಿ ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಮನೆಯಲ್ಲಿರುವ ಮಹಿಳೆಯರು ಬದಲಾದರೆ ಮಾತ್ರ ಮೌಢ್ಯ ತಡೆಗಟ್ಟಲು ಸಾಧ್ಯ’ ಎಂದು ವಿಚಾರವಾದಿ ಕೆ.ಎಸ್. ಭಗವಾನ್ ಅಭಿಪ್ರಾಯಪಟ್ಟರು.<br /> <br /> ನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 57ನೇ ಮಹಾ ಪರಿನಿರ್ವಾಣ ದಿನಾಚರಣೆ ಹಾಗೂ ಮೌಢ್ಯ, ಅಂಧಶ್ರದ್ದೆ ಮತ್ತು ಶೋಷಣೆಯನ್ನು ನಿಷೇಧಿಸುವ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> ದಾರ್ಶನಿಕರೆಲ್ಲರೂ ಹಿಂದೂ ಧರ್ಮದಲ್ಲಿನ ಮೌಢ್ಯ, ಕಂದಾಚಾರ, ಶೋಷಣೆ, ಜಾತಿ ವ್ಯವಸ್ಥೆ ವಿರುದ್ಧ ಅಂದಿನಿಂದಲೇ ಹೋರಾಟ ಮಾಡಿದ್ದರು. ರಾಜ್ಯ ಸರ್ಕಾರ ಕೂಡ ಮೌಢ್ಯವನ್ನು ತಡೆಗಟ್ಟಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.<br /> ಪ್ರಗತಿಪರ ಚಿಂತಕ ವೆಂಕಟರಮಣಸ್ವಾಮಿ, ಹಿರಿಯ ರಂಗಕರ್ಮಿ ಕೆ. ವೆಂಕಟರಾಜು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಡಿ. ಸಿಲ್ವ, ಅರಕಲವಾಡಿ ನಾಗೇಂದ್ರ, ಅಬ್ರಾರ್, ಸಿ.ಎನ್. ಗೋವಿಂದರಾಜು, ಸಿ.ಎಂ. ನರಸಿಂಹಮೂರ್ತಿ ಹಾಜರಿದ್ದರು.<br /> <br /> <strong>‘ಶೋಷಿತರ ಸಮಾನತೆಗೆ ಹೋರಾಟ’<br /> ಚಾಮರಾಜನಗರ:</strong> ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಉಳಿಸಿಕೊಳ್ಳಲು ಯುವಜನರು ಮುಂದಾಗಬೇಕು’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಹೇಳಿದರು.<br /> <br /> ನಗರದ ಜಿಲ್ಲಾ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಅಂಬೇಡ್ಕರ್ ಅವರು ಸಮಾಜದಲ್ಲಿ ಜಡ್ಡುಗಟ್ಟಿದ್ದ ಜಾತಿ ವ್ಯವಸ್ಥೆಗೆ ಕೊಡಲಿ ಪೆಟ್ಟು ತಂದು ಶೋಷಿತರ ಸಮಾನತೆ ಬದುಕಿಗೆ ಅವಿರತ ಹೋರಾಟದ ಮೂಲಕ ವ್ಯವಸ್ಥಿತ ಬದುಕಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪಿ. ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಸ್.ಪಿ. ಮಹೇಶ್, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಬಸವರಾಜು, ಹೊಂಗನೂರು ಬಸವರಾಜು, ಬ.ಮ. ಕೃಷ್ಣಮೂರ್ತಿ, ಪರ್ವತರಾಜ್ ಹಾಜರಿದ್ದರು. <br /> <br /> <strong>‘ಕಾಂಗ್ರೆಸ್ ಮೊಸಳೆ ಕಣ್ಣೀರು’<br /> ಚಾಮರಾಜನಗರ:</strong> ‘ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ, ಅವರ ಆತ್ಮ ಚರಿತ್ರೆಯ ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು’ ಎಂದು ರಾಜ್ಯ ರೇಷ್ಮೆ ಉದ್ದಿಮೆ ನಿಗಮದ ಮಾಜಿ ಅಧ್ಯಕ್ಷ ನೂರೊಂದು ಶೆಟ್ಟಿ ಹೇಳಿದರು.<br /> <br /> ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎಸ್.ಸಿ ಮೋರ್ಚಾದಿಂದ ಶುಕ್ರವಾರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಅಂಬೇಡ್ಕರ್ ಅವರ ಬೆಳವಣಿಗೆಯನ್ನು ಸಹಿಸದ ಕಾಂಗ್ರೆಸ್ ಪಕ್ಷ ಅವರ ಎಲ್ಲಾ ಹೋರಾಟಕ್ಕೆ ವಿರುದ್ಧವಾಗಿ ನಡೆದುಕೊಂಡಿತ್ತು. ಈಗ ಅಂಬೇಡ್ಕರ್ ಅವರ ಅನುಯಾಯಿಗಳಂತೆ ವರ್ತಿಸುವ ಮೂಲಕ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.<br /> <br /> ತಾಲ್ಲೂಕು ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಆರ್. ಮಹದೇವ್ ಮಾತನಾಡಿದರು. ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯೆ ನಿತ್ಯಾ, ರೇವಣ್ಣ, ಎಂ. ಶಿವನಂಜಯ್ಯ. ಶಿವಣ್ಣ ಇದ್ದರು.<br /> <br /> <strong>‘ಚಿಂತನೆ ಸಮರ್ಪಕ ಅನುಷ್ಠಾನವಾಗಲಿ’<br /> ಕೊಳ್ಳೇಗಾಲ:</strong> ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕೆಂಬ ಅಂಬೇಡ್ಕರ್ ಅವರ ಚಿಂತನೆ ಸಮರ್ಪಕ ಅನುಷ್ಠಾನ ಆಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಮ್ಮ ತಿಳಿಸಿದರು.<br /> <br /> ಪಟ್ಟಣದ ಗುರುಭವನದಲ್ಲಿ ಶುಕ್ರವಾರ ನಡೆದ ಮುಖ್ಯಶಿಕ್ಷಕರ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ವಾಸು, ದೈಹಿಕ ಪರಿವೀಕ್ಷಕ ಜಾರ್ಜ್ ಪಿಲೀಪ್, ಬುಕಾನಿ, ಎಂ. ಬಸವಣ್ಣ, ನೇತ್ರಾವತಿ, ನಟರಾಜ್, ಆನಂದರಾಜ್ ಇತರರು ಇದ್ದರು.<br /> <br /> <strong>ಪರಿಪೂರ್ಣ ಶಿಕ್ಷಣ ನೀಡಲು ಸಲಹೆ<br /> ಕೊಳ್ಳೇಗಾಲ</strong>: ದಲಿತರು, ಹಿಂದುಳಿದವರು ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಪ್ರಭುಸ್ವಾಮಿ ತಿಳಿಸಿದರು.<br /> <br /> ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ನಂಜುಂಡಸ್ವಾಮಿ, ಮಲಬಾರ್ಗೋಲ್ಡ್ ಮೈಸೂರು ವಿಭಾಗ ನಿರ್ದೇಶಕ ಶರಪುದ್ದೀನ್, ಡಾ.ಶರತ್, ಡಾ.ಶಹಿರ್, ಡಾ.ಮರಿಯಪ್ಪ, ಬಸವಣ್ಣ, ದೊರೆರಾಜ್, ಕಮಲ್, ಕನಕರಾಜು ಇದ್ದರು.<br /> <br /> <strong>‘ಶೋಷಿತರು ಆಳುವ ವರ್ಗವಾಗಲಿ’<br /> ಯಳಂದೂರು:</strong> ‘ಸಮಾಜದಲ್ಲಿ ಶೋಷಿತ ವರ್ಗ ಆಳುವ ವರ್ಗವಾದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಮಂಜುನಾಥ್ ತಿಳಿಸಿದರು.<br /> <br /> ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತಹಶೀಲ್ದಾರ್ ಮಾಳಿಗಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿಜಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಂಗನಾಥ್, ಉಪಾಧ್ಯಕ್ಷ ಮಹೇಶ್ಕುಮಾರ್ ಮಾತನಾಡಿದರು.<br /> <br /> ತಾ.ಪಂ. ಸದಸ್ಯ ಕೆ.ಪಿ. ಶಿವಣ್ಣ, ಎಲ್. ರಾಮಚಂದ್ರು, ಉಪ ತಹಶೀಲ್ದಾರ್ ವೈ.ಎಂ. ನಂಜಯ್ಯ, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ರೇಷ್ಮೆ ಇಲಾಖೆಯ ರಾಚಪ್ಪ, ಉಪನೋಂದಣಾಧಿಕಾರಿ ರುದ್ರಯ್ಯ, ತೋಟಗಾರಿಕೆ ಇಲಾಖೆಯ ಚಂದ್ರು, ಸಿಡಿಪಿಒ ನಾಗೇಶ್, ಮಹದೇವಸ್ವಾಮಿ, ಕಂದಹಳ್ಳಿ ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>