<p>ಚಾಮರಾಜನಗರ: ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಪ್ರಜಾ ವಿಮೋಚನಾ ಚಳವಳಿಯ ಜಿಲ್ಲಾ ಘಟಕದಿಂದ ಧರಣಿ ನಡೆಯಿತು. <br /> <br /> ಪೌಷ್ಟಿಕ ಆಹಾರ ಇಲ್ಲದೆ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳು ತೊಂದರೆಗೆ ಸಿಲುಕಿದ್ದಾರೆ. ಅಪೌಷ್ಟಿಕತೆಗೆ ತುತ್ತಾಗಿ ಸಾವುಗೀಡಾಗುತ್ತಿದ್ದಾರೆ. ಕೂಡಲೇ, ಪೌಷ್ಟಿಕಾಂಶ ಹೊಂದಿರುವ ಆಹಾರ ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರಸ್ತುತ ಜಾರಿಯಲ್ಲಿರುವ ಪಡಿತರ ವ್ಯವಸ್ಥೆಯಲ್ಲಿ ನ್ಯೂನತೆಗಳಿವೆ. ಅಕ್ಕಿ, ಗೋಧಿ, ಸೀಮೆಎಣ್ಣೆ, ಸಕ್ಕರೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಬಡವರಿಗೆ ಸಮರ್ಪಕವಾಗಿ ಪಡಿತರ ನೀಡಬೇಕು ಎಣ್ಣೆ, ಬೇಳೆಕಾಳು ನೀಡುವ ವ್ಯವಸ್ಥೆಯೂ ಜಾರಿಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಜಿಲ್ಲೆಯಲ್ಲಿ ಅಕ್ರಮ ಮದ್ಯಮಾರಾಟ ನಡೆಯುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕ ಕುಟುಂಬಗಳು ಬೀದಿಪಾಲಾಗುತ್ತಿವೆ. ಜನರು ಕುಡಿತದ ಚಟಕ್ಕೆ ತುತ್ತಾಗುವ ಪರಿಣಾಮ ಮಹಿಳೆಯರು, ಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. <br /> <br /> ಕೂಡಲೇ, ಅನಧಿಕೃತ ಮದ್ಯದ ಅಂಗಡಿಗಳಿಗೆ ಕಡಿವಾಣ ಹಾಕಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಸರ್ಕಾರದ ಸಂಸ್ಥೆಗಳ ನಿರ್ವಹಣೆಯನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ನೀಡಲಾಗುತ್ತಿದೆ. ಗುತ್ತಿಗೆದಾರರ ಕಪಿಮುಷ್ಠಿಗೆ ಸಿಲುಕಿ ವಿದ್ಯಾರ್ಥಿಗಳು ತೊಂದರೆಪಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಯಾವುದೇ, ಸಂಸ್ಥೆಯಲ್ಲೂ ಗುತ್ತಿಗೆ ಪದ್ಧತಿಯನ್ನು ಅನುಷ್ಠಾನಗೊಳಿಸಬಾರದು. ಕೂಡಲೇ, ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.<br /> <br /> ಜಿಲ್ಲೆಯಲ್ಲಿ ನಡೆಯುತ್ತಿರುವ ಕಪ್ಪುಶಿಲೆ ಗಣಿಗಾರಿಕೆಗೆ ನಿಷೇಧ ಹೇರಬೇಕು. ಯಳಂದೂರು ತಾಲ್ಲೂಕಿನ ಯರಗಂಬಳ್ಳಿ, ಗಂಗವಾಡಿ, ದಾಸನಹುಂಡಿ ಗ್ರಾಮದಲ್ಲಿ ಪರಿಶಿಷ್ಟರ ಜಮೀನು ಗಳು ಬಳ್ಳಾರಿ ಮೂಲದ ಉದ್ಯಮಿಗಳ ಪಾಲಾಗಿವೆ. ಭೂ ಕಬಳಿಕೆ ವಿರುದ್ಧ ಕ್ರಮಕೈಗೊಂಡು ಜಮೀನು ವಾಪಸ್ ಕೊಡಿಸ ಬೇಕು. <br /> <br /> ಜಿಲ್ಲಾಡಳಿತ ಭವನದ ಮುಂಭಾಗ ಶೀಘ್ರವೇ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಂಗವಾಡಿ ಸೋಮಣ್ಣ, ಬುಲೆಟ್ ಸಿದ್ದರಾಜು, ಎಂ. ಮಹೇಶ್, ರವಿಕುಮಾರ್, ಉಷಾ, ಶಿವಣ್ಣ, ಶಾಂತರಾಜ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಪ್ರಜಾ ವಿಮೋಚನಾ ಚಳವಳಿಯ ಜಿಲ್ಲಾ ಘಟಕದಿಂದ ಧರಣಿ ನಡೆಯಿತು. <br /> <br /> ಪೌಷ್ಟಿಕ ಆಹಾರ ಇಲ್ಲದೆ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳು ತೊಂದರೆಗೆ ಸಿಲುಕಿದ್ದಾರೆ. ಅಪೌಷ್ಟಿಕತೆಗೆ ತುತ್ತಾಗಿ ಸಾವುಗೀಡಾಗುತ್ತಿದ್ದಾರೆ. ಕೂಡಲೇ, ಪೌಷ್ಟಿಕಾಂಶ ಹೊಂದಿರುವ ಆಹಾರ ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರಸ್ತುತ ಜಾರಿಯಲ್ಲಿರುವ ಪಡಿತರ ವ್ಯವಸ್ಥೆಯಲ್ಲಿ ನ್ಯೂನತೆಗಳಿವೆ. ಅಕ್ಕಿ, ಗೋಧಿ, ಸೀಮೆಎಣ್ಣೆ, ಸಕ್ಕರೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಬಡವರಿಗೆ ಸಮರ್ಪಕವಾಗಿ ಪಡಿತರ ನೀಡಬೇಕು ಎಣ್ಣೆ, ಬೇಳೆಕಾಳು ನೀಡುವ ವ್ಯವಸ್ಥೆಯೂ ಜಾರಿಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಜಿಲ್ಲೆಯಲ್ಲಿ ಅಕ್ರಮ ಮದ್ಯಮಾರಾಟ ನಡೆಯುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕ ಕುಟುಂಬಗಳು ಬೀದಿಪಾಲಾಗುತ್ತಿವೆ. ಜನರು ಕುಡಿತದ ಚಟಕ್ಕೆ ತುತ್ತಾಗುವ ಪರಿಣಾಮ ಮಹಿಳೆಯರು, ಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. <br /> <br /> ಕೂಡಲೇ, ಅನಧಿಕೃತ ಮದ್ಯದ ಅಂಗಡಿಗಳಿಗೆ ಕಡಿವಾಣ ಹಾಕಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಸರ್ಕಾರದ ಸಂಸ್ಥೆಗಳ ನಿರ್ವಹಣೆಯನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ನೀಡಲಾಗುತ್ತಿದೆ. ಗುತ್ತಿಗೆದಾರರ ಕಪಿಮುಷ್ಠಿಗೆ ಸಿಲುಕಿ ವಿದ್ಯಾರ್ಥಿಗಳು ತೊಂದರೆಪಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಯಾವುದೇ, ಸಂಸ್ಥೆಯಲ್ಲೂ ಗುತ್ತಿಗೆ ಪದ್ಧತಿಯನ್ನು ಅನುಷ್ಠಾನಗೊಳಿಸಬಾರದು. ಕೂಡಲೇ, ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.<br /> <br /> ಜಿಲ್ಲೆಯಲ್ಲಿ ನಡೆಯುತ್ತಿರುವ ಕಪ್ಪುಶಿಲೆ ಗಣಿಗಾರಿಕೆಗೆ ನಿಷೇಧ ಹೇರಬೇಕು. ಯಳಂದೂರು ತಾಲ್ಲೂಕಿನ ಯರಗಂಬಳ್ಳಿ, ಗಂಗವಾಡಿ, ದಾಸನಹುಂಡಿ ಗ್ರಾಮದಲ್ಲಿ ಪರಿಶಿಷ್ಟರ ಜಮೀನು ಗಳು ಬಳ್ಳಾರಿ ಮೂಲದ ಉದ್ಯಮಿಗಳ ಪಾಲಾಗಿವೆ. ಭೂ ಕಬಳಿಕೆ ವಿರುದ್ಧ ಕ್ರಮಕೈಗೊಂಡು ಜಮೀನು ವಾಪಸ್ ಕೊಡಿಸ ಬೇಕು. <br /> <br /> ಜಿಲ್ಲಾಡಳಿತ ಭವನದ ಮುಂಭಾಗ ಶೀಘ್ರವೇ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಂಗವಾಡಿ ಸೋಮಣ್ಣ, ಬುಲೆಟ್ ಸಿದ್ದರಾಜು, ಎಂ. ಮಹೇಶ್, ರವಿಕುಮಾರ್, ಉಷಾ, ಶಿವಣ್ಣ, ಶಾಂತರಾಜ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>