<p>ರಾಯಚೂರು: ಪ್ರತಿಯೊಬ್ಬ ಮಹಿಳೆ ಶಿಕ್ಷಣ ಪಡೆಯಬೇಕು. ಮಹಿಳೆಯರು ಯಾವುದೇ ಕ್ಷೇತ್ರವಿರಲಿ ಆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಜಾಗೃತಿ ಬಿ ದೇಶಮಾನೆ ಹೇಳಿದರು.<br /> <br /> ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್ಎಸ್ಜಿ ಮಹಿಳಾ ಮಹಾವಿದ್ಯಾಲಯದಲ್ಲಿ ಭಾರತೀಯ ಕುಟುಂಬ ಯೋಜನೆ ಸಂಘದ ವತಿಯಿಂದ (ಎಫ್ಪಿಎಐ) ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.<br /> <br /> ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ದೊರಕಲು ಹೋರಾಟದ ಅಗತ್ಯ ಇದೆ ಎಂದು ತಿಳಿಸಿದರು.<br /> ನಗರಸಭೆ ಪ್ರಭಾರ ಅಧ್ಯಕ್ಷೆ ಪದ್ಮಾಶ್ರೀನಿವಾಸ ಮಾತನಾಡಿ, ಎಲ್ಲ ಮಹಿಳೆಯರು ಜಾತೀಯತೆ ಮರೆತು ಒಗ್ಗಟ್ಟಾಗಿ ಶೇ 33ರಷ್ಟು ಮೀಸಲಾತಿ ಹಾಗೂ ಲಿಂಗಸಮಾನತೆ ಅನುಷ್ಠಾನ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಬೇಕು. ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.<br /> <br /> ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.<br /> ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಿ,ನಂದಗೋಪಾಲ ವಹಿಸಿದ್ದರು. ಎಫ್ಪಿಎಐ ಸಂಸ್ಥೆಯ ಸದಸ್ಯೆ ಈರಮ್ಮ, ವೈದ್ಯಾಧಿಕಾರಿ ಡಾ.ಅನುರಾಧ, ಉಪನ್ಯಾಸಕರಾದ ಶಕುಂತಲಾ ಗೋಪಿಶೆಟ್ಟಿ, ವೆಂಕಟೇಶ, ವಿರುಪಾಕ್ಷಯ್ಯ, ಕಾರ್ಯಕ್ರಮಾಧಿಕಾರಿ ಭೀಮರಾಯ ಜಾಲಿಬೆಂಚಿ, ಶೂಶ್ರುಷಕಿ ಶೋಭಾರಾಣಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಪ್ರತಿಯೊಬ್ಬ ಮಹಿಳೆ ಶಿಕ್ಷಣ ಪಡೆಯಬೇಕು. ಮಹಿಳೆಯರು ಯಾವುದೇ ಕ್ಷೇತ್ರವಿರಲಿ ಆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಜಾಗೃತಿ ಬಿ ದೇಶಮಾನೆ ಹೇಳಿದರು.<br /> <br /> ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್ಎಸ್ಜಿ ಮಹಿಳಾ ಮಹಾವಿದ್ಯಾಲಯದಲ್ಲಿ ಭಾರತೀಯ ಕುಟುಂಬ ಯೋಜನೆ ಸಂಘದ ವತಿಯಿಂದ (ಎಫ್ಪಿಎಐ) ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.<br /> <br /> ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ದೊರಕಲು ಹೋರಾಟದ ಅಗತ್ಯ ಇದೆ ಎಂದು ತಿಳಿಸಿದರು.<br /> ನಗರಸಭೆ ಪ್ರಭಾರ ಅಧ್ಯಕ್ಷೆ ಪದ್ಮಾಶ್ರೀನಿವಾಸ ಮಾತನಾಡಿ, ಎಲ್ಲ ಮಹಿಳೆಯರು ಜಾತೀಯತೆ ಮರೆತು ಒಗ್ಗಟ್ಟಾಗಿ ಶೇ 33ರಷ್ಟು ಮೀಸಲಾತಿ ಹಾಗೂ ಲಿಂಗಸಮಾನತೆ ಅನುಷ್ಠಾನ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಯಬೇಕು. ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.<br /> <br /> ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.<br /> ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಿ,ನಂದಗೋಪಾಲ ವಹಿಸಿದ್ದರು. ಎಫ್ಪಿಎಐ ಸಂಸ್ಥೆಯ ಸದಸ್ಯೆ ಈರಮ್ಮ, ವೈದ್ಯಾಧಿಕಾರಿ ಡಾ.ಅನುರಾಧ, ಉಪನ್ಯಾಸಕರಾದ ಶಕುಂತಲಾ ಗೋಪಿಶೆಟ್ಟಿ, ವೆಂಕಟೇಶ, ವಿರುಪಾಕ್ಷಯ್ಯ, ಕಾರ್ಯಕ್ರಮಾಧಿಕಾರಿ ಭೀಮರಾಯ ಜಾಲಿಬೆಂಚಿ, ಶೂಶ್ರುಷಕಿ ಶೋಭಾರಾಣಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>