<p>ಚಾಮರಾಜನಗರ: ನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಮಲ್ಲಿಕಾ ಸ್ವಸಹಾಯ ಸಂಘದ ಪದಾಧಿಕಾರಿಗಳು ವಿಶ್ವ ಮಹಿಳಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.<br /> <br /> ಸಂಘದ ಅಧ್ಯಕ್ಷೆ ಕಲ್ಯಾಣಿ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆಯನ್ನು ಎಲ್ಲ ಮಹಿಳೆಯರು ಹಬ್ಬದ ಮಾದರಿಯಲ್ಲಿ ಆಚರಣೆ ಮಾಡಬೇಕು ಎಂದರು.<br /> <br /> ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರಕಬೇಕಿದೆ. ಸರ್ಕಾರ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ಸೌಲಭ್ಯ ನೀಡುತ್ತಿದೆ. ಈ ಪ್ರಮಾಣವನ್ನು ಶೇ 50ಕ್ಕೆ ಏರಿಕೆ ಮಾಡಬೇಕು. ಜತೆಗೆ, ಅರ್ಹತೆಯುಳ್ಳ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.<br /> <br /> ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ, ಹಿಂಸೆ ಪ್ರಕರಣಗಳ ತಡೆಗೆ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದ ಅವರು, ಮಹಿಳಾ ಸಂಘಗಳು ಪ್ರಬಲಗೊಳ್ಳುತ್ತಿವೆ. ಎಲ್ಲ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ಗಳನ್ನು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸುಮತಿ, ಸದಸ್ಯರಾದ ಶಶಿಕಲಾ, ಶಶಿರೇಖಾ, ಲೀಲಾವತಿ, ಶಿಲ್ಪಾ, ಗಾಯತ್ರಿ, ರಾಜಮ್ಮ, ನಾಗಲಕ್ಷ್ಮೀ, ಲೀಲಾವತಿ, ನಾಗರತ್ನಾ, ಭಾಗ್ಯಾ ರಾಜ್, ವೀಣಾ ರಾಜ್, ಧನಲಕ್ಷ್ಮೀ, ಮಂಗಳಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಮಲ್ಲಿಕಾ ಸ್ವಸಹಾಯ ಸಂಘದ ಪದಾಧಿಕಾರಿಗಳು ವಿಶ್ವ ಮಹಿಳಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.<br /> <br /> ಸಂಘದ ಅಧ್ಯಕ್ಷೆ ಕಲ್ಯಾಣಿ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆಯನ್ನು ಎಲ್ಲ ಮಹಿಳೆಯರು ಹಬ್ಬದ ಮಾದರಿಯಲ್ಲಿ ಆಚರಣೆ ಮಾಡಬೇಕು ಎಂದರು.<br /> <br /> ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರಕಬೇಕಿದೆ. ಸರ್ಕಾರ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ಸೌಲಭ್ಯ ನೀಡುತ್ತಿದೆ. ಈ ಪ್ರಮಾಣವನ್ನು ಶೇ 50ಕ್ಕೆ ಏರಿಕೆ ಮಾಡಬೇಕು. ಜತೆಗೆ, ಅರ್ಹತೆಯುಳ್ಳ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.<br /> <br /> ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ, ಹಿಂಸೆ ಪ್ರಕರಣಗಳ ತಡೆಗೆ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದ ಅವರು, ಮಹಿಳಾ ಸಂಘಗಳು ಪ್ರಬಲಗೊಳ್ಳುತ್ತಿವೆ. ಎಲ್ಲ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ಗಳನ್ನು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸುಮತಿ, ಸದಸ್ಯರಾದ ಶಶಿಕಲಾ, ಶಶಿರೇಖಾ, ಲೀಲಾವತಿ, ಶಿಲ್ಪಾ, ಗಾಯತ್ರಿ, ರಾಜಮ್ಮ, ನಾಗಲಕ್ಷ್ಮೀ, ಲೀಲಾವತಿ, ನಾಗರತ್ನಾ, ಭಾಗ್ಯಾ ರಾಜ್, ವೀಣಾ ರಾಜ್, ಧನಲಕ್ಷ್ಮೀ, ಮಂಗಳಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>