<p>ಶಿವಮೊಗ್ಗ: ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಹಲವಾರು ಸಮಸ್ಯೆಗಳಿವೆ; ಅವುಗಳಿಗೆ ವಿಶ್ವವಿದ್ಯಾಲಯ ಸಂಶೋಧನೆಗಳ ಮೂಲಕ ಪರಿಹಾರ ಕಂಡುಹಿಡಿಯಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಸಲಹೆ ಮಾಡಿದರು.<br /> <br /> ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿಯಲ್ಲಿ ಮಂಗಳವಾರ ಮಹಿಳೆಯರ ಮೂಲ ಸೌಕರ್ಯಗಳ ಅಭಿವೃದ್ಧಿ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಾಸ್ತಾವಿಕ ಮಾತನಾಡಿದ ಘಟಕದ ಸಂಯೋಜನಾಧಿಕಾರಿ ಡಾ.ರೇಚಲ್ ಬಾರಿ, ವಿಶ್ವವಿದ್ಯಾಲಯ ದಂತಗೋಪುರ ಆಗಬಾರದು. ವಿಶ್ವವಿದ್ಯಾಲಯದ ವ್ಯಾಪ್ತಿಯ ಗ್ರಾಮೀಣ ಮಹಿಳೆಯರಿಗೆ ಈ ಘಟಕ ನೆರವಾಗಬೇಕು. ಇದಕ್ಕೆ ವಿಶ್ವವಿದ್ಯಾಲಯದ ಎಲ್ಲರ ಸಹಕಾರ ಮುಖ್ಯ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿದೇಶಿ ಮಹಿಳಾ ವಿದ್ವಾಂಸರನ್ನು ಇಲ್ಲಿಗೆ ಕರೆಸುವ ಮೂಲಕ ಮಹಿಳಾ ಸಮಸ್ಯೆಗಳ ಕುರಿತು ಚಿಂತನೆ ನಡೆಸಬೇಕು. ಸುವರ್ಣ ಮಹೋತ್ಸವದ ವೇಳೆಗೆ ಈ ಘಟಕ ಅಂತರರಾಷ್ಟ್ರೀಯಮಟ್ಟದ ಕೇಂದ್ರವಾಗಲಿದೆ ಎಂದು ಅಭಿಪ್ರಾಯಪಟ್ಟರು.ಸಮಾರಂಭದಲ್ಲಿ ಕುಲಸಚಿವರಾದ ಪ್ರೊ.ಟಿ.ಆರ್. ಮಂಜುನಾಥ್, ಪ್ರೊ.ಎಸ್.ಎ. ಜಾವೀದ್, ಹಣಕಾಸು ಅಧಿಕಾರಿ ಆರ್. ಹಿರೇಮಣಿ ನಾಯ್ಕ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಹಲವಾರು ಸಮಸ್ಯೆಗಳಿವೆ; ಅವುಗಳಿಗೆ ವಿಶ್ವವಿದ್ಯಾಲಯ ಸಂಶೋಧನೆಗಳ ಮೂಲಕ ಪರಿಹಾರ ಕಂಡುಹಿಡಿಯಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಸಲಹೆ ಮಾಡಿದರು.<br /> <br /> ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿಯಲ್ಲಿ ಮಂಗಳವಾರ ಮಹಿಳೆಯರ ಮೂಲ ಸೌಕರ್ಯಗಳ ಅಭಿವೃದ್ಧಿ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಾಸ್ತಾವಿಕ ಮಾತನಾಡಿದ ಘಟಕದ ಸಂಯೋಜನಾಧಿಕಾರಿ ಡಾ.ರೇಚಲ್ ಬಾರಿ, ವಿಶ್ವವಿದ್ಯಾಲಯ ದಂತಗೋಪುರ ಆಗಬಾರದು. ವಿಶ್ವವಿದ್ಯಾಲಯದ ವ್ಯಾಪ್ತಿಯ ಗ್ರಾಮೀಣ ಮಹಿಳೆಯರಿಗೆ ಈ ಘಟಕ ನೆರವಾಗಬೇಕು. ಇದಕ್ಕೆ ವಿಶ್ವವಿದ್ಯಾಲಯದ ಎಲ್ಲರ ಸಹಕಾರ ಮುಖ್ಯ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿದೇಶಿ ಮಹಿಳಾ ವಿದ್ವಾಂಸರನ್ನು ಇಲ್ಲಿಗೆ ಕರೆಸುವ ಮೂಲಕ ಮಹಿಳಾ ಸಮಸ್ಯೆಗಳ ಕುರಿತು ಚಿಂತನೆ ನಡೆಸಬೇಕು. ಸುವರ್ಣ ಮಹೋತ್ಸವದ ವೇಳೆಗೆ ಈ ಘಟಕ ಅಂತರರಾಷ್ಟ್ರೀಯಮಟ್ಟದ ಕೇಂದ್ರವಾಗಲಿದೆ ಎಂದು ಅಭಿಪ್ರಾಯಪಟ್ಟರು.ಸಮಾರಂಭದಲ್ಲಿ ಕುಲಸಚಿವರಾದ ಪ್ರೊ.ಟಿ.ಆರ್. ಮಂಜುನಾಥ್, ಪ್ರೊ.ಎಸ್.ಎ. ಜಾವೀದ್, ಹಣಕಾಸು ಅಧಿಕಾರಿ ಆರ್. ಹಿರೇಮಣಿ ನಾಯ್ಕ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>