<p>ಶಿವಮೊಗ್ಗ: ಮಹಿಳೆಯರು ತಮ್ಮಲ್ಲಿರುವ ಜ್ಞಾನವನ್ನು ಪರಸ್ಪರ ಹಂಚಿಕೊಂಡು ಮುನ್ನಡೆಯಬೇಕು. ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ಧಾವಿಸಬೇಕು. ಈ ಮೂಲಕ ಮಹಿಳಾ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿ.ಪಂ. ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ ತಿಳಿಸಿದರು.<br /> <br /> ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ಸೋಮವಾರ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್, ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಮಹಿಳಾ ಅಭಿವೃದ್ಧಿ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಇಂದು ಸಂಘ-ಸಂಸ್ಥೆಗಳಿಂದಾಗಿ ಮಹಿಳೆಯರಲ್ಲಿ ಒಗ್ಗಟ್ಟು ಮೂಡಿದ್ದು, ಪುರುಷನಿಗೆ ಸರಿಸಮಾನವಾಗಿ ರಾಜಕೀಯ ಸೇರಿದಂತೆ ಪ್ರತಿ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸುತ್ತಿದ್ದಾಳೆ ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥಗೌಡ ಮಾತನಾಡಿ, ಇಂದು ಕುಟುಂಬ ಜೀವನದಲ್ಲಿ ಭಾವನೆಗಳು ಛಿದ್ರಗೊಂಡಿವೆ. ಅವುಗಳನ್ನು ಒಟ್ಟಿಗೆ ಸೇರಿಸುವ ಕೆಲಸವನ್ನು ಮಹಿಳೆಯರು ಮಾಡಬೇಕಾಗಿದೆ ಎಂದರು.<br /> <br /> ಆರ್ಥಿಕ ಮಟ್ಟ ಹೆಚ್ಚಾದಂತೆ ಕುಟುಂಬ ಕಲಹಗಳು ಉಂಟಾಗುತ್ತಿವೆ. ಆದ್ದರಿಂದ ಗಂಡ-ಹೆಂಡತಿಯರಲ್ಲಿ ಹೊಂದಾಣಿಕೆ ಇದ್ದರೆ ಸಮಾಜದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿಸಿದರು.<br /> <br /> ಗಂಡಸರು ಇಂದು ದುಂದುವೆಚ್ಚ ಮಾಡುವುದು ಹೆಚ್ಚಿದೆ. ಅದನ್ನು ಹಿಡಿತದಲ್ಲಿಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹಾಗೆಯೇ, ಮಹಿಳೆ ಕುಟುಂಬವನ್ನು ಭದ್ರವಾಗಿ ಹಿಡಿದಿಡುವುದರಿಂದ ದೇಶ ಸುಭದ್ರವಾಗಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಕಮಲಾ ನೆಹರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕಿರಣ್ ದೇಸಾಯಿ, ಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಚನ್ನಳ್ಳಿ, ಬ್ಯಾಂಕ್ ಉಪಾಧ್ಯಕ್ಷ ಷಡಾಕ್ಷರಿ, ನಿರ್ದೇಶಕರಾದ ದುಗ್ಗಪ್ಪಗೌಡ, ಜಗದೀಶ್, ಈರಮ್ಮ, ಸರಸ್ವತಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಮಹಿಳೆಯರು ತಮ್ಮಲ್ಲಿರುವ ಜ್ಞಾನವನ್ನು ಪರಸ್ಪರ ಹಂಚಿಕೊಂಡು ಮುನ್ನಡೆಯಬೇಕು. ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ಧಾವಿಸಬೇಕು. ಈ ಮೂಲಕ ಮಹಿಳಾ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿ.ಪಂ. ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ ತಿಳಿಸಿದರು.<br /> <br /> ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ಸೋಮವಾರ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್, ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಮಹಿಳಾ ಅಭಿವೃದ್ಧಿ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಇಂದು ಸಂಘ-ಸಂಸ್ಥೆಗಳಿಂದಾಗಿ ಮಹಿಳೆಯರಲ್ಲಿ ಒಗ್ಗಟ್ಟು ಮೂಡಿದ್ದು, ಪುರುಷನಿಗೆ ಸರಿಸಮಾನವಾಗಿ ರಾಜಕೀಯ ಸೇರಿದಂತೆ ಪ್ರತಿ ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸುತ್ತಿದ್ದಾಳೆ ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥಗೌಡ ಮಾತನಾಡಿ, ಇಂದು ಕುಟುಂಬ ಜೀವನದಲ್ಲಿ ಭಾವನೆಗಳು ಛಿದ್ರಗೊಂಡಿವೆ. ಅವುಗಳನ್ನು ಒಟ್ಟಿಗೆ ಸೇರಿಸುವ ಕೆಲಸವನ್ನು ಮಹಿಳೆಯರು ಮಾಡಬೇಕಾಗಿದೆ ಎಂದರು.<br /> <br /> ಆರ್ಥಿಕ ಮಟ್ಟ ಹೆಚ್ಚಾದಂತೆ ಕುಟುಂಬ ಕಲಹಗಳು ಉಂಟಾಗುತ್ತಿವೆ. ಆದ್ದರಿಂದ ಗಂಡ-ಹೆಂಡತಿಯರಲ್ಲಿ ಹೊಂದಾಣಿಕೆ ಇದ್ದರೆ ಸಮಾಜದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿಸಿದರು.<br /> <br /> ಗಂಡಸರು ಇಂದು ದುಂದುವೆಚ್ಚ ಮಾಡುವುದು ಹೆಚ್ಚಿದೆ. ಅದನ್ನು ಹಿಡಿತದಲ್ಲಿಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹಾಗೆಯೇ, ಮಹಿಳೆ ಕುಟುಂಬವನ್ನು ಭದ್ರವಾಗಿ ಹಿಡಿದಿಡುವುದರಿಂದ ದೇಶ ಸುಭದ್ರವಾಗಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ಕಮಲಾ ನೆಹರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕಿರಣ್ ದೇಸಾಯಿ, ಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಚನ್ನಳ್ಳಿ, ಬ್ಯಾಂಕ್ ಉಪಾಧ್ಯಕ್ಷ ಷಡಾಕ್ಷರಿ, ನಿರ್ದೇಶಕರಾದ ದುಗ್ಗಪ್ಪಗೌಡ, ಜಗದೀಶ್, ಈರಮ್ಮ, ಸರಸ್ವತಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>