<p>ಆನೇಕಲ್: ಮಹಿಳಾ ಸಬಲೀಕರಣದಿಂದ ದೇಶದ ಪ್ರಗತಿ ಸಾಧ್ಯ ಎಂದು ಮಾಯಸಂದ್ರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಲಾವತಿ ವೆಂಕಟೇಶ್ ನುಡಿದರು. <br /> <br /> ತಾಲ್ಲೂಕಿನ ಮಂಚನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಸಮರ್ಥ ಯುವಜನ ಸೇವಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತೆ ನಾಗವೇಣಿ ಮಾತನಾಡಿ, ಮಹಿಳೆ ಎಲ್ಲ ರಂಗಗಳಲ್ಲೂ ದಾಪುಗಾಲಿಟ್ಟು ಉನ್ನತ ಸಾಧನೆ ಮಾಡುತ್ತಿರುವುದು ಮಹಿಳೆಯ ಶಕ್ತಿಯ ಪ್ರತೀಕವಾಗಿದೆ ಎಂದರು.<br /> <br /> ಸಮರ್ಥ ಯುವ ಜನ ಸೇವಾ ಸಂಸ್ಥೆಯ ಅಧ್ಯಕ್ಷ ಆದೂರು ಪ್ರಕಾಶ್ ಮಾತನಾಡಿ, ಜಾಗತಿಕರಣದ ಪ್ರಸ್ತುತ ದಿನಗಳಲ್ಲಿ ಮಹಿಳೆಯರಿಗೆ ಹಲವು ಸವಾಲುಗಳು ಎದುರಾಗುತ್ತಿವೆ. ಇವುಗಳನ್ನು ಧೈರ್ಯದಿಂದ ಎದುರಿಸಿ ಮುಂದೆ ಬರಬೇಕು ಎಂದರು.<br /> <br /> ಭಗತ್ಸಿಂಗ್ ಯುವ ಸೇನಾ ಸಂಘದ ಅಧ್ಯಕ್ಷ ಬಳ್ಳೂರು ಬಾಬು, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ಯಾಮಲಾ, ಸಮರ್ಥ ಯುವಜನ ಸೇವಾ ಸಂಸ್ಥೆಯ ಉಪಾಧ್ಯಕ್ಷ ಮಹೇಶ್ ಊಗಿನಹಳ್ಳಿ, ಸಿಆರ್ಪಿ ಚಂದ್ರಪ್ಪ, ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನಾರಾಧ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಮಹಿಳಾ ಸಬಲೀಕರಣದಿಂದ ದೇಶದ ಪ್ರಗತಿ ಸಾಧ್ಯ ಎಂದು ಮಾಯಸಂದ್ರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಲಾವತಿ ವೆಂಕಟೇಶ್ ನುಡಿದರು. <br /> <br /> ತಾಲ್ಲೂಕಿನ ಮಂಚನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಸಮರ್ಥ ಯುವಜನ ಸೇವಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತೆ ನಾಗವೇಣಿ ಮಾತನಾಡಿ, ಮಹಿಳೆ ಎಲ್ಲ ರಂಗಗಳಲ್ಲೂ ದಾಪುಗಾಲಿಟ್ಟು ಉನ್ನತ ಸಾಧನೆ ಮಾಡುತ್ತಿರುವುದು ಮಹಿಳೆಯ ಶಕ್ತಿಯ ಪ್ರತೀಕವಾಗಿದೆ ಎಂದರು.<br /> <br /> ಸಮರ್ಥ ಯುವ ಜನ ಸೇವಾ ಸಂಸ್ಥೆಯ ಅಧ್ಯಕ್ಷ ಆದೂರು ಪ್ರಕಾಶ್ ಮಾತನಾಡಿ, ಜಾಗತಿಕರಣದ ಪ್ರಸ್ತುತ ದಿನಗಳಲ್ಲಿ ಮಹಿಳೆಯರಿಗೆ ಹಲವು ಸವಾಲುಗಳು ಎದುರಾಗುತ್ತಿವೆ. ಇವುಗಳನ್ನು ಧೈರ್ಯದಿಂದ ಎದುರಿಸಿ ಮುಂದೆ ಬರಬೇಕು ಎಂದರು.<br /> <br /> ಭಗತ್ಸಿಂಗ್ ಯುವ ಸೇನಾ ಸಂಘದ ಅಧ್ಯಕ್ಷ ಬಳ್ಳೂರು ಬಾಬು, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ಯಾಮಲಾ, ಸಮರ್ಥ ಯುವಜನ ಸೇವಾ ಸಂಸ್ಥೆಯ ಉಪಾಧ್ಯಕ್ಷ ಮಹೇಶ್ ಊಗಿನಹಳ್ಳಿ, ಸಿಆರ್ಪಿ ಚಂದ್ರಪ್ಪ, ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನಾರಾಧ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>