<p><strong>ಗುಡಗಾಂವ್ (ಪಿಟಿಐ):</strong> ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಸಂತ ಸಾಥೆ (86) ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾದರು.<br /> <br /> ಗುರುವಾರ ಸಂಜೆ ಸಾಥೆ ಅವರಿಗೆ ಎದೆನೋವು ಕಾಣಿಸಿಕೊಂಡ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ದಿನ ರಾತ್ರಿ 7.50ಕ್ಕೆ ಅವರು ಮೃತಪಟ್ಟರು.<br /> <br /> ವೃತ್ತಿಯಿಂದ ವಕೀಲರಾಗಿದ್ದ ಸಾಥೆ, ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಸಂಪುಟದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವರಾಗಿದ್ದರು. ಅವರು ಹಲವು ಖಾತೆಗಳನ್ನು ನಿರ್ವಹಿಸಿದ್ದರೂ, 1982ರ ಏಷ್ಯನ್ ಕ್ರೀಡಾ ಕೂಟದಲ್ಲಿ ಕಲರ್ ಟಿವಿ ಪರಿಚಯಿಸಿ ಹೆಚ್ಚು ಜನಪ್ರಿಯರಾದರು. <br /> <br /> ರಿಚರ್ಡ್ ಅಟೆನ್ಬರೊ ಅವರ `ಮಹಾತ್ಮ ಗಾಂಧಿ~ ಚಲನಚಿತ್ರ ಪ್ರದರ್ಶನಕ್ಕೆ ಹಸಿರು ನಿಶಾನೆ ತೋರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.<br /> <br /> ಇಂದಿರಾ ಅವರಿಗೆ ಆಪ್ತರಾಗಿದ್ದ ಅವರು, 1977-79ರ ಅವಧಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಉಪನಾಯಕರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು, ಕ್ವಿಟ್ ಇಂಡಿಯಾ ಚಳವಳಿಯಲ್ಲಿ ನಾಗಪುರ ಜಿಲ್ಲಾ ನ್ಯಾಯಾಲಯದಲ್ಲಿ ಬ್ರಿಟಿಷ್ ಧ್ವಜ ತೆಗೆದುಹಾಕಿ, ತ್ರಿವರ್ಣಧ್ವಜ ಹಾರಿಸಿದ್ದರು. <br /> <br /> ಮಹಾರಾಷ್ಟ್ರದ ನಾಸಿಕ್ನಲ್ಲಿ 1925ರ ಮಾರ್ಚ್ 5ರಂದು ಜನಿಸಿದ ಸಾಥೆ, ತಮ್ಮ ಕೊನೆಗಾಲದಲ್ಲಿ ಗುಡಗಾಂವ್ನಲ್ಲಿ ನೆಲೆಸಿದ್ದರು.<br /> <br /> ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕಾನೂನು ಪದವಿಯನ್ನೂ ಪಡೆದಿದ್ದರು. <br /> <br /> ಏಳು ಪುಸ್ತಕಗಳನ್ನು ರಚಿಸಿದ್ದ ಅವರು, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.<br /> <br /> <strong>ಸಂತಾಪ: </strong>ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತಿತರರು ಸಾಥೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.<br /> <br /> <strong>ದೇಹ ದಾನ (ನಾಗಪುರ ವರದಿ): </strong>ಸಾಥೆಯವರ ಇಚ್ಛೆಯಂತೆ ಅವರ ಮೃತದೇಹವನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ)ಗೆ ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಗಾಂವ್ (ಪಿಟಿಐ):</strong> ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಸಂತ ಸಾಥೆ (86) ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾದರು.<br /> <br /> ಗುರುವಾರ ಸಂಜೆ ಸಾಥೆ ಅವರಿಗೆ ಎದೆನೋವು ಕಾಣಿಸಿಕೊಂಡ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ದಿನ ರಾತ್ರಿ 7.50ಕ್ಕೆ ಅವರು ಮೃತಪಟ್ಟರು.<br /> <br /> ವೃತ್ತಿಯಿಂದ ವಕೀಲರಾಗಿದ್ದ ಸಾಥೆ, ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಸಂಪುಟದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವರಾಗಿದ್ದರು. ಅವರು ಹಲವು ಖಾತೆಗಳನ್ನು ನಿರ್ವಹಿಸಿದ್ದರೂ, 1982ರ ಏಷ್ಯನ್ ಕ್ರೀಡಾ ಕೂಟದಲ್ಲಿ ಕಲರ್ ಟಿವಿ ಪರಿಚಯಿಸಿ ಹೆಚ್ಚು ಜನಪ್ರಿಯರಾದರು. <br /> <br /> ರಿಚರ್ಡ್ ಅಟೆನ್ಬರೊ ಅವರ `ಮಹಾತ್ಮ ಗಾಂಧಿ~ ಚಲನಚಿತ್ರ ಪ್ರದರ್ಶನಕ್ಕೆ ಹಸಿರು ನಿಶಾನೆ ತೋರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.<br /> <br /> ಇಂದಿರಾ ಅವರಿಗೆ ಆಪ್ತರಾಗಿದ್ದ ಅವರು, 1977-79ರ ಅವಧಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಉಪನಾಯಕರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು, ಕ್ವಿಟ್ ಇಂಡಿಯಾ ಚಳವಳಿಯಲ್ಲಿ ನಾಗಪುರ ಜಿಲ್ಲಾ ನ್ಯಾಯಾಲಯದಲ್ಲಿ ಬ್ರಿಟಿಷ್ ಧ್ವಜ ತೆಗೆದುಹಾಕಿ, ತ್ರಿವರ್ಣಧ್ವಜ ಹಾರಿಸಿದ್ದರು. <br /> <br /> ಮಹಾರಾಷ್ಟ್ರದ ನಾಸಿಕ್ನಲ್ಲಿ 1925ರ ಮಾರ್ಚ್ 5ರಂದು ಜನಿಸಿದ ಸಾಥೆ, ತಮ್ಮ ಕೊನೆಗಾಲದಲ್ಲಿ ಗುಡಗಾಂವ್ನಲ್ಲಿ ನೆಲೆಸಿದ್ದರು.<br /> <br /> ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕಾನೂನು ಪದವಿಯನ್ನೂ ಪಡೆದಿದ್ದರು. <br /> <br /> ಏಳು ಪುಸ್ತಕಗಳನ್ನು ರಚಿಸಿದ್ದ ಅವರು, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.<br /> <br /> <strong>ಸಂತಾಪ: </strong>ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತಿತರರು ಸಾಥೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.<br /> <br /> <strong>ದೇಹ ದಾನ (ನಾಗಪುರ ವರದಿ): </strong>ಸಾಥೆಯವರ ಇಚ್ಛೆಯಂತೆ ಅವರ ಮೃತದೇಹವನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ)ಗೆ ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>