<p><strong>ಮಡಿಕೇರಿ: </strong>ಮಾಜಿ ಯೋಧರಿಗೆ ನಿವೇಶನ ಮಂಜೂರಾತಿ ಕುರಿತಂತೆ ಆಕಾಂಕ್ಷಿಗಳೇ ನೇರವಾಗಿ ಬಂದು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಂಗ್ರಹಿಸುವಂತೆ ಯಾವೊಂದು ಸಂಘಟನೆಗೆ ಅಧಿಕಾರ ನೀಡಿಲ್ಲ ಎಂದು ತಹಶೀಲ್ದಾರ್ ಬಾಬು ರವೀಂದ್ರನಾಥ್ ಪಟೇಲ್ ತಿಳಿಸಿದ್ದಾರೆ.<br /> <br /> ಅರ್ಜಿ ಸಲ್ಲಿಸುವ ಸಂಬಂಧ ಕೆಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. <br /> ಅರ್ಜಿದಾರರು ಗುಂಪಿನಲ್ಲಿ ಬರುವುದರಿಂದ ಕಚೇರಿಯ ದಿನ ನಿತ್ಯದ ಕಚೇರಿ ಕೆಲಸಕ್ಕೆ ತೊಂದರೆಯಾಗುತ್ತಿದೆ.<br /> <br /> ಆದ್ದರಿಂದ ಏ.21 ರ ನಂತರ ಅರ್ಜಿ ಪಡೆಯಲು ತಾಲ್ಲೂಕು ಕಚೇರಿಯ ಸಿಬ್ಬಂದಿಗಳನ್ನು ನಿಗಧಿಗೊಳಿಸಲಾಗಿದೆ. ಈ ಬಗ್ಗೆ ಅರ್ಜಿ ಸ್ವೀಕರಿಸಲು ಯಾವುದೇ ಸಂಘ ಸಂಸ್ಥೆಗೆ ಜಿಲ್ಲಾ ಮಟ್ಟದಲ್ಲಿ ಅಧಿಕಾರ ನೀಡಿರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. <br /> <br /> ಮಾಜಿ ಯೋಧರು, ಅರ್ಜಿದಾರರು ಅವರ ಅಹವಾಲುಗಳನ್ನು ಕಚೇರಿಯ ವೇಳೆಯಲ್ಲಿ ಬಂದು ನೀಡಬಹುದು. ಅವರ ಕೋರಿಕೆಯಂತೆ ಪರಿಶೀಲಿಸಿ ತೆಗೆದುಕೊಂಡ ಕ್ರಮದ ಬಗ್ಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದು. ಇದರ ಹೆಸರಿನಲ್ಲಿ ಸಂಬಂಧಪಡದವರು ಯಾವುದೇ ರೀತಿಯಲ್ಲಿ ಸರ್ಕಾರಿ ಯಂತ್ರ ದುರುಪಯೋಗಪಡಿಸಿಕೊಂಡಲ್ಲಿ ಶಿಕ್ಷೆಗೊಳಪಡುತ್ತಾರೆಂದು ಈ ಮೂಲಕ ಎಚ್ಚರಿಕೆ ನೀಡಲಾಗಿದೆ.<br /> <br /> ಕರ್ಣಂಗೇರಿ ಗ್ರಾಮದಲ್ಲಿ ನಿವೇಶನ ಮಂಜೂರಾತಿಗೆ ಕೋರಿ ಸುಮಾರು 2 ಸಾವಿರ ಅರ್ಜಿಗಳಿವೆಯೆಂದು ಮಾಜಿ ಯೋಧರು ಕೊಡಗು ಪ್ರಗತಿಪರ ಗೌಡ ಸಂಘದ ಪದಾಧಿಕಾರಿಗಳೊಂದಿಗೆ ಏ.13 ರಂದು ಕೊಡಗು ಜಿಲ್ಲಾಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಲು ತೆರಳ್ದ್ದಿದರು. ಆಗ ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮ ವಹಿಸುವಂತೆ ಮಡಿಕೇರಿ ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಮಾಜಿ ಯೋಧರಿಗೆ ನಿವೇಶನ ಮಂಜೂರಾತಿ ಕುರಿತಂತೆ ಆಕಾಂಕ್ಷಿಗಳೇ ನೇರವಾಗಿ ಬಂದು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಂಗ್ರಹಿಸುವಂತೆ ಯಾವೊಂದು ಸಂಘಟನೆಗೆ ಅಧಿಕಾರ ನೀಡಿಲ್ಲ ಎಂದು ತಹಶೀಲ್ದಾರ್ ಬಾಬು ರವೀಂದ್ರನಾಥ್ ಪಟೇಲ್ ತಿಳಿಸಿದ್ದಾರೆ.<br /> <br /> ಅರ್ಜಿ ಸಲ್ಲಿಸುವ ಸಂಬಂಧ ಕೆಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. <br /> ಅರ್ಜಿದಾರರು ಗುಂಪಿನಲ್ಲಿ ಬರುವುದರಿಂದ ಕಚೇರಿಯ ದಿನ ನಿತ್ಯದ ಕಚೇರಿ ಕೆಲಸಕ್ಕೆ ತೊಂದರೆಯಾಗುತ್ತಿದೆ.<br /> <br /> ಆದ್ದರಿಂದ ಏ.21 ರ ನಂತರ ಅರ್ಜಿ ಪಡೆಯಲು ತಾಲ್ಲೂಕು ಕಚೇರಿಯ ಸಿಬ್ಬಂದಿಗಳನ್ನು ನಿಗಧಿಗೊಳಿಸಲಾಗಿದೆ. ಈ ಬಗ್ಗೆ ಅರ್ಜಿ ಸ್ವೀಕರಿಸಲು ಯಾವುದೇ ಸಂಘ ಸಂಸ್ಥೆಗೆ ಜಿಲ್ಲಾ ಮಟ್ಟದಲ್ಲಿ ಅಧಿಕಾರ ನೀಡಿರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. <br /> <br /> ಮಾಜಿ ಯೋಧರು, ಅರ್ಜಿದಾರರು ಅವರ ಅಹವಾಲುಗಳನ್ನು ಕಚೇರಿಯ ವೇಳೆಯಲ್ಲಿ ಬಂದು ನೀಡಬಹುದು. ಅವರ ಕೋರಿಕೆಯಂತೆ ಪರಿಶೀಲಿಸಿ ತೆಗೆದುಕೊಂಡ ಕ್ರಮದ ಬಗ್ಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದು. ಇದರ ಹೆಸರಿನಲ್ಲಿ ಸಂಬಂಧಪಡದವರು ಯಾವುದೇ ರೀತಿಯಲ್ಲಿ ಸರ್ಕಾರಿ ಯಂತ್ರ ದುರುಪಯೋಗಪಡಿಸಿಕೊಂಡಲ್ಲಿ ಶಿಕ್ಷೆಗೊಳಪಡುತ್ತಾರೆಂದು ಈ ಮೂಲಕ ಎಚ್ಚರಿಕೆ ನೀಡಲಾಗಿದೆ.<br /> <br /> ಕರ್ಣಂಗೇರಿ ಗ್ರಾಮದಲ್ಲಿ ನಿವೇಶನ ಮಂಜೂರಾತಿಗೆ ಕೋರಿ ಸುಮಾರು 2 ಸಾವಿರ ಅರ್ಜಿಗಳಿವೆಯೆಂದು ಮಾಜಿ ಯೋಧರು ಕೊಡಗು ಪ್ರಗತಿಪರ ಗೌಡ ಸಂಘದ ಪದಾಧಿಕಾರಿಗಳೊಂದಿಗೆ ಏ.13 ರಂದು ಕೊಡಗು ಜಿಲ್ಲಾಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಲು ತೆರಳ್ದ್ದಿದರು. ಆಗ ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮ ವಹಿಸುವಂತೆ ಮಡಿಕೇರಿ ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>