<p><strong>ನವದೆಹಲಿ (ಪಿಟಿಐ)</strong>: ಕರ್ನಾಟಕದ ಮಾಜಿ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಖುರ್ಷಿದ್ ಆಲಂಖಾನ್ ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು.<br /> <br /> 95 ವರ್ಷ ವಯಸ್ಸಿನ ಖುರ್ಷಿದ್ ಅವರು ಜ್ವರ ಹಾಗೂ ಹೃದಯ ಸೋಂಕಿಗೆ ಒಳಗಾಗಿ ಕೆಲಕಾಲದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಗಿನ ಜಾವ 3 ಗಂಟೆಯಲ್ಲಿ ಅವರು ಸಾವನ್ನಪ್ಪಿದರು ಎಂದು ವೈದ್ಯರು ತಿಳಿಸಿದ್ದಾರೆ.<br /> <br /> ಮೂಲತ: ಉತ್ತರಪ್ರದೇಶದ ಫಾರೂಕಾಬಾದ್ ಜಿಲ್ಲೆಯವರಾದ ಖಾನ್ ಲೋಕಸಭಾ ಸದಸ್ಯರಾಗಿ 15 ವರ್ಷಕ್ಕೂಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ರಾಜ್ಯಸಭಾ ಸದಸ್ಯರಾಗಿದ್ದ ಇವರು ದಿವಂಗತ ಇಂದಿರಾಗಾಂಧಿ ಹಾಗೂ ರಾಜೀವ್ಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.<br /> <br /> ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯವನ್ನು ಸ್ವತಂತ್ರ ವಿಶ್ವವಿದ್ಯಾನಿಲಯವನ್ನಾಗಿಸಲು ಸಂಸತ್ತಿನಲ್ಲಿ ಕಾಯಿದೆ ರೂಪಿಸಲು ಇವರು ಬಹುವಾಗಿ ಶ್ರಮಿಸಿದ್ದರು. ನಂತರ ಇದರ ಕುಲಪತಿಯಾಗಿಯೂ ಕಾರ್ಯನಿರ್ವಹಿಸಿದ್ದರು.<br /> <br /> ನಂತರ ಗೋವಾ (1989-91), ಹಾಗೂ ಕರ್ನಾಟಕ (1991-99) ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತರಾಗಿದ್ದರು.<br /> <br /> ಖುರ್ಷಿದ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ಮನಮೋಹನಸಿಂಗ್ ಅವರು ದೇಶವು ಒಬ್ಬ ಒಳ್ಳೆಯ ಪ್ರಾಮಾಣಿಕ ದೇಶ ಸೇವಕನನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಇದೊಂದು ತುಂಬಲಾರದ ನಷ್ಟ ಎಂದು ಅವರು ಶೋಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ)</strong>: ಕರ್ನಾಟಕದ ಮಾಜಿ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಖುರ್ಷಿದ್ ಆಲಂಖಾನ್ ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು.<br /> <br /> 95 ವರ್ಷ ವಯಸ್ಸಿನ ಖುರ್ಷಿದ್ ಅವರು ಜ್ವರ ಹಾಗೂ ಹೃದಯ ಸೋಂಕಿಗೆ ಒಳಗಾಗಿ ಕೆಲಕಾಲದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಗಿನ ಜಾವ 3 ಗಂಟೆಯಲ್ಲಿ ಅವರು ಸಾವನ್ನಪ್ಪಿದರು ಎಂದು ವೈದ್ಯರು ತಿಳಿಸಿದ್ದಾರೆ.<br /> <br /> ಮೂಲತ: ಉತ್ತರಪ್ರದೇಶದ ಫಾರೂಕಾಬಾದ್ ಜಿಲ್ಲೆಯವರಾದ ಖಾನ್ ಲೋಕಸಭಾ ಸದಸ್ಯರಾಗಿ 15 ವರ್ಷಕ್ಕೂಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ರಾಜ್ಯಸಭಾ ಸದಸ್ಯರಾಗಿದ್ದ ಇವರು ದಿವಂಗತ ಇಂದಿರಾಗಾಂಧಿ ಹಾಗೂ ರಾಜೀವ್ಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.<br /> <br /> ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯವನ್ನು ಸ್ವತಂತ್ರ ವಿಶ್ವವಿದ್ಯಾನಿಲಯವನ್ನಾಗಿಸಲು ಸಂಸತ್ತಿನಲ್ಲಿ ಕಾಯಿದೆ ರೂಪಿಸಲು ಇವರು ಬಹುವಾಗಿ ಶ್ರಮಿಸಿದ್ದರು. ನಂತರ ಇದರ ಕುಲಪತಿಯಾಗಿಯೂ ಕಾರ್ಯನಿರ್ವಹಿಸಿದ್ದರು.<br /> <br /> ನಂತರ ಗೋವಾ (1989-91), ಹಾಗೂ ಕರ್ನಾಟಕ (1991-99) ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತರಾಗಿದ್ದರು.<br /> <br /> ಖುರ್ಷಿದ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ಮನಮೋಹನಸಿಂಗ್ ಅವರು ದೇಶವು ಒಬ್ಬ ಒಳ್ಳೆಯ ಪ್ರಾಮಾಣಿಕ ದೇಶ ಸೇವಕನನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಇದೊಂದು ತುಂಬಲಾರದ ನಷ್ಟ ಎಂದು ಅವರು ಶೋಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>