<p><strong>ಮೂಲ್ಕಿ:</strong> ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಶಾಸಕ ಸಂಜೀವನಾಥ ಐಕಳ (97) ಮೂಲ್ಕಿ ಕಾರ್ನಾಡು ಮರ್ಕುಂಜದ ಸ್ವಗೃಹ ‘ಸಜನಿ’ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬಳು ಪುತ್ರಿ ಇದ್ದಾರೆ. <br /> <br /> 1936ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡು ಸದಾಶಿವರಾಯ ಅವರೊಂದಿಗೆ ಸೇರಿಕೊಂಡು ಮಹಾತ್ಮ ಗಾಂಧೀಜಿ ಅವರನ್ನು ಕರೆತರುವಲ್ಲಿ ಶ್ರಮಿಸಿದ್ದ ಐಕಳ ಅವರು ಮೂಲ್ಕಿಯ ಕಾರ್ನಾಡು ಗಾಂಧಿ ಮೈದಾನದಲ್ಲಿ ಗಾಂಧೀಜಿ ಮಾಡಿದ ಭಾಷಣದಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು.<br /> <br /> ಸಂಜೀವನಾಥರು ಮೂಲ್ಕಿ ಸೀಮೆಯ ಐಕಳಬಾವ ಮನೆತನದಲ್ಲಿ 1921ರಲ್ಲಿ ಜನಿಸಿದರು.1940ರಲ್ಲಿ ಬಳ್ಳಾರಿಗೆ ತೆರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡು ಬಂಧನಕ್ಕೂ ಒಳಗಾಗಿದ್ದರು. ನಂತರ ಅವರು ಪಂಡಿತ ತಾರಾನಾಥ ಅವರಲ್ಲಿ ಅಯುರ್ವೇದ ಅಧ್ಯಯನ ನಡೆಸಿ ವೃತ್ತಿ ಪ್ರಾರಂಭಿಸಿದ್ದರು.<br /> <br /> ಜಯಪ್ರಕಾಶ ನಾರಾಯಣ ಅವರ ಪ್ರಜಾ ಸೋಷಲಿಷ್ಟ್ ಪಕ್ಷವನ್ನು ಸೇರಿದ ಐಕಳ ಅವರು 1961ರಲ್ಲಿ ಪಕ್ಷವನ್ನು ಪ್ರತಿನಿಧಿಸಿ ಮೂಲ್ಕಿ– ಮೂಡುಬಿದಿರೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ನಂತರ ಯಾವುದೇ ಪಕ್ಷಕ್ಕೆ ಸೇರದೆ ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಕಟವರ್ತಿಯಾಗಿದ್ದರು.<br /> <br /> ಪುನರೂರು ಗ್ರಾಮದಲ್ಲಿ 1953ರಲ್ಲಿ ಭಾರತಮಾತ ವಿದ್ಯಾಮಂದಿರ ಸ್ಥಾಪಿಸಿ ಅಲ್ಲಿ ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವ ಕಾಯಕವನ್ನು ತಮ್ಮ ಇಳಿ ವಯಸ್ಸಿನವರೆಗೂ ನಡೆಸಿಕೊಂಡು ಬಂದಿದ್ದಾರೆ. ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು.<br /> <br /> <strong>ಇಂದು ಅಂತ್ಯಕ್ರಿಯೆ</strong>: ಕಾರ್ನಾಡು ಮರ್ಕುಂಜದ ಮನೆ ‘ಸಜನಿ’ಯಿಂದ ಶುಕ್ರವಾರ ಬೆಳಿಗ್ಗೆ 9ಕ್ಕೆ ಅಂತಿಮ ಯಾತ್ರೆ ಹೊರಟು ಮೂಲ್ಕಿ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಶಾಸಕ ಸಂಜೀವನಾಥ ಐಕಳ (97) ಮೂಲ್ಕಿ ಕಾರ್ನಾಡು ಮರ್ಕುಂಜದ ಸ್ವಗೃಹ ‘ಸಜನಿ’ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬಳು ಪುತ್ರಿ ಇದ್ದಾರೆ. <br /> <br /> 1936ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡು ಸದಾಶಿವರಾಯ ಅವರೊಂದಿಗೆ ಸೇರಿಕೊಂಡು ಮಹಾತ್ಮ ಗಾಂಧೀಜಿ ಅವರನ್ನು ಕರೆತರುವಲ್ಲಿ ಶ್ರಮಿಸಿದ್ದ ಐಕಳ ಅವರು ಮೂಲ್ಕಿಯ ಕಾರ್ನಾಡು ಗಾಂಧಿ ಮೈದಾನದಲ್ಲಿ ಗಾಂಧೀಜಿ ಮಾಡಿದ ಭಾಷಣದಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು.<br /> <br /> ಸಂಜೀವನಾಥರು ಮೂಲ್ಕಿ ಸೀಮೆಯ ಐಕಳಬಾವ ಮನೆತನದಲ್ಲಿ 1921ರಲ್ಲಿ ಜನಿಸಿದರು.1940ರಲ್ಲಿ ಬಳ್ಳಾರಿಗೆ ತೆರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡು ಬಂಧನಕ್ಕೂ ಒಳಗಾಗಿದ್ದರು. ನಂತರ ಅವರು ಪಂಡಿತ ತಾರಾನಾಥ ಅವರಲ್ಲಿ ಅಯುರ್ವೇದ ಅಧ್ಯಯನ ನಡೆಸಿ ವೃತ್ತಿ ಪ್ರಾರಂಭಿಸಿದ್ದರು.<br /> <br /> ಜಯಪ್ರಕಾಶ ನಾರಾಯಣ ಅವರ ಪ್ರಜಾ ಸೋಷಲಿಷ್ಟ್ ಪಕ್ಷವನ್ನು ಸೇರಿದ ಐಕಳ ಅವರು 1961ರಲ್ಲಿ ಪಕ್ಷವನ್ನು ಪ್ರತಿನಿಧಿಸಿ ಮೂಲ್ಕಿ– ಮೂಡುಬಿದಿರೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ನಂತರ ಯಾವುದೇ ಪಕ್ಷಕ್ಕೆ ಸೇರದೆ ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಕಟವರ್ತಿಯಾಗಿದ್ದರು.<br /> <br /> ಪುನರೂರು ಗ್ರಾಮದಲ್ಲಿ 1953ರಲ್ಲಿ ಭಾರತಮಾತ ವಿದ್ಯಾಮಂದಿರ ಸ್ಥಾಪಿಸಿ ಅಲ್ಲಿ ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವ ಕಾಯಕವನ್ನು ತಮ್ಮ ಇಳಿ ವಯಸ್ಸಿನವರೆಗೂ ನಡೆಸಿಕೊಂಡು ಬಂದಿದ್ದಾರೆ. ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು.<br /> <br /> <strong>ಇಂದು ಅಂತ್ಯಕ್ರಿಯೆ</strong>: ಕಾರ್ನಾಡು ಮರ್ಕುಂಜದ ಮನೆ ‘ಸಜನಿ’ಯಿಂದ ಶುಕ್ರವಾರ ಬೆಳಿಗ್ಗೆ 9ಕ್ಕೆ ಅಂತಿಮ ಯಾತ್ರೆ ಹೊರಟು ಮೂಲ್ಕಿ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>