<p>ಹೈದರಾಬಾದ್: ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ್ ರೆಡ್ಡಿ ಅವರನ್ನು ಇನ್ನೂ ಏಳು ದಿನಗಳ ಕಾಲ ತನ್ನ ವಶದಲ್ಲಿಯೇ ಇಟ್ಟುಕೊಳ್ಳಲು ಸಿಬಿಐ ಸಿದ್ಧತೆ ನಡೆಸಿದೆ.<br /> <br /> ಜನಾರ್ದನ ರೆಡ್ಡಿ ಅವರ ನಿಕಟವರ್ತಿಗಳ ಲಾಕರ್ನಿಂದ ವಶಪಡಿಸಿಕೊಂಡಿರುವ ನಗದು ಮತ್ತು ದಾಖಲೆಗಳನ್ನು ಮುಂದಿಟ್ಟುಕೊಂಡು ಸಿಬಿಐ ಅಧಿಕಾರಿಗಳು ಈ ಸಿದ್ಧತೆ ನಡೆಸುತ್ತಿದ್ದಾರೆ.<br /> <br /> ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಿಬಿಐ ಅಧಿಕಾರಿಗಳು ಈ ಇಬ್ಬರನ್ನೂ ನಾಂಪಳ್ಳಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ. ಈ ಸಂದರ್ಭದಲ್ಲಿ ಕಸ್ಟಡಿ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಮನವಿ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.<br /> <br /> ಸೋಮವಾರ ಅಥವಾ ಮಂಗಳವಾರ ಜನಾರ್ದನ ರೆಡ್ಡಿ ಅವರನ್ನು ಬಳ್ಳಾರಿಗೆ ಕರೆದೊಯ್ದು ಲಾಕರ್ಗಳನ್ನು ತೆರೆಯುವ ಉದ್ದೇಶವಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಶ್ರೀನಿವಾಸ್ ರೆಡ್ಡಿ ಅವರು ತನಿಖೆಗೆ ಸಹಕರಿಸುತ್ತಿದ್ದು, ಆದರೆ ಜನಾರ್ದನ ರೆಡ್ಡಿ ಅವರು ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.<br /> <br /> ಆಂಧ್ರದಲ್ಲಿ ಹೂಡಿರುವ ಬಂಡವಾಳಕ್ಕೆ ಸಂಬಂಧಿಸಿದ ಕಾಗದಪತ್ರಗಳ ಮೇಲಿನ ಸಹಿ ಬಗ್ಗೆ ಕೇಳಿದಾಗ, `ಇದು ನನ್ನ ಸಹಿ ಹೌದೆ~ ಎಂದು ನಮಗೇ ಮರು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಇಬ್ಬರ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವುದರ ಜತೆಗೆ ಇಬ್ಬರನ್ನೂ ಪಾಲಿಗ್ರಾಫ್ ಮತ್ತು ನಾರ್ಕೊ ವಿಶ್ಲೇಷಣೆಗೆ ಒಳಪಡಿಸಲು ಅನುಮತಿ ಕೋರಲಾಗುತ್ತದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.<br /> <br /> ಬಳ್ಳಾರಿಯ ಆಕ್ಸಿಸ್ ಬ್ಯಾಂಕಿನ 350 ಲಾಕರ್ಗಳ ಪೈಕಿ 200 ಲಾಕರ್ಗಳನ್ನು ಜನಾರ್ದನ ರೆಡ್ಡಿ ಮತ್ತು ಅವರ ಆಪ್ತರೇ ಹೊಂದಿದ್ದಾರೆ.<br /> <br /> ಆರು ಲಾಕರ್ಗಳ ತಪಾಸಣೆ ಮಾಡಲಾಗಿದ್ದು, ಅವುಗಳಲ್ಲಿ 15 ಕೆ.ಜಿ ಚಿನ್ನದ ಬಿಸ್ಕತ್ತಗಳು, ಪ್ಲಾಟಿನಂ ಆಭರಣಗಳು ಮತ್ತು 3 ಕೋಟಿ ನಗದು ದೊರೆತಿದೆ. ಬಹುತೇಕ ಚಿನ್ನವನ್ನು ದುಬೈನಿಂದ ಆಮದು ಮಾಡಿಕೊಳ್ಳಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್: ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ್ ರೆಡ್ಡಿ ಅವರನ್ನು ಇನ್ನೂ ಏಳು ದಿನಗಳ ಕಾಲ ತನ್ನ ವಶದಲ್ಲಿಯೇ ಇಟ್ಟುಕೊಳ್ಳಲು ಸಿಬಿಐ ಸಿದ್ಧತೆ ನಡೆಸಿದೆ.<br /> <br /> ಜನಾರ್ದನ ರೆಡ್ಡಿ ಅವರ ನಿಕಟವರ್ತಿಗಳ ಲಾಕರ್ನಿಂದ ವಶಪಡಿಸಿಕೊಂಡಿರುವ ನಗದು ಮತ್ತು ದಾಖಲೆಗಳನ್ನು ಮುಂದಿಟ್ಟುಕೊಂಡು ಸಿಬಿಐ ಅಧಿಕಾರಿಗಳು ಈ ಸಿದ್ಧತೆ ನಡೆಸುತ್ತಿದ್ದಾರೆ.<br /> <br /> ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಿಬಿಐ ಅಧಿಕಾರಿಗಳು ಈ ಇಬ್ಬರನ್ನೂ ನಾಂಪಳ್ಳಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ. ಈ ಸಂದರ್ಭದಲ್ಲಿ ಕಸ್ಟಡಿ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಮನವಿ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.<br /> <br /> ಸೋಮವಾರ ಅಥವಾ ಮಂಗಳವಾರ ಜನಾರ್ದನ ರೆಡ್ಡಿ ಅವರನ್ನು ಬಳ್ಳಾರಿಗೆ ಕರೆದೊಯ್ದು ಲಾಕರ್ಗಳನ್ನು ತೆರೆಯುವ ಉದ್ದೇಶವಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಶ್ರೀನಿವಾಸ್ ರೆಡ್ಡಿ ಅವರು ತನಿಖೆಗೆ ಸಹಕರಿಸುತ್ತಿದ್ದು, ಆದರೆ ಜನಾರ್ದನ ರೆಡ್ಡಿ ಅವರು ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.<br /> <br /> ಆಂಧ್ರದಲ್ಲಿ ಹೂಡಿರುವ ಬಂಡವಾಳಕ್ಕೆ ಸಂಬಂಧಿಸಿದ ಕಾಗದಪತ್ರಗಳ ಮೇಲಿನ ಸಹಿ ಬಗ್ಗೆ ಕೇಳಿದಾಗ, `ಇದು ನನ್ನ ಸಹಿ ಹೌದೆ~ ಎಂದು ನಮಗೇ ಮರು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಇಬ್ಬರ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವುದರ ಜತೆಗೆ ಇಬ್ಬರನ್ನೂ ಪಾಲಿಗ್ರಾಫ್ ಮತ್ತು ನಾರ್ಕೊ ವಿಶ್ಲೇಷಣೆಗೆ ಒಳಪಡಿಸಲು ಅನುಮತಿ ಕೋರಲಾಗುತ್ತದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.<br /> <br /> ಬಳ್ಳಾರಿಯ ಆಕ್ಸಿಸ್ ಬ್ಯಾಂಕಿನ 350 ಲಾಕರ್ಗಳ ಪೈಕಿ 200 ಲಾಕರ್ಗಳನ್ನು ಜನಾರ್ದನ ರೆಡ್ಡಿ ಮತ್ತು ಅವರ ಆಪ್ತರೇ ಹೊಂದಿದ್ದಾರೆ.<br /> <br /> ಆರು ಲಾಕರ್ಗಳ ತಪಾಸಣೆ ಮಾಡಲಾಗಿದ್ದು, ಅವುಗಳಲ್ಲಿ 15 ಕೆ.ಜಿ ಚಿನ್ನದ ಬಿಸ್ಕತ್ತಗಳು, ಪ್ಲಾಟಿನಂ ಆಭರಣಗಳು ಮತ್ತು 3 ಕೋಟಿ ನಗದು ದೊರೆತಿದೆ. ಬಹುತೇಕ ಚಿನ್ನವನ್ನು ದುಬೈನಿಂದ ಆಮದು ಮಾಡಿಕೊಳ್ಳಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>