<p><strong>ಬಾಗಲಕೋಟೆ:</strong> ಮಾರ್ಚ್ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು. ಬೀಳಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ನೀರಾವರಿ ಮತ್ತು ಕೃಷಿಗೆ ಆದ್ಯತೆ ನೀಡಲಾಗುತ್ತದೆ ಎಂದರು.<br /> <br /> ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯನ್ನು ಹಂತಹಂತವಾಗಿ ಆರೇಳು ವರ್ಷದಲ್ಲಿ ಪೂರ್ಣ ಗೊಳಿಸಲಾಗುವುದು. ಯೋಜನೆ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದ ಅವರು, ಕೃಷ್ಣಾ ನ್ಯಾಯಮಂಡಳಿ ತೀರ್ಪಿಗೆ ಭಂಗ ಬಾರದಂತೆ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.<br /> <br /> <strong>ಕಾದು ಕುಳಿತ ಸಿ.ಎಂ: </strong>ಬೀಳಗಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಆಗಮಿಸಿದ್ದ ಸದಾನಂದಗೌಡರು, ಯಡಿಯೂರಪ್ಪ ಅವರ ಆಗಮನಕ್ಕಾಗಿ ಒಂದು ಗಂಟೆ ನಿರಾಣಿ ಕಾಲೇಜಿನಲ್ಲಿ ಕಾದು ಕುಳಿತ ಪ್ರಸಂಗ ನಡೆಯಿತು.<br /> <br /> ಅಲ್ಲದೇ ಮುಖ್ಯಮಂತ್ರಿ ಸ್ವಾಗತಕ್ಕೆ ಜಿಲ್ಲೆಯ ಇಬ್ಬರು ಸಚಿವರೂ ಗೈರು ಹಾಜರಾಗಿದ್ದರು. ಒಂದು ಗಂಟೆ ತಡವಾಗಿ ಬಂದ ಯಡಿಯೂರಪ್ಪ ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ ನಿರಾಣಿ ಆಗಮಿಸಿದರು.<br /> <br /> <strong>ಯಡಿಯೂರಪ್ಪ ವ್ಯಂಗ್ಯ</strong>:`ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು~ ಎಂಬ ಬಿ.ಬಿ. ಶಿವಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, `ಶಿವಪ್ಪ ಒಳ್ಳೆಯ ಸಲಹೆ ನೀಡಿದ್ದಾರೆ. ಅವರ ಸಲಹೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ಶೀಘ್ರವಾಗಿ ಪರಿಶೀಲಿಸಲಿ~ ಎಂದು ವ್ಯಂಗ್ಯವಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮಾರ್ಚ್ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು. ಬೀಳಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ನೀರಾವರಿ ಮತ್ತು ಕೃಷಿಗೆ ಆದ್ಯತೆ ನೀಡಲಾಗುತ್ತದೆ ಎಂದರು.<br /> <br /> ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯನ್ನು ಹಂತಹಂತವಾಗಿ ಆರೇಳು ವರ್ಷದಲ್ಲಿ ಪೂರ್ಣ ಗೊಳಿಸಲಾಗುವುದು. ಯೋಜನೆ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದ ಅವರು, ಕೃಷ್ಣಾ ನ್ಯಾಯಮಂಡಳಿ ತೀರ್ಪಿಗೆ ಭಂಗ ಬಾರದಂತೆ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.<br /> <br /> <strong>ಕಾದು ಕುಳಿತ ಸಿ.ಎಂ: </strong>ಬೀಳಗಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಆಗಮಿಸಿದ್ದ ಸದಾನಂದಗೌಡರು, ಯಡಿಯೂರಪ್ಪ ಅವರ ಆಗಮನಕ್ಕಾಗಿ ಒಂದು ಗಂಟೆ ನಿರಾಣಿ ಕಾಲೇಜಿನಲ್ಲಿ ಕಾದು ಕುಳಿತ ಪ್ರಸಂಗ ನಡೆಯಿತು.<br /> <br /> ಅಲ್ಲದೇ ಮುಖ್ಯಮಂತ್ರಿ ಸ್ವಾಗತಕ್ಕೆ ಜಿಲ್ಲೆಯ ಇಬ್ಬರು ಸಚಿವರೂ ಗೈರು ಹಾಜರಾಗಿದ್ದರು. ಒಂದು ಗಂಟೆ ತಡವಾಗಿ ಬಂದ ಯಡಿಯೂರಪ್ಪ ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ ನಿರಾಣಿ ಆಗಮಿಸಿದರು.<br /> <br /> <strong>ಯಡಿಯೂರಪ್ಪ ವ್ಯಂಗ್ಯ</strong>:`ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು~ ಎಂಬ ಬಿ.ಬಿ. ಶಿವಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, `ಶಿವಪ್ಪ ಒಳ್ಳೆಯ ಸಲಹೆ ನೀಡಿದ್ದಾರೆ. ಅವರ ಸಲಹೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ಶೀಘ್ರವಾಗಿ ಪರಿಶೀಲಿಸಲಿ~ ಎಂದು ವ್ಯಂಗ್ಯವಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>